AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ರಣವೀರ್​ ಸಿಂಗ್​ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​
ರಣವೀರ್ ಸಿಂಗ್​. ಅಲ್ಲು ಅರ್ಜುನ್​
TV9 Web
| Edited By: |

Updated on: Feb 21, 2022 | 8:51 AM

Share

ಕಳೆದ ವರ್ಷ ಡಿ.17ರಂದು ತೆರೆಕಂಡ ‘ಪುಷ್ಪ’ ಸಿನಿಮಾ (Pushpa Movie) ಮಾಡಿರುವ ಸಾಧನೆ ಒಂದೆರಡಲ್ಲ. ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿದ್ದು ಆ ಚಿತ್ರದ ಹೆಚ್ಚುಗಾರಿಕೆ. ಹಿಂದಿಗೆ ಡಬ್​ ಆಗಿ ಬಾಲಿವುಡ್​​ ಸಿನಿಮಾಗಳಿಗೂ ಭರ್ಜರಿ ಪೈಪೋಟಿ ನೀಡುವ ಮೂಲಕ ದೊಡ್ಡ ಮಟ್ಟದಲ್ಲಿ ಈ ಚಿತ್ರ ಗಮನ ಸೆಳೆಯಿತು. ಇದಿಷ್ಟು ಹಣಕಾಸಿನ ಸಾಧನೆಯಾದರೆ, ಪ್ರಶಸ್ತಿ ಪಡೆಯುವಲ್ಲಿಯೂ ‘ಪುಷ್ಪ’ ಸಿನಿಮಾ ಹಿಂದೆ ಬಿದ್ದಿಲ್ಲ. ಪ್ರತಿಷ್ಠಿತ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ (Dadasaheb Phalke International Film Festival Awards) ಪಡೆದುಕೊಂಡು ಈ ಸಿನಿಮಾ ಬೀಗುತ್ತಿದೆ. ಅದೇ ರೀತಿ ಬಾಲಿವುಡ್​ನ ಖ್ಯಾತ ನಟ ರಣಬೀರ್​ ಸಿಂಗ್​ (Ranveer Singh) ಕೂಡ ಪ್ರಶಸ್ತಿ ಪಡೆದು ಸಂಭ್ರಮಿಸಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ‘ಶೇರ್​ಷಾ’, ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ ಹಲವು ಸಿನಿಮಾಗಳು ಅವಾರ್ಡ್​ ಪಡೆದಿವೆ. ಜೊತೆಗೆ ವೆಬ್​ ಸಿರೀಸ್​ ಮತ್ತು ಧಾರಾವಾಹಿಗಳಿಗೂ ಮನ್ನಣೆ ಸಿಕ್ಕಿದೆ. 2022ರ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ಎಲ್ಲರಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ರಣವೀರ್​ ಸಿಂಗ್​ ಅವರು ನಟಿಸಿದ್ದ ‘83’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಅಂದುಕೊಂಡ ಮಟ್ಟಕ್ಕೆ ಈ ಚಿತ್ರ ಗಳಿಕೆ ಮಾಡಲಿಲ್ಲ. ವಿಮರ್ಶೆಯ ದೃಷ್ಟಿಯಿಂದ ‘83’ ಸಿನಿಮಾದ ಗೆಲುವು ದೊಡ್ಡದು. ಅದೇ ರೀತಿ ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ಅವರ ಅಭಿನಯಕ್ಕೆ ಜನರು ಬಹುಪರಾಕ್​ ಎಂದಿದ್ದಾರೆ. ಈಗ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಕೂಡ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

ವರ್ಷದ ಸಿನಿಮಾ: ಪುಷ್ಪ

ಅತ್ಯುತ್ತಮ ಸಿನಿಮಾ: ಶೇರ್​ಷಾ

ಅತ್ಯುತ್ತಮ ನಟ: ರಣವೀರ್​ ಸಿಂಗ್​

ಅತ್ಯುತ್ತಮ ನಟಿ ಕೃತಿ ಸನೋನ್​

ಅತ್ಯುತ್ತಮ ನಿರ್ದೇಶಕ: ಕೆನ್​ ಘೋಷ್​

ಚಿತ್ರರಂಗಕ್ಕೆ ಅಪಾರ ಕೊಡುಗೆ: ಆಶಾ ಪರೇಖ್​

ಅತ್ಯುತ್ತಮ ಪೋಷಕ ನಟ: ಸತೀಶ್​ ಕೌಶಿಕ್​

ಅತ್ಯುತ್ತಮ ಫೋಷಕ ನಟಿ: ಲಾರಾ ದತ್ತಾ

ಅತ್ಯುತ್ತಮ ಖಳ ನಟ: ಆಯುಷ್​ ಶರ್ಮಾ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ಚಿತ್ರ: ಸರ್ದಾರ್​ ಉದ್ಧಮ್​

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟ: ಸಿದ್ದಾರ್ಥ್​ ಮಲ್ಹೋತ್ರ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟಿ ಕಿಯಾರಾ ಅಡ್ವಾಣಿ

ಜನರ ಆಯ್ಕೆಯ ಅತ್ಯುತ್ತಮ ನಟ: ಅಭಿಮನ್ಯು ದಾಸಾನಿ

ಜನರ ಆಯ್ಕೆಯ ಅತ್ಯುತ್ತಮ ನಟಿ: ರಾಧಿಕಾ ಮದನ್​

ಅತ್ಯುತ್ತಮ ಹೊಸ ನಟ: ಅಹಾನ್​ ಶೆಟ್ಟಿ

ಅತ್ಯುತ್ತಮ ವಿದೇಶಿ ಸಿನಿಮಾ: ಅನದರ್​ ರೌಂಡ್​

ಅತ್ಯುತ್ತಮ ವೆಬ್​ ಸಿರೀಸ್​: ಕ್ಯಾಂಡಿ

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟ: ಮನೋಜ್​ ಭಾಜಪೇಯಿ​

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟಿ: ರವೀನಾ ಟಂಡನ್​

ವರ್ಷದ ಅತ್ಯುತ್ತಮ ಟಿವಿ ಧಾರಾವಾಹಿ: ಅನುಪಮಾ

ಕಿರುತೆರೆಯ ಅತ್ಯುತ್ತಮ ನಟ: ಶಾಹೀರ್​ ಶೇಖ್​

ಕಿರುತೆರೆಯ ಅತ್ಯುತ್ತಮ ನಟಿ: ಶ್ರದ್ಧಾ ಆರ್ಯ

ಕಿರುತೆರೆಯ ಭರವಸೆಯ ನಟ: ಧೀರಜ್​ ಧೂಪರ್​

ಕಿರುತೆರೆಯ ಭರವಸೆಯ ನಟಿ: ರೂಪಾಲಿ ಗಂಗೂಲಿ

ಅತ್ಯುತ್ತಮ ಕಿರುಚಿತ್ರ: ಪೌಲಿ

ಅತ್ಯುತ್ತಮ ಹಿನ್ನೆಲೆ ಗಾಯಕ: ವಿಶಾಲ್​ ಮಿಶ್ರಾ

ಅತ್ಯುತ್ತಮ ಹಿನ್ನೆಲೆ ಗಾಯಕಿ: ಕನಿಕಾ ಕಪೂರ್​

ಅತ್ಯುತ್ತಮ ಛಾಯಾಗ್ರಹಣ: ಜಯಕೃಷ್ಣ ಗುಮ್ಮಡಿ

ಇದನ್ನೂ ಓದಿ:

83 Movie Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

Pushpa Movie Review: ‘ಪುಷ್ಪ’ ಅಂದ್ರೆ ಫ್ಲವರ್ ಅಲ್ಲ, ಅದೊಂದು ಶ್ರಮದಾಯಕ ದೀರ್ಘ ಪಯಣ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು