AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ.

ರಣವೀರ್​ ಸಿಂಗ್​ ಶರ್ಟ್​ಲೆಸ್​ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್​
ರಣವೀರ್​ ಸಿಂಗ್​
TV9 Web
| Edited By: |

Updated on: Oct 09, 2021 | 9:52 PM

Share

ರಣವೀರ್​ ಸಿಂಗ್​ ಅವರು ಫಿಟ್​ನೆಸ್​ ಹಾಗೂ ಫ್ಯಾಷನ್​​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಏನೇ ಹೊಸದು ಮಾಡಿದರೂ ಅದು ಟ್ರೆಂಡ್​ ಆಗುತ್ತದೆ. ರಣವೀರ್​ ಸಿಂಗ್​ ಅಷ್ಟರ ಮಟ್ಟಿಗೆ ಹವಾ ಸೃಷ್ಟಿ ಮಾಡಿದ್ದಾರೆ. ಫಿಟ್​ನೆಸ್​ಗಾಗಿ ಅವರು ನಿತ್ಯ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಈಗ ಅವರು ಶರ್ಟ್​ಲೆಸ್​ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ರಣವೀರ್​ ಸಿಂಗ್​ ಅವರು ರಾಷ್ಟ್ರೀಯ ಬಾಸ್ಕೆಟ್​ ಬಾಲ್​ ಅಸೋಸಿಯೇಷನ್​ನ ಭಾರತದ ರಾಯಭಾರಿ ಆಗಿದ್ದಾರೆ. ಬಾಸ್ಕೆಟ್​ಬಾಲ್​ ಹಾಗೂ ಎನ್​ಬಿಎ ಎಂದರೆ ರಣವೀರ್​ ಸಿಂಗ್​ಗೆ ಚಿಕ್ಕಂದಿನಿಂದಲೂ ಪ್ರೀತಿ. ಅವರಿಗೆ ಬಾಸ್ಕೆಟ್​​ಬಾಲ್​ಮೇಲೆ ಎಲ್ಲಿಲ್ಲದ ಪ್ರೀತಿ ಇದೆ. ಈ ಕಾರಣಕ್ಕೆ ಅವರು ಅಂಬಾಸಿಡರ್​ ಆಗೋಕೆ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ ಅದನ್ನು ಪ್ರಮೋಟ್​ ಮಾಡುತ್ತಿದ್ದಾರೆ.

ಈಗ ರಣವೀರ್​ ಸಿಂಗ್​ ಬಾಸ್ಕೆಟ್​ಬಾಲ್​ ಆಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ  ಫೋಟೋದಲ್ಲಿ ಬಾಸ್ಕೆಟ್​ಬಾಲ್​ಗಿಂತ ಅವರ ಆ್ಯಬ್ಸ್​ ಎಲ್ಲರ ಗಮನ ಸೆಳೆದಿದೆ. ರಣವೀರ್​ ಸಿಂಗ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೆ, ಈ ಬಗ್ಗೆ ನಾನಾ ರೀತಿಯ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ಕೊವಿಡ್​ ಎರಡನೇ ಅಲೆ ಬಂದಾಗ ಅದರ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ಅವಧಿಯಲ್ಲಿ ರಣವೀರ್​ ಸಿಂಗ್ ಮನೆಯಲ್ಲೇ ಇದ್ದರು. ಆಗ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡಿದ್ದಾರೆ. ಈ ಮೂಲಕ ದೇಹದ ಫಿಟ್​ನೆಸ್​ ಹಾಳಾಗದಂತೆ ನೋಡಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಕಬೀರ್​ ಖಾನ್​ ನಿರ್ದೇಶನದ ಈ ಸಿನಿಮಾ 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಹೇಳಲಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಪಿಲ್​ ದೇವ್​ ಪಾತ್ರಕ್ಕೆ ರಣವೀರ್​ ಸಿಂಗ್​ ಲುಕ್​ ಸರಿಯಾಗಿ ಹೊಂದುತ್ತಿದೆ. ಇದಲ್ಲದೆ, ‘ಸೂರ್ಯವಂಶಿ’ ಸಿನಿಮಾದಲ್ಲಿ ರಣವೀರ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸರ್ಕಸ್’​ ಹಾಗೂ ‘ತಖ್ತ್’​ ಸಿನಿಮಾಗಳಲ್ಲೂ ರಣವೀರ್ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಫಾರ್ಮ್​ಹೌಸ್ ಖರಿದಿಸೋಕೆ ಮುಂದಾದ ರಣವೀರ್​ ಸಿಂಗ್; ಕಾರಣ ಏನು ಗೊತ್ತಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ