AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘83’ ಚಿತ್ರಕ್ಕಾಗಿ 20 ಕೋಟಿ ಸಂಭಾವನೆ, ಬಂದ ಲಾಭದಲ್ಲೂ ಇದೆ ಪಾಲು​; ಬದಲಾಯಿತು ರಣವೀರ್​ ಸಿಂಗ್​ ಅದೃಷ್ಟ

ರಣವೀರ್​ ಸಿಂಗ್​ ಚಿತ್ರರಂಗಕ್ಕೆ ಬಂದು ಒಂದು ದಶಕ ಕಳೆದಿದೆ. ಕಡಿಮೆ ಅವಧಿಯಲ್ಲಿ ಬೇಡಿಕೆಯ ನಟನಾಗಿ ಅವರು ಹೊರ ಹೊಮ್ಮಿದ್ದಾರೆ. ಪ್ರತಿ ಚಿತ್ರಕ್ಕೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ ಅವರು.

‘83’ ಚಿತ್ರಕ್ಕಾಗಿ 20 ಕೋಟಿ ಸಂಭಾವನೆ, ಬಂದ ಲಾಭದಲ್ಲೂ ಇದೆ ಪಾಲು​; ಬದಲಾಯಿತು ರಣವೀರ್​ ಸಿಂಗ್​ ಅದೃಷ್ಟ
‘83’ ಸಿನಿಮಾದಲ್ಲಿ ರಣವೀರ್ ಸಿಂಗ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 21, 2021 | 7:30 PM

Share

ರಣವೀರ್​ ಸಿಂಗ್​ ‘83’ ಚಿತ್ರದಲ್ಲಿ ಕಪಿಲ್​ ದೇವ್​​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 24ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಒಳ್ಳೆಯ ಟಾಕ್​​ ಶುರುವಾಗಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇದ್ದು, ಚಿತ್ರತಂಡ ಭರ್ಜರಿಯಾಗಿ ಪ್ರಚಾರ ನಡೆಸುತ್ತಿದೆ. ಈ ಸಿನಿಮಾ ಬಗ್ಗೆ ದಿನಕ್ಕೊಂದು ಅಚ್ಚರಿಯ ಮಾಹಿತಿ ಹೊರ ಬರುತ್ತಲೇ ಇದೆ. ಕಥೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಕ್ರಿಕೆಟ್​ ತಂಡಕ್ಕೆ 15 ಕೋಟಿ ರೂಪಾಯಿ ನೀಡಲಾಗಿತ್ತು ಎನ್ನುವ ವಿಚಾರ ಇತ್ತೀಚೆಗೆ ಹೊರ ಬಿದ್ದಿತ್ತು. ಈಗ ರಣವೀರ್​ ಸಿಂಗ್​ ಸಂಭಾವನೆ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರಣವೀರ್​ ಸಿಂಗ್​ ಈ ಸಿನಿಮಾಗೆ ಬರೋಬ್ಬರಿ 20 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ! ಈ ವಿಚಾರ ಕೇಳಿ ಫ್ಯಾನ್ಸ್​ ಹುಬ್ಬೇರಿಸಿದ್ದಾರೆ.

ರಣವೀರ್​ ಸಿಂಗ್​ ಚಿತ್ರರಂಗಕ್ಕೆ ಬಂದು ಒಂದು ದಶಕ ಕಳೆದಿದೆ. ಕಡಿಮೆ ಅವಧಿಯಲ್ಲಿ ಬೇಡಿಕೆಯ ನಟನಾಗಿ ಅವರು ಹೊರ ಹೊಮ್ಮಿದ್ದಾರೆ. ಪ್ರತಿ ಚಿತ್ರಕ್ಕೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ ಅವರು. ತಾವು ಆಯ್ಕೆ ಮಾಡಿಕೊಂಡ ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಬಾಲಿವುಡ್​ನಲ್ಲಿ ಅವರಿಗೆ ದೊಡ್ಡ ಬೇಡಿಕೆ ಸೃಷ್ಟಿ ಆಗಿದೆ.  ಈಗ ಅವರು ‘83’ ಚಿತ್ರಕ್ಕೆ ತೆಗೆದುಕೊಂಡ ಸಂಭಾವನೆ ವಿಚಾರ ಅಚ್ಚರಿ ಮೂಡಿಸಿದೆ.

1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಆಧರಿಸಿ ‘83’ ಸಿನಿಮಾ ಸಿದ್ಧಗೊಂಡಿದೆ. ಕಪಿಲ್​ ದೇವ್​ ಆಗಿ ರಣವೀರ್​ ಸಿಂಗ್​ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ರಣವೀರ್​ ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂಬುದರ ಝಲಕ್​ ಟ್ರೇಲರ್​ ಮೂಲಕ ಸಿಕ್ಕಿದೆ. ಈ ಚಿತ್ರಕ್ಕಾಗಿ ಅವರು 20 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇಷ್ಟಕ್ಕೇ ನಿಂತಿಲ್ಲ. ಸಿನಿಮಾದಲ್ಲಿ ಬಂದ ಲಾಭದಲ್ಲಿ ಒಂದಷ್ಟು ಪಾಲನ್ನು ತಮಗೆ ನೀಡಬೇಕು ಎನ್ನುವ ಷರತ್ತನ್ನು ಅವರು ಹಾಕಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ.

1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಹಾಗಾಗಿ ಅಂದು ಭಾರತ ತಂಡದಲ್ಲಿ ಇದ್ದ ಆಟಗಾರರನ್ನೇ ಮಾತನಾಡಿಸಿ ವಿವರಗಳನ್ನು ಕಲೆ ಹಾಕಬೇಕಾಯಿತು. ಆ ವಿವರಗಳನ್ನು ಪಡೆಯಲು ‘83’ ನಿರ್ಮಾಪಕರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಟೀಮ್​ನಲ್ಲಿದ್ದ ಎಲ್ಲ ಆಟಗಾರರಿಗೂ ಸೇರಿ ಒಟ್ಟು 15 ಕೋಟಿ ರೂ.ಗಳನ್ನು ನೀಡಲಾಗಿದೆ. ಅದರಲ್ಲಿ ಕ್ಯಾಪ್ಟನ್​ ಕಪಿಲ್​ ದೇವ್​ ಅವರಿಗೆ ಬರೋಬ್ಬರಿ 5 ಕೋಟಿ ಕೊಡಲಾಗಿದೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಇದನ್ನೂ ಓದಿ: ‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​

ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 pm, Tue, 21 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ