AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​
ರಣವೀರ್​ ಸಿಂಗ್​
TV9 Web
| Edited By: |

Updated on: Oct 09, 2021 | 9:52 PM

Share

ರಣವೀರ್​ ಸಿಂಗ್​ ಅವರು ಫಿಟ್​ನೆಸ್​ ಹಾಗೂ ಫ್ಯಾಷನ್​​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಏನೇ ಹೊಸದು ಮಾಡಿದರೂ ಅದು ಟ್ರೆಂಡ್​ ಆಗುತ್ತದೆ. ರಣವೀರ್​ ಸಿಂಗ್​ ಅಷ್ಟರ ಮಟ್ಟಿಗೆ ಹವಾ ಸೃಷ್ಟಿ ಮಾಡಿದ್ದಾರೆ. ಫಿಟ್​ನೆಸ್​ಗಾಗಿ ಅವರು ನಿತ್ಯ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಈಗ ಅವರು ಶರ್ಟ್​ಲೆಸ್​ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ರಣವೀರ್​ ಸಿಂಗ್​ ಅವರು ರಾಷ್ಟ್ರೀಯ ಬಾಸ್ಕೆಟ್​ ಬಾಲ್​ ಅಸೋಸಿಯೇಷನ್​ನ ಭಾರತದ ರಾಯಭಾರಿ ಆಗಿದ್ದಾರೆ. ಬಾಸ್ಕೆಟ್​ಬಾಲ್​ ಹಾಗೂ ಎನ್​ಬಿಎ ಎಂದರೆ ರಣವೀರ್​ ಸಿಂಗ್​ಗೆ ಚಿಕ್ಕಂದಿನಿಂದಲೂ ಪ್ರೀತಿ. ಅವರಿಗೆ ಬಾಸ್ಕೆಟ್​​ಬಾಲ್​ಮೇಲೆ ಎಲ್ಲಿಲ್ಲದ ಪ್ರೀತಿ ಇದೆ. ಈ ಕಾರಣಕ್ಕೆ ಅವರು ಅಂಬಾಸಿಡರ್​ ಆಗೋಕೆ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ ಅದನ್ನು ಪ್ರಮೋಟ್​ ಮಾಡುತ್ತಿದ್ದಾರೆ.

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ. ರಣವೀರ್​ ಸಿಂಗ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೆ, ಈ ಬಗ್ಗೆ ನಾನಾ ರೀತಿಯ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಕೊವಿಡ್​ ಎರಡನೇ ಅಲೆ ಬಂದಾಗ ಅದರ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ರಣವೀರ್​ ಸಿಂಗ್ ಮನೆಯಲ್ಲೇ ಇದ್ದರು. ಆಗ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡಿದ್ದಾರೆ. ಈ ಮೂಲಕ ದೇಹದ ಫಿಟ್​ನೆಸ್​ ಹಾಳಾಗದಂತೆ ನೋಡಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಕಬೀರ್​ ಖಾನ್​ ನಿರ್ದೇಶನದ ಈ ಸಿನಿಮಾ 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಹೇಳಲಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಪಿಲ್​ ದೇವ್​ ಪಾತ್ರಕ್ಕೆ ರಣವೀರ್​ ಸಿಂಗ್​ ಲುಕ್​ ಸರಿಯಾಗಿ ಹೊಂದುತ್ತಿದೆ. ಇದಲ್ಲದೆ, ‘ಸೂರ್ಯವಂಶಿ’ ಸಿನಿಮಾದಲ್ಲಿ ರಣವೀರ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸರ್ಕಸ್’​ ಹಾಗೂ ‘ತಖ್ತ್’​ ಸಿನಿಮಾಗಳಲ್ಲೂ ರಣವೀರ್ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಫಾರ್ಮ್​ಹೌಸ್ ಖರಿದಿಸೋಕೆ ಮುಂದಾದ ರಣವೀರ್​ ಸಿಂಗ್; ಕಾರಣ ಏನು ಗೊತ್ತಾ?

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ