AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್ ಅಲ್ಲ, ‘ಡಾನ್ 3’ ಆಫರ್ ಮೊದಲು ಹೋಗಿದ್ದು ಈ ಸ್ಟಾರ್ ನಟನಿಗೆ

Don 3: ಬಹುನಿರೀಕ್ಷಿತ ಬಾಲಿವುಡ್ ಸಿನಿಮಾ ‘ಡಾನ್ 3’ ಆಫರ್ ಮೊದಲು ಹೋಗಿದ್ದು ರಣವೀರ್ ಸಿಂಗ್​ಗೆ ಅಲ್ಲ ಬದಲಿಗೆ ಬಾಲಿವುಡ್​ನ ಸ್ಟಾರ್ ಯುವನಟನಿಗೆ. ಯಾರದು?

ರಣವೀರ್ ಅಲ್ಲ, ‘ಡಾನ್ 3’ ಆಫರ್ ಮೊದಲು ಹೋಗಿದ್ದು ಈ ಸ್ಟಾರ್ ನಟನಿಗೆ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 11, 2024 | 6:24 PM

Share

ನಟ ರಣವೀರ್ ಸಿಂಗ್ (Ranveer Singh) ಅವರು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈ ಮೊದಲು ಶಾರುಖ್ ಖಾನ್ ಮಾಡಿದ್ದ ‘ಡಾನ್’ (2006) ಹಾಗೂ ‘ಡಾನ್ 2’ (2011) ಸಿನಿಮಾಗಳು ಹಿಟ್ ಆಗಿದ್ದವು. ಈಗ ಈ ಸ್ಥಾನಕ್ಕೆ ರಣವೀರ್ ಬಂದಿದ್ದಾರೆ. ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಏನೆಂದರೆ ರಣವೀರ್ ಸಿಂಗ್ ಅವರು ಈ ಚಿತ್ರಕ್ಕೆ ಮೊದಲ ಆಯ್ಕೆ ಆಗಿರಲಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ಫರ್ಹಾನ್ ಅಖ್ತರ್ ಅವರು ‘ಡಾನ್’ ಸರಣಿ ನಿರ್ದೇಶನ ಮಾಡಿದ್ದಾರೆ. ಅವರು ‘ಡಾನ್ 3’ ಚಿತ್ರಕ್ಕೆ ಕಥೆ ಸಿದ್ಧಪಡಿಸಿಕೊಂಡು ಶಾರುಖ್ ಖಾನ್ ಬಳಿ ಹೋಗಿದ್ದರು. ಆದರೆ, ಈ ಸಿನಿಮಾದ ಕಥೆ ಶಾರುಖ್ ಖಾನ್​ಗೆ ಇಷ್ಟ ಆಗಿಲ್ಲ. ಹೀಗಾಗಿ ಅವರು ಆಫರ್​ನ ರಿಜೆಕ್ಟ್ ಮಾಡಿದರು. ನಂತರ ಅವರು ಹೋಗಿದ್ದು ರಣಬೀರ್ ಕಪೂರ್ ಬಳಿ!

ರಣಬೀರ್ ಕಪೂರ್ ಅವರು ಆ ಸಂದರ್ಭದಲ್ಲಿ ‘ಅನಿಮಲ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಈ ವೇಳೆ ಅವುರ ರಣಬೀರ್​ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ, ಸಿನಿಮಾ ಮಾಡಲು ಅವರು ಒಪ್ಪಿಲ್ಲ. ರಣಬೀರ್ ರಿಮೇಕ್​ ಸಿನಿಮಾಗಳನ್ನು ಇಷ್ಟಪಡುವುದಿಲ್ಲ. ಅದೇ ರೀತಿ ಬೇರೆಯವರು ಮಾಡಿರೋ ಸಿನಿಮಾಗಳನ್ನು ಮುಂದುವರಿಸಿಕೊಂಡು ಹೋಗಲು ಅವರಿಗೆ ಇಷ್ಟ ಇಲ್ಲ. ಹೀಗಾಗಿ, ಅವರು ಈ ಸಿನಿಮಾದ ಭಾಗವಾಗಲು ನಿರಾಕರಿಸಿದರು.

ಇದನ್ನೂ ಓದಿ:ಬಾಲಿವುಡ್ ನಟಿ ಕೃತಿ ಸೆನನ್ ಧರಿಸಿರುವ ಈ ಉಡುಪಿನ ಬೆಲೆ ಎಷ್ಟು ಲಕ್ಷ ಗೊತ್ತೆ?

ನಂತರ ಫರ್ಹಾನ್ ಅವರು ಒಂದು ಚಾನ್ಸ್ ತೆಗೆದುಕೊಳ್ಳಲು ಹೋಗಿದ್ದು ರಣವೀರ್ ಸಿಂಗ್ ಬಳಿ. ಅವರು ಅಚ್ಚರಿ ಎಂಬಂತೆ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ ‘ಡಾನ್ 3’ಗೆ ಅವರು ಫೈನಲ್ ಆದರು. ರಣವೀರ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಒಂದು ಗೆಲುವಿನ ರುಚಿ ಸಿಗಬೇಕಿದೆ. ಈ ಕಾರಣಕ್ಕೆ ಅವರು ಈ ಚಿತ್ರವನ್ನು ಒಪ್ಪಿಕೊಂಡರು.

ರಣವೀರ್ ಸಿಂಗ್ ಅವರು ‘ಡಾನ್’ ಆಗುತ್ತಿರುವುದಕ್ಕೆ ಅನೇಕರಿಗೆ ಅಸಮಾಧಾನ ಇದೆ. ಶಾರುಖ್ ಖಾನ್ ಮಾಡಿದ ಪಾತ್ರವನ್ನು ಅವರು ಹೇಗೆ ನಿರ್ವಹಿಸಲು ಸಾಧ್ಯ ಎಂಬುದು ಅನೇಕರ ಪ್ರಶ್ನೆ. ಈ ಬಗ್ಗೆ ಫರ್ಹಾನ್ ಅಖ್ತರ್ ಅವರ ಕಡೆಯಿಂದ ಉತ್ತರ ಸಿಕ್ಕಿತ್ತು. ‘ಅಮಿತಾಭ್ ಬಚ್ಚನ್ ಮಾಡಿದ ಡಾನ್ ಪಾತ್ರವನ್ನು ಶಾರುಖ್ ಖಾನ್ ಮಾಡಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ಶಾರುಖ್​ನ ಜನರು ಒಪ್ಪಿಕೊಂಡರು. ಈಗಲೂ ಹಾಗೆಯೇ ಆಗುತ್ತದೆ’ ಎಂದಿದ್ದರು ಅವರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Sat, 10 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್