AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಹೊಸ ತಂಡದಮೇಲೆ ಕಣ್ಣಿಟ್ಟ ರಣವೀರ್​ ಸಿಂಗ್​-ದೀಪಿಕಾ ಪಡುಕೋಣೆ

ಬಿಸಿಸಿಐ ಈ ಬಾರಿ ಎರಡು ಹೊಸ ಟೀಮ್​ಗಳನ್ನು ಪರಿಚಯಿಸುತ್ತಿದೆ. ಈ ಮೂಲಕ ತಂಡಗಳ ಸಂಖ್ಯೆ 10ಕ್ಕೆ ಏರಿಕೆ ಆಗುತ್ತಿದೆ. ಹೊಸ ತಂಡಗಳ ಮಾಲೀಕತ್ವದ ಬಗ್ಗೆ ಅನೇಕರು ಕಣ್ಣಿಟ್ಟಿದ್ದಾರೆ.

ಐಪಿಎಲ್​ ಹೊಸ ತಂಡದಮೇಲೆ ಕಣ್ಣಿಟ್ಟ ರಣವೀರ್​ ಸಿಂಗ್​-ದೀಪಿಕಾ ಪಡುಕೋಣೆ
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ
TV9 Web
| Edited By: |

Updated on:Oct 22, 2021 | 7:22 PM

Share

ಐಪಿಎಲ್​ಗೂ ಬಾಲಿವುಡ್​ಗೂ ಒಳ್ಳೆಯ ನಂಟಿದೆ. ಐಪಿಎಲ್​ನ ಸಾಕಷ್ಟು ಟೀಮ್​ಗಳ ಮಾಲೀಕರು ಬಾಲಿವುಡ್​ ನಟ-ನಟಿಯರು. ನಟನೆ ಜತೆಜತೆಗೆ ಐಪಿಎಲ್​ನಲ್ಲಿ ಫ್ರಾಂಚೈಸಿ ಹೊಂದಿದ್ದಾರೆ ಬಾಲಿವುಡ್​ ಮಂದಿ. ಶಾರುಖ್​ ಖಾನ್​, ಪ್ರೀತಿ ಜಿಂಟಾ ಈ ಸಾಲಿನಲ್ಲಿ ನಿಲ್ಲುತ್ತಾರೆ. ಇದಕ್ಕೆ ಈಗ ರಣವೀರ್​ ಸಿಂಗ್​ ಮತ್ತು ದೀಪಿಕಾ ಪಡುಕೋಣೆ ಹೊಸ ಸೇರ್ಪಡೆ ಆಗುವ ಸಾಧ್ಯತೆ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

ಬಿಸಿಸಿಐ ಈ ಬಾರಿ ಎರಡು ಹೊಸ ಟೀಮ್​ಗಳನ್ನು ಪರಿಚಯಿಸುತ್ತಿದೆ. ಈ ಮೂಲಕ ತಂಡಗಳ ಸಂಖ್ಯೆ 10ಕ್ಕೆ ಏರಿಕೆ ಆಗುತ್ತಿದೆ. ಹೊಸ ತಂಡಗಳ ಮಾಲೀಕತ್ವದ ಬಗ್ಗೆ ಅನೇಕರು ಕಣ್ಣಿಟ್ಟಿದ್ದಾರೆ. ಎರಡು ಹೊಸ ತಂಡಗಳ ಪೈಕಿ ಒಂದನ್ನು ರಣವೀರ್​-ದೀಪಿಕಾ ಖರೀದಿಸುವ ಆಲೋಚನೆಯಲ್ಲಿದ್ದಾರೆ ಎನ್ನುವ ಬಗ್ಗೆ ವರದಿ ಬಿತ್ತರವಾಗಿದೆ.

ಸೋಮವಾರ (ಅಕ್ಟೋಬರ್​ 25) ದುಬೈನಲ್ಲಿ ಐಪಿಎಲ್​ ತಂಡದ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೆ ರಣವೀರ್​ ಸಿಂಗ್​ ಹಾಗೂ ದೀಪಿಕಾ ಕೂಡ ಹೆಸರು ನೋಂದಾಯಿಸಿದ್ದಾರಂತೆ. ಒಂದೊಮ್ಮೆ ಇವರ ತೆಕ್ಕೆಗೆ ಒಂದು ತಂಡ ಸಿಕ್ಕರೆ ರಣವೀರ್​-ದೀಪಿಕಾ ಫ್ಯಾನ್ಸ್​ ಹೆಚ್ಚು ಖುಷಿ ಪಡುತ್ತಾರೆ.  ಶಾರುಖ್​ ಖಾನ್​ ಅವರು ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಪಂಜಾಬ್​ ಕಿಂಗ್ಸ್​ ತಂಡವನ್ನು ಪ್ರೀತಿ ಜಿಂಟಾ ಮುನ್ನಡೆಸುತ್ತಿದ್ದಾರೆ.

ದೀಪಿಕಾಗೆ ಕ್ರೀಡಾ ಹಿನ್ನೆಲೆ ಇದೆ. ಅವರ ತಂದೆ ಪ್ರಕಾಶ್​ ಪಡುಕೋಣೆ ಬ್ಯಾಡ್​ಮಿಂಟನ್​ ಆಟಗಾರ. ರಣವೀರ್​ ಸಿಂಗ್​ಗೂ ಕ್ರಿಕೆಟ್​ ಬಗ್ಗೆ ಆಸಕ್ತಿ ಇದೆ. 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಘಟನೆ ಆಧರಿಸಿ ‘83’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದಲ್ಲಿ ರಣವೀರ್​ ಸಿಂಗ್​ ಅವರು ಕಪಿಲ್​ ದೇವ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು, ಎನ್​ಬಿಎಗೂ ಅವರು ಭಾರತದ ರಾಯಭಾರಿ ಆಗಿದ್ದಾರೆ. ಈ ಕಾರಣಕ್ಕೆ ರಣವೀರ್​ ಸಿಂಗ್​ ಹಾಗೂ ದೀಪಿಕಾ ಕ್ರಿಕೆಟ್​ ಬಗ್ಗೆ ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ.

ಐಪಿಎಲ್​ 14 ಸೀಸನ್​ಗಳನ್ನು ಪೂರೈಸಿದೆ. 15ನೇ ಸೀಸನ್​ಗೆ ಮತ್ತೆರಡು ತಂಡಗಳು ಸೇರ್ಪಡೆ ಆಗಲಿವೆ. 2022ರಲ್ಲಿ 15ನೇ ಸೀಸನ್​ ನಡೆಯಲಿದೆ. ಇತ್ತೀಚೆಗಷ್ಟೇ 14ನೇ ಸೀಸನ್​ ಮುಗಿದಿದ್ದು, ಚೆನ್ನೈ ಸೂಪರ್​ ಕಿಂಗ್ಸ್​ ಗೆದ್ದಿದೆ.

ಇದನ್ನೂ ಓದಿ: ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

IPL 2022: ಹೊಸ ಐಪಿಎಲ್ ತಂಡ ಖರೀದಿಗೆ ಮುಂದಾದ ಜನಪ್ರಿಯ ಫುಟ್​ಬಾಲ್ ಕ್ಲಬ್

Published On - 3:50 pm, Fri, 22 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ