AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಸಿನಿಮಾ ಕೈಬಿಟ್ಟ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ರಣವೀರ್​ ಸಿಂಗ್​

ಹಲವು ತಂಡಗಳ ಜೊತೆ ಮಾತುಕಥೆ ಮಾಡಿದರೂ ರಣವೀರ್​ ಸಿಂಗ್​ ಅವರಿಗೆ ಸೂಕ್ತವಾದ ಸಿನಿಮಾ ಸಿಕ್ಕಿರಲಿಲ್ಲ. ದೊಡ್ಡ ದೊಡ್ಡ ನಿರ್ದೇಶಕರ ಜೊತೆಗಿನ ಸಿನಿಮಾಗಳು ಕೈತಪ್ಪಿದ್ದವು. ಆದರೆ ಈಗ ಅವರು ‘ಉರಿ’ ಖ್ಯಾತಿಯ ನಿರ್ದೇಶಕ ಆದಿತ್ಯ ಧಾರ್​ ಜೊತೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ರಣವೀರ್​ ಸಿಂಗ್​ ನಟಿಸಲಿರುವ ಈ ಚಿತ್ರದಲ್ಲಿ ಬಹುತಾರಾಗಣ ಇರಲಿದೆ ಎಂಬುದು ವಿಶೇಷ.

ಹಲವು ಸಿನಿಮಾ ಕೈಬಿಟ್ಟ ಬಳಿಕ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡ ರಣವೀರ್​ ಸಿಂಗ್​
ರಣವೀರ್​ ಸಿಂಗ್​
ಮದನ್​ ಕುಮಾರ್​
|

Updated on: Jul 27, 2024 | 6:29 PM

Share

ನಟ ರಣವೀರ್​ ಸಿಂಗ್ ಅವರು ವೃತ್ತಿ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಾಣುತ್ತಿದ್ದಾರೆ. ಅವರು ನಟಿಸಿದ ಕೆಲವು ಸಿನಿಮಾಗಳು ಸೋತಿವೆ. ಕಳೆದ ವರ್ಷ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಿಂದ ಯಶಸ್ಸು ಸಿಕ್ಕಿತ್ತು. ಆ ಬಳಿಕ ಅವರು ಸಿನಿಮಾಗಳ ಆಯ್ಕೆಯಲ್ಲಿ ತುಂಬ ಕನ್ಫ್ಯೂಸ್​ ಆಗಿದ್ದಾರೆ. ಇತ್ತೀಚೆಗೆ ಮಾತುಕಥೆಯ ಹಂತದಲ್ಲಿ ಇದ್ದ ಒಂದಷ್ಟು ಸಿನಿಮಾಗಳಿಂದ ಹೊರಬಂದರು. ಕಡೆಗೂ ಅವರೊಂದು ಸಿನಿಮಾವನ್ನು ಈಗ ಒಪ್ಪಿಕೊಂಡಿದ್ದಾರೆ. ನಿರ್ದೇಶಕ ಅದಿತ್ಯ ಧಾರ್​ ಜೊತೆ ರಣವೀರ್​ ಸಿಂಗ್​ ಕೈ ಜೋಡಿಸಿದ್ದಾರೆ.

ಸೂಪರ್​ ಹಿಟ್​ ‘ಉರಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ನಿರ್ದೇಶಕ ಆದಿತ್ಯ ಧಾರ್​ ಅವರು ಫೇಮಸ್​ ಆದರು. ಅವರಿಗೆ ಬಾಲಿವುಡ್​ನಲ್ಲಿ ಡಿಮ್ಯಾಂಡ್​ ಇದೆ. ಈಗ ಅವರ ಹೊಸ ಸಿನಿಮಾಗೆ ರಣವೀರ್​ ಸಿಂಗ್​ ಹೀರೋ ಆಗಿದ್ದಾರೆ. ಆ ಬಗ್ಗೆ ಮಾಹಿತಿ ನೀಡಲು ರಣವೀರ್​ ಸಿಂಗ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ರಣವೀರ್​ ಸಿಂಗ್​ಗೆ ಕಿಸ್ ಮಾಡಿದ್ರಾ ಕರಣ್ ಜೋಹರ್? ವೈರಲ್ ಆಗಿದೆ ವಿಡಿಯೋ

ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಜೊತೆ ಖ್ಯಾತ ನಟರಾದ ಸಂಜಯ್​ ದತ್​, ಆರ್​. ಮಾಧವನ್​, ಅಕ್ಷಯ್​ ಖನ್ನಾ, ಅರ್ಜುನ್​ ರಾಮ್​ಪಾಲ್​ ಮುಂತಾದವರು ಅಭಿನಯಿಸಲಿದ್ದಾರೆ. ಎಲ್ಲರ ಬ್ಲ್ಯಾಕ್​ ಆ್ಯಂಡ್ ವೈಟ್​ ಫೋಟೋಗಳನ್ನು ರಣವೀರ್​ ಸಿಂಗ್​ ಹಂಚಿಕೊಂಡಿದ್ದಾರೆ. ಅದನ್ನು ಹೊರತುಪಡಿಸಿ ಅವರು ಹೆಚ್ಚಿನ ಮಾಹಿತಿ ನೀಡಿಲ್ಲ. ರಿಲೀಸ್​ ದಿನಾಂಕವನ್ನೂ ತಿಳಿಸಿಲ್ಲ.

ಈ ಮೊದಲು ‘ಹನುಮಾನ್​’ ಚಿತ್ರದ ನಿರ್ದೇಶಕನ ಜೊತೆ ರಣವೀರ್​ ಸಿಂಗ್​ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಆ ಪ್ರಾಜೆಕ್ಟ್​ ಶುರುವಾಗಲೇ ಇಲ್ಲ. ಎಸ್​. ಶಂಕರ್​ ನಿರ್ದೇಶನ ಮಾಡಲಿರುವ ‘ಅನ್ನಿಯನ್​’ ರಿಮೇಕ್​ನಲ್ಲಿ ರಣವೀರ್​ ಸಿಂಗ್ ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಅದು ಕೂಡ ಜಾರಿಗೆ ಬರಲಿಲ್ಲ. ‘ಶಕ್ತಿಮಾನ್​’ ಚಿತ್ರಕ್ಕೆ ರಣವೀರ್​ ಸಿಂಗ್​ ಹೀರೋ ಆಗುತ್ತಾರೆ ಎಂಬ ಸುದ್ದಿ ಹರಡಿತ್ತು. ಆ ಪ್ರಾಜೆಕ್ಟ್​ ಕೂಡ ಅವರಿಗೆ ಸಿಗಲಿಲ್ಲ. ಇದಲ್ಲದೇ, ಕರಣ್​ ಜೋಹರ್​ ಅವರ ‘ತಕ್ತ್​’, ಸಂಜಯ್​ ಲೀಲಾ ಬನ್ಸಾಲಿ ಅವರ ‘ಬೈಜು ಬವ್ರಾ’ ಸಿನಿಮಾಗಳು ಕೂಡ ಕೈತಪ್ಪಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್