AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ಮಿತಿ ಮೀರಿತು ‘ಡಾನ್ 3’ ಸಿನಿಮಾ ಬಜೆಟ್; ಇಲ್ಲಿದೆ ವಿವರ

ಇತ್ತೀಚೆಗೆ ಬಾಲಿವುಡ್ ಸಿನಿಮಾಗಳು ದೊಡ್ಡ ಯಶಸ್ಸು ಕಾಣುತ್ತಿವೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಂಡ ‘ಪಠಾಣ್’, ‘ಜವಾನ್’ ಸಿನಿಮಾಗಳು 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ‘ಅನಿಮಲ್’, ‘ಗದರ್’ ಮೊದಲಾದ ಚಿತ್ರಗಳ ಕಲೆಕ್ಷನ್ ಕೂಡ 500 ಕೋಟಿ ರೂಪಾಯಿ ದಾಟಿದೆ. ಅದೇ ರೀತಿ ‘ಡಾನ್ 3’ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ರೆಡಿ ಮಾಡಲು ಪ್ಲ್ಯಾನ್ ನಡೆದಿದೆ.

Ranveer Singh: ಮಿತಿ ಮೀರಿತು ‘ಡಾನ್ 3’ ಸಿನಿಮಾ ಬಜೆಟ್; ಇಲ್ಲಿದೆ ವಿವರ
ರಣವೀರ್ ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 24, 2024 | 8:25 AM

Share

ರಣವೀರ್ ಸಿಂಗ್ (Ranveer Singh) ಅವರು ಡಾನ್ ಆಗಿ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳು ಗೆದ್ದ ಬಳಿಕ ‘ಡಾನ್ 3’ ಸಿನಿಮಾನ ತೆರೆಮೇಲೆ ತರೋಕೆ ಸಿದ್ಧತೆ ನಡೆದಿದೆ. ಕಿಯಾರಾ ಅಡ್ವಾಣಿ ಅವರು ರಣವೀರ್ ಸಿಂಗ್​ಗೆ ಜೊತೆಯಾಗಿದ್ದಾರೆ. ಈ ಸಿನಿಮಾದ ಬಜೆಟ್ ಬಗ್ಗೆ ಒಂದು ಹೊಸ ಸುದ್ದಿ ಕೇಳಿ ಬರುತ್ತಿದೆ. ಈ ಚಿತ್ರದ ಬಜೆಟ್ 300 ಕೋಟಿ ರೂಪಾಯಿ ಸಮೀಪಿಸಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಬಾಲಿವುಡ್ ಸಿನಿಮಾಗಳು ದೊಡ್ಡ ಯಶಸ್ಸು ಕಾಣುತ್ತಿವೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಂಡ ‘ಪಠಾಣ್’, ‘ಜವಾನ್’ ಸಿನಿಮಾಗಳು 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ‘ಅನಿಮಲ್’, ‘ಗದರ್’ ಮೊದಲಾದ ಚಿತ್ರಗಳ ಕಲೆಕ್ಷನ್ ಕೂಡ 500 ಕೋಟಿ ರೂಪಾಯಿ ದಾಟಿದೆ. ಅದೇ ರೀತಿ ‘ಡಾನ್ 3’ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ರೆಡಿ ಮಾಡಲು ಪ್ಲ್ಯಾನ್ ನಡೆದಿದೆ. ಈ ಚಿತ್ರದ ಬಜೆಟ್ 275 ಕೋಟಿ ರೂಪಾಯಿ ಇದೆ ಎಂದು ಹೇಳಲಾಗುತ್ತಿದೆ.

‘ಡಾನ್ ಚಿತ್ರದ ಮೊದಲ ಹಾಗೂ ಎರಡನೇ ಭಾಗಕ್ಕೆ ಶಾರುಖ್ ಖಾನ್ ಹೀರೋ ಆಗಿದ್ದರು. ಈ ಚಿತ್ರವನ್ನು ಸಾಧಾರಣ ಬಜೆಟ್​ನಲ್ಲಿ ಸಿದ್ಧಗೊಳಿಸಲಾಗಿತ್ತು. ಆದರೆ ಡಾನ್ ಸರಣಿಯ ಮೂರನೇ ಚಿತ್ರವನ್ನು ಗ್ಲೋಬಲ್ ಸಿನಿಮಾ ಆಗಿ ಮಾಡುವ ಉದ್ದೇಶವನ್ನು ಫರ್ಹಾನ್ ಹೊಂದಿದ್ದಾರೆ. ಈ ಚಿತ್ರದಲ್ಲಿ ವಿಶ್ವದರ್ಜೆಯ  ತಂತ್ರಜ್ಞರು ಇರಲಿದ್ದಾರೆ’ ಎಂದು ಮೂಲಗಳು ಹೇಳಿರುವುದಾಗಿ ವರದಿ ಆಗಿದೆ.

‘ಡಾನ್’ ಸರಣಿಯಲ್ಲಿ ಹೀರೋಗೆ ನೆಗೆಟಿವ್ ಶೇಡ್ ಇರಲಿದೆ. ಅದು ‘ಡಾನ್ 3’ ಸಿನಿಮಾದಲ್ಲೂ ಅದು  ಮುಂದುವರಿಯಲಿದೆ. ರಣವೀರ್ ಸಿಂಗ್ ಅವರು ‘ಡಾನ್ 3’ ಚಿತ್ರದಲ್ಲಿ ವಿಲನ್ ರೀತಿಯ ಪಾತ್ರ ನಿರ್ವಹಿಸಲಿದ್ದಾರೆ. ಹಳೆಯ ಸರಣಿಗೆ ಹೊಸ ಹೀರೋನ ಆಗಮನ ಆಗಿರುವುದರಿಂದ ಈ ದೊಡ್ಡ ಬಜೆಟ್ ಹೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ರಿವೀಲ್ ಆಗಲಿದೆ.

ಇದನ್ನೂ ಓದಿ: ಅಡಲ್ಟ್ ಜಾಹೀರಾತು, ನ್ಯೂಡ್ ಫೋಟೋಶೂಟ್; ಏಳು ಬಾರಿ ಸುದ್ದಿ ಆಗಿದ್ದ ರಣವೀರ್ ಸಿಂಗ್  

ಶಾರುಖ್ ಖಾನ್ ಅವರನ್ನು ರಣವೀರ್ ಸಿಂಗ್ ರಿಪ್ಲೇಸ್ ಮಾಡಿದ್ದಾರೆ ಎನ್ನುವಾಗಲೇ ಕಿಂಗ್ ಖಾನ್ ಅಭಿಮಾನಿಗಳಿಗೆ ಬೇಸರ ಮೂಡಿತ್ತು. ಈ ಸರಣಿ ಹಿಟ್ ಆಗುವುದಿಲ್ಲ ಎಂದು ಅನೇಕರು ಭವಿಷ್ಯ ನುಡಿದಿದ್ದರು. ಆದರೆ, ಆ ರೀತಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಫರ್ಹಾನ್ ಅಖ್ತರ್ ಮೇಲಿದೆ. ಈ ಮೊದಲು ಅಮಿತಾಭ್ ಬಚ್ಚನ್ ಅವರು ‘ಡಾನ್’ ಸಿನಿಮಾ ಮಾಡಿದ್ದರು. ಅವರ ಸ್ಥಾನವನ್ನು ಶಾರುಖ್ ಖಾನ್ ತುಂಬಿದಾಗ ಜನರು ಒಪ್ಪಿಕೊಂಡರು. ಈಗಲೂ ಅದೇ ರೀತಿ ಆಗಲಿದೆ ಎಂಬುದು ಫರ್ಹಾನ್ ಅಖ್ತರ್ ಅಭಿಪ್ರಾಯ. ಸದ್ಯ ಸಿನಿಮಾಗೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಅದಕ್ಕೂ ಮೊದಲೇ ಸಿನಿಮಾದ ಬಗ್ಗೆ ಚರ್ಚೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ