AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?

ರಣವೀರ್ ಸಿಂಗ್ ಹಾಗೂ ದೀಪಿಕಾ ಖರೀದಿಸಿದ ಈ ಅಪಾರ್ಟ್​ಮೆಂಟ್ ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಅಪಾರ್ಟ್​ಮೆಂಟ್​ನಿಂದ ಅರಬ್ಬೀ ಸಮುದ್ರ ಕಾಣಿಸಲಿದೆ.

119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
ರಣವೀರ್-ದೀಪಿಕಾ
TV9 Web
| Edited By: |

Updated on:Jul 11, 2022 | 5:33 PM

Share

ರಣವೀರ್ ಸಿಂಗ್ (Ranveer Singh) ಹಾಗೂ ದೀಪಿಕಾ ಪಡುಕೋಣೆ (Deepika Padukone) ಮುಂಬೈನಲ್ಲಿ ಸೆಟಲ್ ಆಗಿದ್ದಾರೆ. ಸಿನಿಮಾ, ಜಾಹೀರಾತುಗಳಿಂದ ದೊಡ್ಡ ಸಂಭಾವನೆ ಪಡೆಯುವ ಈ ದಂಪತಿ ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಮುಂಬೈನಲ್ಲಿ ಹಲವು ಮನೆಗಳನ್ನು ಇವರು ಹೊಂದಿದ್ದಾರೆ. ಈಗ ಈ ದಂಪತಿ ಬರೋಬ್ಬರಿ 119 ಕೋಟಿ ರೂಪಾಯಿ ಕೊಟ್ಟು ಮುಂಬೈನ ಸಮುದ್ರದ ಅಂಚಿನಲ್ಲಿ ಐಷಾರಾಮಿ ಫ್ಲಾಟ್ ಖರೀದಿ ಮಾಡಿದ್ದಾರೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ.

ರಣವೀರ್ ಸಿಂಗ್ ಹಾಗೂ ದೀಪಿಕಾ ಖರೀದಿಸಿದ ಈ ಅಪಾರ್ಟ್​ಮೆಂಟ್ ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಅಪಾರ್ಟ್​ಮೆಂಟ್​ನಿಂದ ಅರಬ್ಬೀ ಸಮುದ್ರ ಕಾಣಿಸಲಿದೆ. ವಿಶೇಷ ಎಂದರೆ ರಣವೀರ್ ಹಾಗೂ ದೀಪಿಕಾ ಬಾಲಿವುಡ್​ನ ಸ್ಟಾರ್ ನಟರಾದ ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಅವರ ನೆರೆ ಮನೆಯವರಾಗಿದ್ದಾರೆ.

ರಣವೀರ್ ಸಿಂಗ್​ ಹಾಗೂ ದೀಪಿಕಾ ಪಡುಕೋಣೆ ಅಮೆರಿಕಕ್ಕೆ ತೆರಳಿದ್ದರು. ರಣವೀರ್ ಸಿಂಗ್ ಅಲ್ಲಿಯೇ ಬರ್ತ್​ಡೇ ಆಚರಿಸಿಕೊಂಡಿದ್ದರು. ಈಗ ಮುಂಬೈಗೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರು ಕೈಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಇಬ್ಬರೂ ಹೊಸ ಮನೆ ಖರೀದಿಸಿದ ಬಗ್ಗೆ ವರದಿ ಆಗಿದೆ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಮುಂಬೈನ ಬಾಂದ್ರಾ ಭಾಗದಲ್ಲಿ ಹಲವು ಬಾಲಿವುಡ್​ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಸಮುದ್ರ ತೀರಕ್ಕೆ ಬಾಂದ್ರಾ ತಾಗಿಕೊಂಡಿದೆ. ಈ ಪ್ರದೇಶ ತುಂಬಾ ಐಷಾರಾಮಿಯಾಗಿಯೂ ಇದೆ. ಈ ಕಾರಣಕ್ಕೆ ಅನೇಕ ಸೆಲೆಬ್ರಿಟಿಗಳು ಇಲ್ಲಿ ವಾಸ ಮಾಡಲು ಆದ್ಯತೆ ನೀಡುತ್ತಾರೆ. ಸಲ್ಮಾನ್ ಖಾನ್ ಅವರ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್ ಹಾಗೂ ಶಾರುಖ್ ಖಾನ್ ಅವರ ಮನ್ನತ್ ಬಂಗಲೆ ಬಾಂದ್ರಾದಲ್ಲಿಯೇ ಇದೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಅಪಾರ್ಟ್​ಮೆಂಟ್ ಒಂದರ 16, 17, 18 ಹಾಗೂ 19ನೇ ಫ್ಲೋರ್​ನಲ್ಲಿರುವ ಫ್ಲಾಟ್​ಗಳನ್ನು ಖರೀದಿ ಮಾಡಿದ್ದಾರೆ. ಇದರ ಒಟ್ಟೂ ಸುತ್ತಳತೆ 11,266 ಚದರ ಅಡಿ ಇದೆ. ಇನ್ನು 1,300 ಚದರ ಅಡಿಯ ಟೆರೇಸ್ ಕೂಡ ಇದೆ.

ಇದನ್ನೂ ಓದಿ:  ರಣವೀರ್ ಸಿಂಗ್​-ದೀಪಿಕಾ ಪಡುಕೋಣೆ ಮಧ್ಯೆ ಇರುವ ವಯಸ್ಸಿನ ಅಂತರವೆಷ್ಟು?

ಸಿನಿಮಾ ವಿಚಾರಕ್ಕೆ ಬರುವುದಾದರೆ ದೀಪಿಕಾ ಪಡುಕೋಣೆ ಅವರು ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರಕ್ಕೆ ನಾಯಕಿ. ಹೃತಿಕ್ ನಟನೆಯ ‘ಫೈಟರ್’ ಚಿತ್ರಕ್ಕೂ ಅವರು ಹೀರೋಯಿನ್ ಆಗಿದ್ದಾರೆ. ‘ಪ್ರಾಜೆಕ್ಟ್​ ಕೆ’ ಸೇರಿ ಇನ್ನೂ ಹಲವು ಚಿತ್ರಗಳು ಅವರ ಕೈಯಲ್ಲಿವೆ. ರಣವೀರ್ ಸಿಂಗ್ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’, ‘ಸರ್ಕಸ್​’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

Published On - 5:26 pm, Mon, 11 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ