ರಣವೀರ್​ಗೆ ಒಂದಾದಮೇಲೆ ಒಂದು ಶಾಕ್; ಅರ್ಧಕ್ಕೆ ನಿಂತ ಮತ್ತೊಂದು ಬಿಗ್ ಬಜೆಟ್ ಸಿನಿಮಾ

ರಣವೀರ್ ಸಿಂಗ್ ಅವರು ಪ್ರಶಾಂತ್ ವರ್ಮಾ ಜೊತೆ ಸಿನಿಮಾ ಮಾಡಬೇಕಿತ್ತು. ಆದರೆ, ಈ ಚಿತ್ರ ಅರ್ಧಕ್ಕೆ ನಿಂತಿದೆ. ಖ್ಯಾತ ತಮಿಳು ನಿರ್ದೇಶಕ ಶಂಕರ್ ಜೊತೆ ರಣವೀರ್ ಸಿಂಗ್ ಮಾಡಬೇಕಿದ್ದ ಚಿತ್ರವೂ ಅರ್ಧಕ್ಕೆ ನಿಂತಿದೆಯಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ವತಃ ಶಂಕರ್ ಅವರೇ ರಿವೀಲ್ ಮಾಡಿದ್ದಾರೆ.

ರಣವೀರ್​ಗೆ ಒಂದಾದಮೇಲೆ ಒಂದು ಶಾಕ್; ಅರ್ಧಕ್ಕೆ ನಿಂತ ಮತ್ತೊಂದು ಬಿಗ್ ಬಜೆಟ್ ಸಿನಿಮಾ
ಶಂಕರ್-ರಣವೀರ್
Follow us
|

Updated on: Jul 03, 2024 | 1:48 PM

ರಣವೀರ್ ಸಿಂಗ್ ನಟನೆಯ ಸಿನಿಮಾಗಳು ಒಂದಾದಮೇಲೆ ಒಂದರಂತೆ ಅರ್ಧಕ್ಕೆ ನಿಲ್ಲುತ್ತಿವೆ. ಅವರು ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಜೊತೆ ಸಿನಿಮಾ ಒಂದನ್ನು ಮಾಡಬೇಕಿತ್ತು. ಆದರೆ, ಹೇಳದೇ ಕೇಳದೇ ರಣವೀರ್ ಸಿಂಗ್ ಚಿತ್ರದಿಂದ ಹೊರ ಹೋಗಿದ್ದಾರೆ. ಈಗ ಅವರ ಮತ್ತೊಂದು ಸಿನಿಮಾ ಅರ್ಧಕ್ಕೆ ನಿಂತಿರೋ ಬಗ್ಗೆ ಮಾಹಿತಿ ಸಿಕ್ಕಿದೆ. ಖ್ಯಾತ ತಮಿಳು ನಿರ್ದೇಶಕ ಶಂಕರ್ ಜೊತೆ ರಣವೀರ್ ಸಿಂಗ್ ಮಾಡಬೇಕಿದ್ದ ಚಿತ್ರವೂ ಅರ್ಧಕ್ಕೆ ನಿಂತಿದೆಯಂತೆ.

ತಮಿಳಿನಲ್ಲಿ ರಿಲೀಸ್ ಆಗಿದ್ದ ‘ಅಪರಿಚಿತ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ವಿಕ್ರಮ್ ನಟನೆಯ ಈ ಚಿತ್ರಕ್ಕೆ ಶಂಕರ್ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲು ಶಂಕರ್ ಮುಂದಾಗಿದ್ದರು. ಹಿಂದಿ ರಿಮೇಕ್​ನಲ್ಲಿ ವಿಕ್ರಮ್ ಜಾಗದಲ್ಲಿ ರಣವೀರ್ ಸಿಂಗ್ ನಟಿಸಬೇಕಿತ್ತು. ಆದರೆ, ನಿರ್ಮಾಪಕರ ಬೇಡಿಕೆಯಿಂದ ಈ ಸಿನಿಮಾ ಅರ್ಧಕ್ಕೆ ನಿಂತಿದೆ.

‘ಅಪರಿಚಿತ್ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡುವ ಆಲೋಚನೆ ಇತ್ತು. ಇದರ ಘೋಷಣೆ ಆದ ಬಳಿಕ ಹಲವು ಸಿನಿಮಾಗಳು ಬಂದವು. ಅಪರಿಚಿತ್ ಚಿತ್ರಕ್ಕಿಂತ ದೊಡ್ಡ ಸಿನಿಮಾ ಮಾಡಬೇಕು ಎಂಬುದು ನಮ್ಮ ನಿರ್ಮಾಪಕರ ಉದ್ದೇಶ. ಹೀಗಾಗಿ ಆ ಚಿತ್ರ ಹೋಲ್ಡ್​ನಲ್ಲಿ ಇದೆ. ಈ ಎರಡು (ಅವರ ನಿರ್ದೇಶನದ ‘ಇಂಡಿಯನ್ 2’ ಹಾಗೂ ‘ಗೇಮ್ ಚೇಂಜರ್) ಸಿನಿಮಾಗಳು ರಿಲೀಸ್ ಆದ ಬಳಿಕ ಹೇಗೆ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ ರಣವೀರ್.

ಇದನ್ನೂ ಓದಿ: ರಣವೀರ್ ಸಿಂಗ್ ಮೊದಲ ಆಡಿಷನ್ ಹೇಗಿತ್ತು ನೋಡಿ; ನೀವು ನಗೋದು ಗ್ಯಾರಂಟಿ

ರಣವೀರ್ ಸಿಂಗ್ ಕೂಡ ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಸಿಂಗಂ ಅಗೇನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಜಯ್ ದೇವಗನ್, ಅಕ್ಷಯ್ ಕುಮಾರ್, ದೀಪಿಕಾ ಪಡುಕೋಣೆ ಮೊದಲಾದವರು ಬಣ್ಣ ಹಚ್ಚಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನ ಈ ಚಿತ್ರಕ್ಕೆ ಇದೆ. ದೀಪಾವಳಿಗೆ ಸಿನಿಮಾ ರಿಲೀಸ್ ಆಗಬೇಕಿದೆ.  ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಚಿತ್ರದಲ್ಲಿ ರಣವೀರ್ ಬಣ್ಣ ಹಚ್ಚುತ್ತಿದ್ದಾರೆ. ಇನ್ನು, ಶೀಘ್ರವೇ ದೀಪಿಕಾ ಪಡುಕೋಣೆ ತಾಯಿ ಆಗಲಿದ್ದಾರೆ. ಇದು ರಣವೀರ್ ಸಿಂಗ್ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ