AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​
ರಣವೀರ್​ ಸಿಂಗ್​
TV9 Web
| Edited By: |

Updated on: Oct 09, 2021 | 9:52 PM

Share

ರಣವೀರ್​ ಸಿಂಗ್​ ಅವರು ಫಿಟ್​ನೆಸ್​ ಹಾಗೂ ಫ್ಯಾಷನ್​​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಏನೇ ಹೊಸದು ಮಾಡಿದರೂ ಅದು ಟ್ರೆಂಡ್​ ಆಗುತ್ತದೆ. ರಣವೀರ್​ ಸಿಂಗ್​ ಅಷ್ಟರ ಮಟ್ಟಿಗೆ ಹವಾ ಸೃಷ್ಟಿ ಮಾಡಿದ್ದಾರೆ. ಫಿಟ್​ನೆಸ್​ಗಾಗಿ ಅವರು ನಿತ್ಯ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಈಗ ಅವರು ಶರ್ಟ್​ಲೆಸ್​ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ರಣವೀರ್​ ಸಿಂಗ್​ ಅವರು ರಾಷ್ಟ್ರೀಯ ಬಾಸ್ಕೆಟ್​ ಬಾಲ್​ ಅಸೋಸಿಯೇಷನ್​ನ ಭಾರತದ ರಾಯಭಾರಿ ಆಗಿದ್ದಾರೆ. ಬಾಸ್ಕೆಟ್​ಬಾಲ್​ ಹಾಗೂ ಎನ್​ಬಿಎ ಎಂದರೆ ರಣವೀರ್​ ಸಿಂಗ್​ಗೆ ಚಿಕ್ಕಂದಿನಿಂದಲೂ ಪ್ರೀತಿ. ಅವರಿಗೆ ಬಾಸ್ಕೆಟ್​​ಬಾಲ್​ಮೇಲೆ ಎಲ್ಲಿಲ್ಲದ ಪ್ರೀತಿ ಇದೆ. ಈ ಕಾರಣಕ್ಕೆ ಅವರು ಅಂಬಾಸಿಡರ್​ ಆಗೋಕೆ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ ಅದನ್ನು ಪ್ರಮೋಟ್​ ಮಾಡುತ್ತಿದ್ದಾರೆ.

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ. ರಣವೀರ್​ ಸಿಂಗ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೆ, ಈ ಬಗ್ಗೆ ನಾನಾ ರೀತಿಯ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಕೊವಿಡ್​ ಎರಡನೇ ಅಲೆ ಬಂದಾಗ ಅದರ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ರಣವೀರ್​ ಸಿಂಗ್ ಮನೆಯಲ್ಲೇ ಇದ್ದರು. ಆಗ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡಿದ್ದಾರೆ. ಈ ಮೂಲಕ ದೇಹದ ಫಿಟ್​ನೆಸ್​ ಹಾಳಾಗದಂತೆ ನೋಡಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಕಬೀರ್​ ಖಾನ್​ ನಿರ್ದೇಶನದ ಈ ಸಿನಿಮಾ 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಹೇಳಲಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಪಿಲ್​ ದೇವ್​ ಪಾತ್ರಕ್ಕೆ ರಣವೀರ್​ ಸಿಂಗ್​ ಲುಕ್​ ಸರಿಯಾಗಿ ಹೊಂದುತ್ತಿದೆ. ಇದಲ್ಲದೆ, ‘ಸೂರ್ಯವಂಶಿ’ ಸಿನಿಮಾದಲ್ಲಿ ರಣವೀರ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸರ್ಕಸ್’​ ಹಾಗೂ ‘ತಖ್ತ್’​ ಸಿನಿಮಾಗಳಲ್ಲೂ ರಣವೀರ್ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಫಾರ್ಮ್​ಹೌಸ್ ಖರಿದಿಸೋಕೆ ಮುಂದಾದ ರಣವೀರ್​ ಸಿಂಗ್; ಕಾರಣ ಏನು ಗೊತ್ತಾ?

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ