AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಸಿನಿಮಾ ಕೈಬಿಟ್ಟ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ರಣವೀರ್​ ಸಿಂಗ್​

ಹಲವು ತಂಡಗಳ ಜೊತೆ ಮಾತುಕಥೆ ಮಾಡಿದರೂ ರಣವೀರ್​ ಸಿಂಗ್​ ಅವರಿಗೆ ಸೂಕ್ತವಾದ ಸಿನಿಮಾ ಸಿಕ್ಕಿರಲಿಲ್ಲ. ದೊಡ್ಡ ದೊಡ್ಡ ನಿರ್ದೇಶಕರ ಜೊತೆಗಿನ ಸಿನಿಮಾಗಳು ಕೈತಪ್ಪಿದ್ದವು. ಆದರೆ ಈಗ ಅವರು ‘ಉರಿ’ ಖ್ಯಾತಿಯ ನಿರ್ದೇಶಕ ಆದಿತ್ಯ ಧಾರ್​ ಜೊತೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ರಣವೀರ್​ ಸಿಂಗ್​ ನಟಿಸಲಿರುವ ಈ ಚಿತ್ರದಲ್ಲಿ ಬಹುತಾರಾಗಣ ಇರಲಿದೆ ಎಂಬುದು ವಿಶೇಷ.

ಹಲವು ಸಿನಿಮಾ ಕೈಬಿಟ್ಟ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ರಣವೀರ್​ ಸಿಂಗ್​
ರಣವೀರ್​ ಸಿಂಗ್​
ಮದನ್​ ಕುಮಾರ್​
|

Updated on: Jul 27, 2024 | 6:29 PM

Share

ನಟ ರಣವೀರ್​ ಸಿಂಗ್ ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಾಣುತ್ತಿದ್ದಾರೆ. ಅವರು ನಟಿಸಿದ ಕೆಲವು ಸಿನಿಮಾಗಳು ಸೋತಿವೆ. ಕಳೆದ ವರ್ಷ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಿಂದ ಯಶಸ್ಸು ಸಿಕ್ಕಿತ್ತು. ಆ ಬಳಿಕ ಅವರು ಸಿನಿಮಾಗಳ ಆಯ್ಕೆಯಲ್ಲಿ ತುಂಬ ಕನ್ಫ್ಯೂಸ್​ ಆಗಿದ್ದಾರೆ. ಇತ್ತೀಚೆಗೆ ಮಾತುಕಥೆಯ ಹಂತದಲ್ಲಿ ಇದ್ದ ಒಂದಷ್ಟು ಸಿನಿಮಾಗಳಿಂದ ಹೊರಬಂದರು. ಕಡೆಗೂ ಅವರೊಂದು ಸಿನಿಮಾವನ್ನು ಈಗ ಒಪ್ಪಿಕೊಂಡಿದ್ದಾರೆ. ನಿರ್ದೇಶಕ ಅದಿತ್ಯ ಧಾರ್​ ಜೊತೆ ರಣವೀರ್​ ಸಿಂಗ್​ ಕೈ ಜೋಡಿಸಿದ್ದಾರೆ.

ಸೂಪರ್​ ಹಿಟ್​ ‘ಉರಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ನಿರ್ದೇಶಕ ಆದಿತ್ಯ ಧಾರ್​ ಅವರು ಫೇಮಸ್​ ಆದರು. ಅವರಿಗೆ ಬಾಲಿವುಡ್​ನಲ್ಲಿ ಡಿಮ್ಯಾಂಡ್​ ಇದೆ. ಈಗ ಅವರ ಹೊಸ ಸಿನಿಮಾಗೆ ರಣವೀರ್​ ಸಿಂಗ್​ ಹೀರೋ ಆಗಿದ್ದಾರೆ. ಆ ಬಗ್ಗೆ ಮಾಹಿತಿ ನೀಡಲು ರಣವೀರ್​ ಸಿಂಗ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ರಣವೀರ್​ ಸಿಂಗ್​ಗೆ ಕಿಸ್ ಮಾಡಿದ್ರಾ ಕರಣ್ ಜೋಹರ್? ವೈರಲ್ ಆಗಿದೆ ವಿಡಿಯೋ

ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಜೊತೆ ಖ್ಯಾತ ನಟರಾದ ಸಂಜಯ್​ ದತ್​, ಆರ್​. ಮಾಧವನ್​, ಅಕ್ಷಯ್​ ಖನ್ನಾ, ಅರ್ಜುನ್​ ರಾಮ್​ಪಾಲ್​ ಮುಂತಾದವರು ಅಭಿನಯಿಸಲಿದ್ದಾರೆ. ಎಲ್ಲರ ಬ್ಲ್ಯಾಕ್​ ಆ್ಯಂಡ್ ವೈಟ್​ ಫೋಟೋಗಳನ್ನು ರಣವೀರ್​ ಸಿಂಗ್​ ಹಂಚಿಕೊಂಡಿದ್ದಾರೆ. ಅದನ್ನು ಹೊರತುಪಡಿಸಿ ಅವರು ಹೆಚ್ಚಿನ ಮಾಹಿತಿ ನೀಡಿಲ್ಲ. ರಿಲೀಸ್​ ದಿನಾಂಕವನ್ನೂ ತಿಳಿಸಿಲ್ಲ.

ಈ ಮೊದಲು ‘ಹನುಮಾನ್​’ ಚಿತ್ರದ ನಿರ್ದೇಶಕನ ಜೊತೆ ರಣವೀರ್​ ಸಿಂಗ್​ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಆ ಪ್ರಾಜೆಕ್ಟ್​ ಶುರುವಾಗಲೇ ಇಲ್ಲ. ಎಸ್​. ಶಂಕರ್​ ನಿರ್ದೇಶನ ಮಾಡಲಿರುವ ‘ಅನ್ನಿಯನ್​’ ರಿಮೇಕ್​ನಲ್ಲಿ ರಣವೀರ್​ ಸಿಂಗ್ ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಅದು ಕೂಡ ಜಾರಿಗೆ ಬರಲಿಲ್ಲ. ‘ಶಕ್ತಿಮಾನ್​’ ಚಿತ್ರಕ್ಕೆ ರಣವೀರ್​ ಸಿಂಗ್​ ಹೀರೋ ಆಗುತ್ತಾರೆ ಎಂಬ ಸುದ್ದಿ ಹರಡಿತ್ತು. ಆ ಪ್ರಾಜೆಕ್ಟ್​ ಕೂಡ ಅವರಿಗೆ ಸಿಗಲಿಲ್ಲ. ಇದಲ್ಲದೇ, ಕರಣ್​ ಜೋಹರ್​ ಅವರ ‘ತಕ್ತ್​’, ಸಂಜಯ್​ ಲೀಲಾ ಬನ್ಸಾಲಿ ಅವರ ‘ಬೈಜು ಬವ್ರಾ’ ಸಿನಿಮಾಗಳು ಕೂಡ ಕೈತಪ್ಪಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ