AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh Birthday: ಸಾಲು ಸಾಲು ಫ್ಲಾಪ್; ಇನ್ನಾದರೂ ರಣವೀರ್ ಸಿಂಗ್​ಗೆ ಸಿಗುತ್ತಾ ಗೆಲುವಿನ ಜಯಭೇರಿ?

2013ರಲ್ಲಿ ರಿಲೀಸ್ ಆದ ‘ರಾಮ್​ ಲೀಲಾ’, 2014ರಲ್ಲಿ ಬಿಡುಗಡೆ ಕಂಡ ‘ಗುಂಡೇ’ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಫೇಮಸ್ ಆದರು.

Ranveer Singh Birthday: ಸಾಲು ಸಾಲು ಫ್ಲಾಪ್; ಇನ್ನಾದರೂ ರಣವೀರ್ ಸಿಂಗ್​ಗೆ ಸಿಗುತ್ತಾ ಗೆಲುವಿನ ಜಯಭೇರಿ?
Follow us
ರಾಜೇಶ್ ದುಗ್ಗುಮನೆ
|

Updated on:Jul 06, 2023 | 10:17 AM

ನಟ ರಣವೀರ್ ಸಿಂಗ್ (Ranveer Singh ) ಅವರಿಗೆ ಇಂದು (ಜುಲೈ 6) ಜನ್ಮದಿನದ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯದ ಮಹಾಪೂರ ಹರಿದುಬರುತ್ತಿದೆ. ಅನೇಕ ಸೆಲೆಬ್ರಿಟಿಗಳು, ಫ್ಯಾನ್ಸ್ ರಣವೀರ್ ಸಿಂಗ್​ಗೆ ವಿಶ್ ತಿಳಿಸುತ್ತಿದ್ದಾರೆ. ಬರ್ತ್​ಡೇಗೂ ಎರಡು ದಿನ ಮೊದಲು ಅವರ ಮುಂದಿನ ಸಿನಿಮಾ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Kii Prem Kahaani) ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಇದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ. ಈ ಚಿತ್ರದ ಮೂಲಕ ಅವರಿಗೆ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ರಣವೀರ್ ಸಿಂಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2010ರಲ್ಲಿ. ‘ಬ್ಯಾಂಡ್ ಬಾಜ ಭಾರತ್’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ನಂತರ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2013ರಲ್ಲಿ ರಿಲೀಸ್ ಆದ ‘ರಾಮ್​ ಲೀಲಾ’, 2014ರಲ್ಲಿ ಬಿಡುಗಡೆ ಕಂಡ ‘ಗುಂಡೇ’ ಸಿನಿಮಾ ಮೂಲಕ ಅವರು ಫೇಮಸ್ ಆದರು.

2015ರಲ್ಲಿ ತೆರೆಗೆ ಬಂದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಬಾಜಿರಾವ್ ಮಸ್ತಾನಿ’  ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಖ್ಯಾತಿ ಹೆಚ್ಚಿತು. 2016ರಲ್ಲಿ ರಿಲೀಸ್ ಆದ ‘ಪದ್ಮಾವತ್’ ಕೂಡ ಹಿಟ್ ಆಯಿತು. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ.

2019ರಲ್ಲಿ ರಿಲೀಸ್ ಆದ ‘ಗಲ್ಲಿ ಬಾಯ್’ ಚಿತ್ರವೇ ಕೊನೆ. ಈ ಚಿತ್ರದ ಮೂಲಕ ಅವರು ಗೆದ್ದರು. ‘83’ ಸಿನಿಮಾ ವಿಮರ್ಶೆಯಲ್ಲಿ ಗೆದ್ದರೂ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಮಾಲ್ ಮಾಡಲೇ ಇಲ್ಲ. ‘ಜಯೇಶ್​ಭಾಯ್ ಜೋರ್ದಾರ್’, ‘ಸರ್ಕಸ್’ ಸಿನಿಮಾಗಳು ಸೋತವು. ಈಗ ಅವರು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Alia Bhatt: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ರಣವೀರ್ ಸಿಂಗ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಸಖತ್ ಅದ್ದೂರಿಯಾಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಜುಲೈ 28ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಕರಣ್ ಜೋಹರ್ ಅವರ ನಿರ್ದೇಶನ ಈ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:03 am, Thu, 6 July 23

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು