AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್

ರಣವೀರ್ ಸಿಂಗ್ 'ಡಾನ್ 3' ಚಿತ್ರದಿಂದ ಹೊರನಡೆದ ವಿವಾದ ಭುಗಿಲೆದ್ದಿದೆ. ಚಿತ್ರತಂಡ 45 ಕೋಟಿ ಪರಿಹಾರ ಕೇಳಿದ ಬೆನ್ನಲ್ಲೇ, FWICE ನಟನ ವಿರುದ್ಧ ನಿಷೇಧ ಹೇರಿತ್ತು. ಇದೀಗ ರಣವೀರ್ ಸಿಂಗ್ 'ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್' (FWICE) ಗೆ ಲೀಗಲ್ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ವೃತ್ತಿಪರ ಭಿನ್ನಾಭಿಪ್ರಾಯಗಳನ್ನು ಖಾಸಗಿಯಾಗಿ ಬಗೆಹರಿಸಲು ರಣವೀರ್ ಬಯಸುತ್ತಾರೆ.

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್
ಫರ್ಹಾನ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Jun 03, 2026 | 12:13 PM

Share

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್ ಸಿಂಗ್ ಮಂಗಳವಾರವೇ ಈ ಲೀಗಲ್ ನೋಟಿಸ್ ರವಾನಿಸಿದ್ದಾರೆ. ಆದರೆ, ನೋಟಿಸ್‌ನಲ್ಲಿ ಏನಿದೆ ಎಂಬ ಸಂಪೂರ್ಣ ವಿವರಗಳು ಇನ್ನು ಬಹಿರಂಗವಾಗಿಲ್ಲ. ಇತ್ತ FWICE ಒಕ್ಕೂಟ ಕೂಡ ಈ ನೋಟಿಸ್‌ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಏನಿದು ‘ಡಾನ್ 3’ ವಿವಾದ?

ಕೆಲವು ದಿನಗಳ ಹಿಂದೆ ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಮಹತ್ವಾಕಾಂಕ್ಷೆಯ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹಠಾತ್ತನೆ ಹೊರನಡೆದಿದ್ದರು. ಚಿತ್ರಕಥೆಯ ವಿಚಾರದಲ್ಲಿ ಮೂಡಿದ ಸೃಜನಶೀಲ ಭಿನ್ನಾಭಿಪ್ರಾಯಗಳು ಹಾಗೂ ಸ್ಕ್ರಿಪ್ಟ್ ಅಂತಿಮಗೊಳ್ಳದೆ ಶೂಟಿಂಗ್ ಸತತವಾಗಿ ವಿಳಂಬವಾಗುತ್ತಿದ್ದುದೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿತ್ತು.

ಬಂಡಾಯ ಎದ್ದು ಹೊರನಡೆದ ನಟನ ನಡೆಗೆ ಚಿತ್ರದ ನಿರ್ಮಾಣ ಸಂಸ್ಥೆ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸಿನಿಮಾ ಅರ್ಧಕ್ಕೆ ನಿಂತಿದ್ದರಿಂದ ತಮಗಾದ ನಷ್ಟಕ್ಕೆ ಪ್ರತಿಯಾಗಿ ರಣವೀರ್ ಸಿಂಗ್ ಅವರಿಂದ ಬರೋಬ್ಬರಿ 45 ಕೋಟಿ ರೂಪಾಯಿ ಪರಿಹಾರ ಕೋರಿ ಸಂಸ್ಥೆ ಬೇಡಿಕೆ ಇಟ್ಟಿದೆ. ಇದರ ಬೆನ್ನಲ್ಲೇ FWICE ಒಕ್ಕೂಟವು ರಣವೀರ್ ಸಿಂಗ್ ಜೊತೆ ಚಿತ್ರರಂಗದ ಯಾರೂ ಸಹಕರಿಸಬಾರದು ಎಂದು ‘ಅಸಹಕಾರ ಆದೇಶ’ ಹೊರಡಿಸಿತ್ತು.

ಈ ಇಡೀ ವಿವಾದದ ಬಗ್ಗೆ ರಣವೀರ್ ಸಿಂಗ್ ಸದ್ಯ ಮೌನ ವಹಿಸಿದ್ದರೂ, ಅವರ ವಕ್ತಾರರು ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ‘ವೃತ್ತಿಪರ ಭಿನ್ನಾಭಿಪ್ರಾಯಗಳನ್ನು ಗೌರವ ಮತ್ತು ಪ್ರಬುದ್ಧತೆಯಿಂದ ಖಾಸಗಿಯಾಗಿ ಬಗೆಹರಿಸಿಕೊಳ್ಳಬೇಕು ಎಂದು ರಣವೀರ್ ನಂಬುತ್ತಾರೆ. ಹೀಗಾಗಿ ಅವರು ಈ ಊಹಾಪೋಹಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿರಲು ನಿರ್ಧರಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕಡಿಮೆ ಸಂಭಾವನೆ ಪಡೆದಿದ್ದ ರಣವೀರ್ ಸಿಂಗ್; ಆದ್ರೂ ಹರಿದುಬಂತು ಕೋಟಿ ಕೋಟಿ ಹಣ!

ಮುಂದಿನ ಸಿನಿಮಾ ‘ಪ್ರಳಯ್’ ಕಥೆ ಏನು?

FWICE ಹೇರಿರುವ ಈ ನಿಷೇಧದಿಂದಾಗಿ ರಣವೀರ್ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ಪ್ರಳಯ್’ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಆದರೆ, ವರದಿಗಳ ಪ್ರಕಾರ ಈ ವಿವಾದದಿಂದ ರಣವೀರ್ ಅವರ ಮುಂಬರುವ ಸಿನಿಮಾಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎನ್ನಲಾಗಿದೆ. ಜೈ ಮೆಹ್ತಾ ನಿರ್ದೇಶನದ ‘ಪ್ರಳಯ್’ ಚಿತ್ರದ ಶೂಟಿಂಗ್ ಅನ್ನು ನಿಗದಿಯಂತೆ ಈ ವರ್ಷದ ಆಗಸ್ಟ್ ತಿಂಗಳಿನಿಂದ ಆರಂಭಿಸಲು ಚಿಂತಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:12 pm, Wed, 3 June 26

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್