AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರಗಳ ನಟ ಜಾನಿ ಸಿನ್ಸ್ ಜೊತೆ ಅಭಿನಯಿಸಿದ ರಣವೀರ್ ಸಿಂಗ್; ವಿಡಿಯೋ ವೈರಲ್

ನೀಲಿ ಚಿತ್ರ ಸಿನಿಮಾಗಳಲ್ಲಿ ನಟಿಸುವ ಜಾನಿ ಸಿನ್ಸ್ ಜೊತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ ರಣವೀರ್ ಸಿಂಗ್. ಭಾರತೀಯ ಧಾರಾವಾಹಿ ಶೈಲಿಯಲ್ಲಿ ಈ ಜಾಹೀರಾತು ಮೂಡಿ ಬಂದಿದೆ. ಸದ್ಯ ಈ ಅಡ್ವಟೈಸ್​ಮೆಂಟ್ ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀಲಿ ಚಿತ್ರಗಳ ನಟ ಜಾನಿ ಸಿನ್ಸ್ ಜೊತೆ ಅಭಿನಯಿಸಿದ ರಣವೀರ್ ಸಿಂಗ್; ವಿಡಿಯೋ ವೈರಲ್
ಜಾನಿ-ರಣವೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 12, 2024 | 12:40 PM

Share

ನಟ ರಣವೀರ್ ಸಿಂಗ್ (Ranveer Singh) ಅವರದ್ದು ವಿಚಿತ್ರ ವ್ಯಕ್ತಿತ್ವ. ಅವರು ಮಾಡಿಸಿದ್ದ ಬೆತ್ತಲೆ ಫೋಟೋಶೂಟ್ ಸಾಕಷ್ಟು ಸುದ್ದಿ ಆಗಿತ್ತು. ಅವರ ವಿರುದ್ಧ ಕೇಸ್ ಕೂಡ ದಾಖಲಾಯಿತು. ಈಗ ಇಂಥದ್ದೇ ಕಾರಣಕ್ಕೆ ಅವರು ಸುದ್ದಿಯಲ್ಲಿದ್ದಾರೆ. ನೀಲಿ ಚಿತ್ರ ಸಿನಿಮಾಗಳಲ್ಲಿ ನಟಿಸುವ ಜಾನಿ ಸಿನ್ಸ್ ಜೊತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತೀಯ ಧಾರಾವಾಹಿ ಶೈಲಿಯಲ್ಲಿ ಈ ಜಾಹೀರಾತು ಮೂಡಿ ಬಂದಿದೆ. ಸದ್ಯ ಈ ಅಡ್ವಟೈಸ್​ಮೆಂಟ್ ಸಾಕಷ್ಟು ಟ್ರೆಂಡ್ ಸೃಷ್ಟಿ ಮಾಡಿದೆ.

ಲೈಂಗಿಕ ಶಕ್ತಿ ಹೆಚ್ಚಿಸುವ ಬ್ರ್ಯಾಂಡ್ ಒಂದಕ್ಕೆ ರಣವೀರ್ ಸಿಂಗ್ ಅವರು ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಇದರ ಪ್ರಚಾರಕ್ಕೆ ಹೊಸ ತಂತ್ರ ಉಪಯೋಗಿಸಲಾಗಿದೆ. ಜಾನಿ ಸಿನ್ಸ್ ಹಾಗೂ ಅವರ ಪತ್ನಿಯ ಜಗಳ ನಡೆಯುತ್ತಾ ಇರುತ್ತದೆ. ಜಾನಿ ಸಿನ್ಸ್ ಪತ್ನಿ ಮನೆ ಬಿಟ್ಟು ಹೋಗಲು ನಿರ್ಧರಿಸುತ್ತಾರೆ. ಜಾನಿ ಸಿನ್ಸ್​ ಲೈಂಗಿಕವಾಗಿ ಸಮರ್ಥನಲ್ಲ ಎನ್ನುವ ಕಾರಣಕ್ಕೆ ಅವರು ಈ ನಿರ್ಧಾರ ತೆಗೆದುಕೊಂಡಿರುತ್ತಾರೆ.

ಇದನ್ನೂ ಓದಿ: ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ

ಈ ವೇಳೆ ಆಕೆ ಆಯತಪ್ಪಿ ಬಾಲ್ಕನಿಯಿಂದ ಬೀಳುತ್ತಾಳೆ. ಆಗ ಜಾನಿ ಸಿನ್ಸ್ ಮಾತ್ರೆ ತಿಂದು ಬಾಲ್ಕನಿಯಿಂದ ಜಂಪ್ ಮಾಡುತ್ತಾರೆ. ನೆಲಕ್ಕೆ ಬೀಳುವುದರೊಳಗೆ ಪತ್ನಿಯನ್ನು ಖುಷಿಪಡಿಸುತ್ತಾರೆ ಜಾನಿ. ಈ ರೀತಿಯಲ್ಲಿ ಜಾಹೀರಾತು ಮೂಡಿ ಬಂದಿದೆ. ಇದು ಸಖತ್ ಫನ್ನಿ ಆಗಿದೆ. ಕೆಲವರು ಇದನ್ನು ಇಷ್ಟಪಟ್ಟರೆ ಇನ್ನೂ ಕೆಲವರು ರಣವೀರ್ ಸಿಂಗ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಸದ್ಯ ರಣವೀರ್ ಸಿಂಗ್ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಫರ್ಹಾನ್ ಅಖ್ತರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಶಾರುಖ್ ಖಾನ್ ಮಾಡಿದ್ದ ಪಾತ್ರವನ್ನು ಈಗ ರಣವೀರ್ ಸಿಂಗ್ ಮಾಡುತ್ತಿದ್ದಾರೆ. 2025ರಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಸಾಲು ಸಾಲು ಸೋಲು ಕಂಡಿರುವುದರಿಂದ ರಣವೀರ್ ಸಿಂಗ್​ಗೆ ದೊಡ್ಡ ಗೆಲುವು ಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Mon, 12 February 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ