AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ರಣವೀರ್​ ಸಿಂಗ್​ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​
ರಣವೀರ್ ಸಿಂಗ್​. ಅಲ್ಲು ಅರ್ಜುನ್​
TV9 Web
| Edited By: |

Updated on: Feb 21, 2022 | 8:51 AM

Share

ಕಳೆದ ವರ್ಷ ಡಿ.17ರಂದು ತೆರೆಕಂಡ ‘ಪುಷ್ಪ’ ಸಿನಿಮಾ (Pushpa Movie) ಮಾಡಿರುವ ಸಾಧನೆ ಒಂದೆರಡಲ್ಲ. ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿದ್ದು ಆ ಚಿತ್ರದ ಹೆಚ್ಚುಗಾರಿಕೆ. ಹಿಂದಿಗೆ ಡಬ್​ ಆಗಿ ಬಾಲಿವುಡ್​​ ಸಿನಿಮಾಗಳಿಗೂ ಭರ್ಜರಿ ಪೈಪೋಟಿ ನೀಡುವ ಮೂಲಕ ದೊಡ್ಡ ಮಟ್ಟದಲ್ಲಿ ಈ ಚಿತ್ರ ಗಮನ ಸೆಳೆಯಿತು. ಇದಿಷ್ಟು ಹಣಕಾಸಿನ ಸಾಧನೆಯಾದರೆ, ಪ್ರಶಸ್ತಿ ಪಡೆಯುವಲ್ಲಿಯೂ ‘ಪುಷ್ಪ’ ಸಿನಿಮಾ ಹಿಂದೆ ಬಿದ್ದಿಲ್ಲ. ಪ್ರತಿಷ್ಠಿತ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ (Dadasaheb Phalke International Film Festival Awards) ಪಡೆದುಕೊಂಡು ಈ ಸಿನಿಮಾ ಬೀಗುತ್ತಿದೆ. ಅದೇ ರೀತಿ ಬಾಲಿವುಡ್​ನ ಖ್ಯಾತ ನಟ ರಣಬೀರ್​ ಸಿಂಗ್​ (Ranveer Singh) ಕೂಡ ಪ್ರಶಸ್ತಿ ಪಡೆದು ಸಂಭ್ರಮಿಸಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ‘ಶೇರ್​ಷಾ’, ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ ಹಲವು ಸಿನಿಮಾಗಳು ಅವಾರ್ಡ್​ ಪಡೆದಿವೆ. ಜೊತೆಗೆ ವೆಬ್​ ಸಿರೀಸ್​ ಮತ್ತು ಧಾರಾವಾಹಿಗಳಿಗೂ ಮನ್ನಣೆ ಸಿಕ್ಕಿದೆ. 2022ರ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ಎಲ್ಲರಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ರಣವೀರ್​ ಸಿಂಗ್​ ಅವರು ನಟಿಸಿದ್ದ ‘83’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಅಂದುಕೊಂಡ ಮಟ್ಟಕ್ಕೆ ಈ ಚಿತ್ರ ಗಳಿಕೆ ಮಾಡಲಿಲ್ಲ. ವಿಮರ್ಶೆಯ ದೃಷ್ಟಿಯಿಂದ ‘83’ ಸಿನಿಮಾದ ಗೆಲುವು ದೊಡ್ಡದು. ಅದೇ ರೀತಿ ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ಅವರ ಅಭಿನಯಕ್ಕೆ ಜನರು ಬಹುಪರಾಕ್​ ಎಂದಿದ್ದಾರೆ. ಈಗ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಕೂಡ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

ವರ್ಷದ ಸಿನಿಮಾ: ಪುಷ್ಪ

ಅತ್ಯುತ್ತಮ ಸಿನಿಮಾ: ಶೇರ್​ಷಾ

ಅತ್ಯುತ್ತಮ ನಟ: ರಣವೀರ್​ ಸಿಂಗ್​

ಅತ್ಯುತ್ತಮ ನಟಿ ಕೃತಿ ಸನೋನ್​

ಅತ್ಯುತ್ತಮ ನಿರ್ದೇಶಕ: ಕೆನ್​ ಘೋಷ್​

ಚಿತ್ರರಂಗಕ್ಕೆ ಅಪಾರ ಕೊಡುಗೆ: ಆಶಾ ಪರೇಖ್​

ಅತ್ಯುತ್ತಮ ಪೋಷಕ ನಟ: ಸತೀಶ್​ ಕೌಶಿಕ್​

ಅತ್ಯುತ್ತಮ ಫೋಷಕ ನಟಿ: ಲಾರಾ ದತ್ತಾ

ಅತ್ಯುತ್ತಮ ಖಳ ನಟ: ಆಯುಷ್​ ಶರ್ಮಾ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ಚಿತ್ರ: ಸರ್ದಾರ್​ ಉದ್ಧಮ್​

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟ: ಸಿದ್ದಾರ್ಥ್​ ಮಲ್ಹೋತ್ರ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟಿ ಕಿಯಾರಾ ಅಡ್ವಾಣಿ

ಜನರ ಆಯ್ಕೆಯ ಅತ್ಯುತ್ತಮ ನಟ: ಅಭಿಮನ್ಯು ದಾಸಾನಿ

ಜನರ ಆಯ್ಕೆಯ ಅತ್ಯುತ್ತಮ ನಟಿ: ರಾಧಿಕಾ ಮದನ್​

ಅತ್ಯುತ್ತಮ ಹೊಸ ನಟ: ಅಹಾನ್​ ಶೆಟ್ಟಿ

ಅತ್ಯುತ್ತಮ ವಿದೇಶಿ ಸಿನಿಮಾ: ಅನದರ್​ ರೌಂಡ್​

ಅತ್ಯುತ್ತಮ ವೆಬ್​ ಸಿರೀಸ್​: ಕ್ಯಾಂಡಿ

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟ: ಮನೋಜ್​ ಭಾಜಪೇಯಿ​

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟಿ: ರವೀನಾ ಟಂಡನ್​

ವರ್ಷದ ಅತ್ಯುತ್ತಮ ಟಿವಿ ಧಾರಾವಾಹಿ: ಅನುಪಮಾ

ಕಿರುತೆರೆಯ ಅತ್ಯುತ್ತಮ ನಟ: ಶಾಹೀರ್​ ಶೇಖ್​

ಕಿರುತೆರೆಯ ಅತ್ಯುತ್ತಮ ನಟಿ: ಶ್ರದ್ಧಾ ಆರ್ಯ

ಕಿರುತೆರೆಯ ಭರವಸೆಯ ನಟ: ಧೀರಜ್​ ಧೂಪರ್​

ಕಿರುತೆರೆಯ ಭರವಸೆಯ ನಟಿ: ರೂಪಾಲಿ ಗಂಗೂಲಿ

ಅತ್ಯುತ್ತಮ ಕಿರುಚಿತ್ರ: ಪೌಲಿ

ಅತ್ಯುತ್ತಮ ಹಿನ್ನೆಲೆ ಗಾಯಕ: ವಿಶಾಲ್​ ಮಿಶ್ರಾ

ಅತ್ಯುತ್ತಮ ಹಿನ್ನೆಲೆ ಗಾಯಕಿ: ಕನಿಕಾ ಕಪೂರ್​

ಅತ್ಯುತ್ತಮ ಛಾಯಾಗ್ರಹಣ: ಜಯಕೃಷ್ಣ ಗುಮ್ಮಡಿ

ಇದನ್ನೂ ಓದಿ:

83 Movie Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

Pushpa Movie Review: ‘ಪುಷ್ಪ’ ಅಂದ್ರೆ ಫ್ಲವರ್ ಅಲ್ಲ, ಅದೊಂದು ಶ್ರಮದಾಯಕ ದೀರ್ಘ ಪಯಣ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು