AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನ್ಯಾದಲ್ಲಿ ಕಾಣಿಸಿಕೊಂಡ ‘ಬಾಜಿರಾವ್ ಮಸ್ತಾನಿ’ ಜೋಡಿ

Deepika-Ranveer: ಬಾಲಿವುಡ್​ನ ಸ್ಟಾರ್ ಕಪಲ್ ದೀಪಿಕಾ ಪಡಕೋಣೆಧರಣವೀರ್ ಸಿಂಗ್ ಸದ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಕೀನ್ಯಾದಲ್ಲಿ ಫ್ಯಾನ್ಸ್ ಜೊತೆ ಫೋಸ್ ಕೊಡ್ತಾ ಇರೋ ಫೋಟೋ ಒಂದು ವೈರಲ್ ಆಗಿದೆ.

ಕೀನ್ಯಾದಲ್ಲಿ ಕಾಣಿಸಿಕೊಂಡ 'ಬಾಜಿರಾವ್ ಮಸ್ತಾನಿ' ಜೋಡಿ
ದೀಪಿಕಾ-ರಣ್ವೀರ್
TV9 Web
| Edited By: |

Updated on: Aug 30, 2023 | 5:19 PM

Share

ದೀಪಿಕಾ ಪಡುಕೋಣೆ (Deepika Padukone), ರಣವೀರ್ ಸಿಂಗ್ (Ranveer Singh) ಬಾಲಿವುಡ್​ನ (Bollywood) ಸ್ಟಾರ್ ಕಪಲ್. ಸದಾ ತಮ್ಮ ಪ್ರೇಮ್ ಕಹಾನಿಯಿಂದ ಸುದ್ದಿಯಲ್ಲಿರುವ ಜೋಡಿ ಸದ್ಯ ವಿದೇಶ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ‘ಬಾಜಿರಾವ್ ಮುಸ್ತಾನಿ’ ಜೋಡಿಯ ಕೀನ್ಯಾ ಪ್ರವಾಸದ ಫೋಟೋ ಭಾರಿ ವೈರಲ್ ಆಗಿದೆ. ದೀಪಿಕಾ, ರಣವೀರ್ ಇಬ್ಬರೂ ಫ್ಯಾನ್ಸ್ ಜೊತೆಗೆ ಫೋಟೋಕ್ಕೆ ಫೋಸ್ ಕೊಡುತ್ತಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದ ಫ್ಯಾನ್ಸ್ ಪೇಜ್ ಒಂದು ವೈರಲ್ ಮಾಡಿದೆ. ಫೋಟೊದಲ್ಲಿ ಕಪ್ಪು ಬಣ್ಣದ ಉಡುಗೆಯಲ್ಲಿ ದೀಪ್-ವೀರ್ ಮಿಂಚಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ಚಿತ್ರದ ಯಶಸ್ಸಿನ ನಂತರ ರಣವೀರ್ ಕುಟಂಬದೊಂದಿಗೆ ಸಮಯ ಕಳೆಯುತ್ತಿದ್ದು, ಕೀನ್ಯಾ ಪ್ರವಾಸದಲ್ಲಿದ್ದಾರೆ. ‘ಗೋಲಿಯೋನ್ ಕಿ ರಾಸಲೀಲಾ: ರಾಮ್- ಲೀಲಾ’ ಸಿನಿಮಾದ ಶೂಟಿಂಗ್ ವೇಳೆ ಇವರಿಬ್ಬರಿಗೂ ಪರಿಚಯವಾಗಿತ್ತು. ಬಳಿಕ ನವೆಂಬರ್ 14, 2018ರಲ್ಲಿ ಮದುವೆಯಾಗಿದ್ದಾರೆ. ಇತ್ತೀಚಿಗೆ ‘ಫ್ರೆಂಡ್ ಶಿಪ್ ಡೇ’ ಸಂದರ್ಭದಲ್ಲಿ ದೀಪಿಕಾ ರಣವೀರ್ ಸಿಂಗ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ನಡುವೆ ದೀಪಿಕಾ ಹಾಗೂ ರಣವೀರ್ ನಡುವೆ ಎಲ್ಲವೂ ಸರಿ ಇಲ್ಲ, ಸದ್ಯವೇ ಈ ಜೋಡಿ ವಿಚ್ಚೇದನ ಪಡೆಯುತ್ತಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಕೆಲವು ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ. ಈಗ ವಿದೇಶ ಪ್ರವಾಸ ಮಾಡುವ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.

ಇದನ್ನೂ ಓದಿ:‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನೋಡುವಾಗ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ಹೇಗಿತ್ತು?

ಸದ್ಯ ರಣವೀರ್ ಸಿಂಗ್, ಆಲಿಯಾ ಭಟ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ 336.21 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾದಲ್ಲಿ ಆಲಿಯಾ ಬೆಂಗಾಲಿ ಮೂಲದ ಪತ್ರಕರ್ತೆಯಾಗಿ ಕಾಣಿಸಿಕೊಂಡರೆ, ರಣವೀರ್ ಸಿಂಗ್ ಪಕ್ಕಾ ಪಂಜಾಬಿ ಲುಕ್ ನಲ್ಲಿ ಮಿಂಚಿದ್ದಾರೆ. ಕರಣ್ ಜೋಹರ್ ನಿರ್ದೇಶನದ ಈ ಸಿನಿಮಾದ ‘ತುಮ್ ಕ್ಯಾ ಮಿಲೆ’ ಹಾಡು ಉತ್ತಮ ಪ್ರತಿಕ್ರಿಯೆಗಳಿಸಿಕೊಂಡಿತ್ತು.

‘ಪಠಾಣ್’ಸಿನಿಮಾದ ನಂತರ ದೀಪಿಕಾ ‘ಕಲ್ಕಿ 2898 ಎಡಿ’ ಹಾಗೂ ‘ಫೈಟರ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ದೊಡ್ಡ ತಾರಾಬಳಗವನ್ನೇ ಹೊಂದಿದ್ದು, ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಪ್ರಭಾಸ್, ದೀಪಿಕಾ ಪಡಕೋಣೆ, ಅಮಿತಾಬ್ ಬಚ್ಚನ್, ದಿಶಾ ಪಟಾನಿ, ಕಮಲ್ ಹಾಸನ್, ದುಲ್ಕರ್ ಸಲ್ಮಾನ್ ಈ ಸಿನಿಮಾದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ