AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ

ನಿರೀಕ್ಷೆಯಂತೆಯೇ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ ಭಾರತದಲ್ಲಿ 1000 ಕೋಟಿ ರೂಪಾಯಿ ಗಡಿ ದಾಟಿದೆ. ಆ ಮೂಲಕ ಹಲವು ಸಿನಿಮಾಗಳ ಹಳೆಯ ದಾಖಲೆಗಳನ್ನು ಈ ಚಿತ್ರ ಅಳಿಸಿ ಹಾಕಿದೆ. ರಣವೀರ್ ಸಿಂಗ್ ಅವರಿಗೆ ‘ಧುರಂಧರ್ 2’ ಸಿನಿಮಾದಿಂದ ಅತಿ ದೊಡ್ಡ ಸಕ್ಸಸ್ ಸಿಕ್ಕಿದೆ.

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ
Ranveer Singh
ಮದನ್​ ಕುಮಾರ್​
|

Updated on: Apr 06, 2026 | 5:45 PM

Share

ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಆದಿತ್ಯ ಧರ್ ಅವರ ಕಾಂಬಿನೇಷನ್​​ನಲ್ಲಿ ಬಂದ ‘ಧುರಂಧರ್ 2’ ಸಿನಿಮಾ ಅಕ್ಷರಶಃ ಹೊಸ ಇತಿಹಾಸ ಬರೆದಿದೆ. ಭಾರತೀಯ ಬಾಕ್ಸ್ ಆಫೀಸ್ ಇತಿಹಾಸದಲ್ಲೇ 1000 ಕೋಟಿ ರೂಪಾಯಿ ನಿವ್ವಳ ಗಳಿಕೆ (Box Office Collection) ಮಾಡಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ಮೂರನೇ ವಾರದಲ್ಲೂ ತನ್ನ ನಾಗಾಲೋಟವನ್ನು ಮುಂದುವರಿಸಿದೆ. ಪ್ರೇಕ್ಷಕರನ್ನು ಥಿಯೇಟರ್‌ಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತದಲ್ಲೇ 1000 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದಕ್ಕೆ ‘ಧುರಂಧರ್ 2’ (Dhurandhar 2) ಚಿತ್ರತಂಡಕ್ಕೆ ಖುಷಿ ಆಗಿದೆ.

ವರದಿಗಳ ಪ್ರಕಾರ, ‘ಧುರಂಧರ್ 2’ ಸಿನಿಮಾ ಬಿಡುಗಡೆಯಾಗಿ 18ನೇ ದಿನ (ಏಪ್ರಿಲ್ 5) ಬರೋಬ್ಬರಿ 28.75 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ವಾರದಲ್ಲೂ ಈ ಮಟ್ಟದ ಗಳಿಕೆ ಮಾಡಿರುವುದು ಚಿತ್ರರಂಗವನ್ನು ಬೆರಗುಗೊಳಿಸಿದೆ. ಮೊದಲ ವಾರ 674 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ವಾರ 263.65 ಕೋಟಿ ರೂಪಾಯಿ ಸೇರ್ಪಡೆ ಆಯಿತು.

ಈವರೆಗೂ ‘ಧುರಂಧರ್ 2’ ಸಿನಿಮಾಗೆ ಭಾರತದಲ್ಲಿ ಆಗಿರುವ ಒಟ್ಟು ಗಳಿಕೆ (Gross) 1,209 ಕೋಟಿ ರೂಪಾಯಿ. ಭಾರತದಲ್ಲಿನ ನಿವ್ವಳ ಗಳಿಕೆ (Net) 1,013 ಕೋಟಿ ಎಂಬ ಮಾಹಿತಿ ಸಿಕ್ಕಿದೆ. ‘ಧುರಂಧರ್ 2’ ಸಿನಿಮಾ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಕೇವಲ ಮೊದಲ ವಾರದಲ್ಲೇ 1000 ಕೋಟಿ ರೂಪಾಯಿ ಗಡಿ ದಾಟುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿತ್ತು.

‘ಧುರಂಧರ್ 2’ ಚಿತ್ರವು ಈಗಾಗಲೇ ಭಾರತದ ಬ್ಲಾಕ್‌ಬಸ್ಟರ್ ಸಿನಿಮಾಗಳಾದ ‘ಆರ್​ಆರ್​ಆರ್​’ (782.20 ಕೋಟಿ ರೂ.), ‘ಕಲ್ಕಿ 2898 AD’ (646 ಕೋಟಿ ರೂ.), ‘ಕೆಜಿಎಫ್: ಚಾಪ್ಟರ್ 2’ (859.70 ಕೋಟಿ ರೂ.), ಜವಾನ್ ಮತ್ತು ಪಠಾಣ್ ಚಿತ್ರಗಳ ಲೈಫ್‌ಟೈಮ್ ಕಲೆಕ್ಷನ್ ಹಿಂದಿಕ್ಕಿದೆ. 1,030 ಕೋಟಿ ರೂಪಾಯಿ ಗಳಿಸಿದ್ದ ‘ಬಾಹುಬಲಿ 2’ ದಾಖಲೆಯನ್ನು ಮುರಿಯಲು ಸಜ್ಜಾಗಿರುವ ಈ ಚಿತ್ರ, ನಂತರ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (1,234 ಕೋಟಿ ರೂ.) ದಾಖಲೆಯನ್ನು ಮೀರಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಭಾರತೀಯ ಗೂಢಚಾರನಾಗಿ ನಟಿಸಿದ್ದಾರೆ. ಪಾಕಿಸ್ತಾನದ ಭೂಗತ ಲೋಕಕ್ಕೆ ನುಗ್ಗಿ ಭಾರತವನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಜಾಲವನ್ನು ಮಟ್ಟಹಾಕುವ ರೋಚಕ ಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ರಣವೀರ್ ಜೊತೆಗೆ ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ