AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ಗೆ ಒಂದಾದಮೇಲೆ ಒಂದು ಶಾಕ್; ಅರ್ಧಕ್ಕೆ ನಿಂತ ಮತ್ತೊಂದು ಬಿಗ್ ಬಜೆಟ್ ಸಿನಿಮಾ

ರಣವೀರ್ ಸಿಂಗ್ ಅವರು ಪ್ರಶಾಂತ್ ವರ್ಮಾ ಜೊತೆ ಸಿನಿಮಾ ಮಾಡಬೇಕಿತ್ತು. ಆದರೆ, ಈ ಚಿತ್ರ ಅರ್ಧಕ್ಕೆ ನಿಂತಿದೆ. ಖ್ಯಾತ ತಮಿಳು ನಿರ್ದೇಶಕ ಶಂಕರ್ ಜೊತೆ ರಣವೀರ್ ಸಿಂಗ್ ಮಾಡಬೇಕಿದ್ದ ಚಿತ್ರವೂ ಅರ್ಧಕ್ಕೆ ನಿಂತಿದೆಯಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ವತಃ ಶಂಕರ್ ಅವರೇ ರಿವೀಲ್ ಮಾಡಿದ್ದಾರೆ.

ರಣವೀರ್​ಗೆ ಒಂದಾದಮೇಲೆ ಒಂದು ಶಾಕ್; ಅರ್ಧಕ್ಕೆ ನಿಂತ ಮತ್ತೊಂದು ಬಿಗ್ ಬಜೆಟ್ ಸಿನಿಮಾ
ಶಂಕರ್-ರಣವೀರ್
ರಾಜೇಶ್ ದುಗ್ಗುಮನೆ
|

Updated on: Jul 03, 2024 | 1:48 PM

Share

ರಣವೀರ್ ಸಿಂಗ್ ನಟನೆಯ ಸಿನಿಮಾಗಳು ಒಂದಾದಮೇಲೆ ಒಂದರಂತೆ ಅರ್ಧಕ್ಕೆ ನಿಲ್ಲುತ್ತಿವೆ. ಅವರು ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಜೊತೆ ಸಿನಿಮಾ ಒಂದನ್ನು ಮಾಡಬೇಕಿತ್ತು. ಆದರೆ, ಹೇಳದೇ ಕೇಳದೇ ರಣವೀರ್ ಸಿಂಗ್ ಚಿತ್ರದಿಂದ ಹೊರ ಹೋಗಿದ್ದಾರೆ. ಈಗ ಅವರ ಮತ್ತೊಂದು ಸಿನಿಮಾ ಅರ್ಧಕ್ಕೆ ನಿಂತಿರೋ ಬಗ್ಗೆ ಮಾಹಿತಿ ಸಿಕ್ಕಿದೆ. ಖ್ಯಾತ ತಮಿಳು ನಿರ್ದೇಶಕ ಶಂಕರ್ ಜೊತೆ ರಣವೀರ್ ಸಿಂಗ್ ಮಾಡಬೇಕಿದ್ದ ಚಿತ್ರವೂ ಅರ್ಧಕ್ಕೆ ನಿಂತಿದೆಯಂತೆ.

ತಮಿಳಿನಲ್ಲಿ ರಿಲೀಸ್ ಆಗಿದ್ದ ‘ಅಪರಿಚಿತ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ವಿಕ್ರಮ್ ನಟನೆಯ ಈ ಚಿತ್ರಕ್ಕೆ ಶಂಕರ್ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲು ಶಂಕರ್ ಮುಂದಾಗಿದ್ದರು. ಹಿಂದಿ ರಿಮೇಕ್​ನಲ್ಲಿ ವಿಕ್ರಮ್ ಜಾಗದಲ್ಲಿ ರಣವೀರ್ ಸಿಂಗ್ ನಟಿಸಬೇಕಿತ್ತು. ಆದರೆ, ನಿರ್ಮಾಪಕರ ಬೇಡಿಕೆಯಿಂದ ಈ ಸಿನಿಮಾ ಅರ್ಧಕ್ಕೆ ನಿಂತಿದೆ.

‘ಅಪರಿಚಿತ್ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡುವ ಆಲೋಚನೆ ಇತ್ತು. ಇದರ ಘೋಷಣೆ ಆದ ಬಳಿಕ ಹಲವು ಸಿನಿಮಾಗಳು ಬಂದವು. ಅಪರಿಚಿತ್ ಚಿತ್ರಕ್ಕಿಂತ ದೊಡ್ಡ ಸಿನಿಮಾ ಮಾಡಬೇಕು ಎಂಬುದು ನಮ್ಮ ನಿರ್ಮಾಪಕರ ಉದ್ದೇಶ. ಹೀಗಾಗಿ ಆ ಚಿತ್ರ ಹೋಲ್ಡ್​ನಲ್ಲಿ ಇದೆ. ಈ ಎರಡು (ಅವರ ನಿರ್ದೇಶನದ ‘ಇಂಡಿಯನ್ 2’ ಹಾಗೂ ‘ಗೇಮ್ ಚೇಂಜರ್) ಸಿನಿಮಾಗಳು ರಿಲೀಸ್ ಆದ ಬಳಿಕ ಹೇಗೆ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ ರಣವೀರ್.

ಇದನ್ನೂ ಓದಿ: ರಣವೀರ್ ಸಿಂಗ್ ಮೊದಲ ಆಡಿಷನ್ ಹೇಗಿತ್ತು ನೋಡಿ; ನೀವು ನಗೋದು ಗ್ಯಾರಂಟಿ

ರಣವೀರ್ ಸಿಂಗ್ ಕೂಡ ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಸಿಂಗಂ ಅಗೇನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ದೇವಗನ್, ಅಕ್ಷಯ್ ಕುಮಾರ್, ದೀಪಿಕಾ ಪಡುಕೋಣೆ ಮೊದಲಾದವರು ಬಣ್ಣ ಹಚ್ಚಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನ ಈ ಚಿತ್ರಕ್ಕೆ ಇದೆ. ದೀಪಾವಳಿಗೆ ಸಿನಿಮಾ ರಿಲೀಸ್ ಆಗಬೇಕಿದೆ.  ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಚಿತ್ರದಲ್ಲಿ ರಣವೀರ್ ಬಣ್ಣ ಹಚ್ಚುತ್ತಿದ್ದಾರೆ. ಇನ್ನು, ಶೀಘ್ರವೇ ದೀಪಿಕಾ ಪಡುಕೋಣೆ ತಾಯಿ ಆಗಲಿದ್ದಾರೆ. ಇದು ರಣವೀರ್ ಸಿಂಗ್ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ