AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ‘ಸುಮ್ಮನೆ ಇರು, ಚಪ್ಪಲಿ ಏಟು ತಿಂತೀಯ’: ದೀಪಿಕಾ ಜೊತೆ ಸಿನಿಮಾ ನೋಡಲು ಬಂದ ರಣವೀರ್​ ಸಿಂಗ್​ಗೆ ಈ ಪರಿಸ್ಥಿತಿ ಯಾಕೆ?

Deepika Padukone: ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರ ನೋಡಿದ ಬಳಿಕ ದೀಪಿಕಾ ಪಡುಕೋಣೆಯ ಪ್ರತಿಕ್ರಿಯೆ ಹೇಗಿರಬಹುದು ಎಂಬ ಪ್ರಶ್ನೆ ರಣವೀರ್​ ಸಿಂಗ್​ಗೆ ಮೂಡಿದೆ. ಅದನ್ನು ಅವರು ಜನರ ಮುಂದಿಟ್ಟಿದ್ದಾರೆ.

Ranveer Singh: ‘ಸುಮ್ಮನೆ ಇರು, ಚಪ್ಪಲಿ ಏಟು ತಿಂತೀಯ’: ದೀಪಿಕಾ ಜೊತೆ ಸಿನಿಮಾ ನೋಡಲು ಬಂದ ರಣವೀರ್​ ಸಿಂಗ್​ಗೆ ಈ ಪರಿಸ್ಥಿತಿ ಯಾಕೆ?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಆಲಿಯಾ ಭಟ್​
ಮದನ್​ ಕುಮಾರ್​
|

Updated on: Jul 30, 2023 | 8:22 AM

Share

ನಟ ರಣವೀರ್​ ಸಿಂಗ್​ (Ranveer Singh) ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಜುಲೈ 28ರಂದು ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಅದನ್ನು ರಣವೀರ್​ ಸಿಂಗ್​ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಿಸ್​ ಮಾಡಿಕೊಂಡಿದ್ದರು. ಹಾಗಾಗಿ ಪತ್ನಿಯನ್ನು ವೀಕೆಂಡ್​ನಲ್ಲಿ ರಣವೀರ್ ಸಿಂಗ್​ ಅವರು ಸಿನಿಮಾಗೆ ಕರೆದುಕೊಂಡು ಹೋಗಿದ್ದಾರೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahani) ಸಿನಿಮಾ ನೋಡಿದ ಬಳಿಕ ದೀಪಿಕಾ ಪಡುಕೋಣೆಯ ಪ್ರತಿಕ್ರಿಯೆ ಹೇಗಿರಬಹುದು ಎಂಬ ಪ್ರಶ್ನೆ ರಣವೀರ್​ ಸಿಂಗ್​ಗೆ ಮೂಡಿದೆ. ಅದನ್ನು ಅವರು ಜನರ ಮುಂದಿಟ್ಟಿದ್ದಾರೆ ಹಾಗೂ ಮೂರು ಆಯ್ಕೆ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಹಂಚಿಕೊಂಡ ಈ ಫನ್ನಿ ಪಶ್ನೆ ವೈರಲ್​ ಆಗಿದೆ.

  • ‘ಆಕೆಯನ್ನು ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ ಸಿನಿಮಾ ತೋರಿಸಲು ಕರೆದುಕೊಂಡು ಹೋಗುತ್ತಿದ್ದೇನೆ’ 1. ಆಕೆಗೆ ಇಷ್ಟ ಆಗುತ್ತದೆ. 2. ಆಕೆಗೆ ತುಂಬಾ ಇಷ್ಟ ಆಗುತ್ತದೆ. 3. ಸುಮ್ಮನೆ ಇರು, ಚಪ್ಪಲಿ ಏಟು ತಿಂತೀಯ

ಹೀಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ರಣವೀರ್​ ಸಿಂಗ್​ ಅವರು ಪೋಸ್ಟ್​ ಮಾಡಿದ್ದಾರೆ. ಲಕ್ಷಾಂತರ ಜನರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಭಾನುವಾರ (ಜುಲೈ 30) ಬೆಳಗ್ಗೆ 7.50ರ ವೇಳೆಗೆ ಶೇಕಡ 28ರಷ್ಟು ಜನರು ‘ಆಕೆಗೆ ಇಷ್ಟ ಆಗುತ್ತದೆ’ ಎಂಬ ಆಯ್ಕೆಯನ್ನು ಕ್ಲಿಕ್​ ಮಾಡಿದ್ದಾರೆ. ‘ಆಕೆಗೆ ತುಂಬಾ ಇಷ್ಟ ಆಗುತ್ತದೆ’ ಎಂದು ಶೇಕಡ 38ರಷ್ಟು ಜನರು ಹೇಳಿದ್ದಾರೆ. ‘ಸುಮ್ಮನೆ ಇರು, ಚಪ್ಪಲಿ ಏಟು ತಿಂತೀಯ’ ಎಂಬ ಆಯ್ಕೆಯನ್ನು ಶೇಕಡ 34ರಷ್ಟು ಮಂದಿ ಕ್ಲಿಕ್​ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

ಕರಣ್​ ಜೋಹರ್​ ಅವರ ನಿರ್ದೇಶನದಲ್ಲಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಡಿಬಂದಿದೆ. ರಣವೀರ್​ ಸಿಂಗ್​ಗೆ ಜೋಡಿಯಾಗಿ ಆಲಿಯಾ ಭಟ್​ ನಟಿಸಿದ್ದಾರೆ. ಬಾಲಿವುಡ್​ನ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಕೇವಲ 11 ಕೋಟಿ ರೂಪಾಯಿ ಗಳಿಕೆ ಆಗಿದೆ. ಮಿಶ್ರ ಪ್ರತಿಕ್ರಿಯೆ ಸಿಕ್ಕಿರುವುದರಿಂದ ವಾರದ ದಿನಗಳಲ್ಲಿ ಕಲೆಕ್ಷನ್​ ಕುಸಿಯುವ ಸಾಧ್ಯತೆ ಇದೆ. ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್ ಅವರು ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈಗ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದಲ್ಲಿ ಮತ್ತೊಮ್ಮೆ ತೆರೆ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು