ರಣವೀರ್ ಅಲ್ಲ, ‘ಡಾನ್ 3’ ಆಫರ್ ಮೊದಲು ಹೋಗಿದ್ದು ಈ ಸ್ಟಾರ್ ನಟನಿಗೆ

Don 3: ಬಹುನಿರೀಕ್ಷಿತ ಬಾಲಿವುಡ್ ಸಿನಿಮಾ ‘ಡಾನ್ 3’ ಆಫರ್ ಮೊದಲು ಹೋಗಿದ್ದು ರಣವೀರ್ ಸಿಂಗ್​ಗೆ ಅಲ್ಲ ಬದಲಿಗೆ ಬಾಲಿವುಡ್​ನ ಸ್ಟಾರ್ ಯುವನಟನಿಗೆ. ಯಾರದು?

ರಣವೀರ್ ಅಲ್ಲ, ‘ಡಾನ್ 3’ ಆಫರ್ ಮೊದಲು ಹೋಗಿದ್ದು ಈ ಸ್ಟಾರ್ ನಟನಿಗೆ
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 11, 2024 | 6:24 PM

ನಟ ರಣವೀರ್ ಸಿಂಗ್ (Ranveer Singh) ಅವರು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈ ಮೊದಲು ಶಾರುಖ್ ಖಾನ್ ಮಾಡಿದ್ದ ‘ಡಾನ್’ (2006) ಹಾಗೂ ‘ಡಾನ್ 2’ (2011) ಸಿನಿಮಾಗಳು ಹಿಟ್ ಆಗಿದ್ದವು. ಈಗ ಈ ಸ್ಥಾನಕ್ಕೆ ರಣವೀರ್ ಬಂದಿದ್ದಾರೆ. ಈಗ ಕೇಳಿ ಬರುತ್ತಿರುವ ಹೊಸ ಮಾಹಿತಿ ಏನೆಂದರೆ ರಣವೀರ್ ಸಿಂಗ್ ಅವರು ಈ ಚಿತ್ರಕ್ಕೆ ಮೊದಲ ಆಯ್ಕೆ ಆಗಿರಲಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ಫರ್ಹಾನ್ ಅಖ್ತರ್ ಅವರು ‘ಡಾನ್’ ಸರಣಿ ನಿರ್ದೇಶನ ಮಾಡಿದ್ದಾರೆ. ಅವರು ‘ಡಾನ್ 3’ ಚಿತ್ರಕ್ಕೆ ಕಥೆ ಸಿದ್ಧಪಡಿಸಿಕೊಂಡು ಶಾರುಖ್ ಖಾನ್ ಬಳಿ ಹೋಗಿದ್ದರು. ಆದರೆ, ಈ ಸಿನಿಮಾದ ಕಥೆ ಶಾರುಖ್ ಖಾನ್​ಗೆ ಇಷ್ಟ ಆಗಿಲ್ಲ. ಹೀಗಾಗಿ ಅವರು ಆಫರ್​ನ ರಿಜೆಕ್ಟ್ ಮಾಡಿದರು. ನಂತರ ಅವರು ಹೋಗಿದ್ದು ರಣಬೀರ್ ಕಪೂರ್ ಬಳಿ!

ರಣಬೀರ್ ಕಪೂರ್ ಅವರು ಆ ಸಂದರ್ಭದಲ್ಲಿ ‘ಅನಿಮಲ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಈ ವೇಳೆ ಅವುರ ರಣಬೀರ್​ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ, ಸಿನಿಮಾ ಮಾಡಲು ಅವರು ಒಪ್ಪಿಲ್ಲ. ರಣಬೀರ್ ರಿಮೇಕ್​ ಸಿನಿಮಾಗಳನ್ನು ಇಷ್ಟಪಡುವುದಿಲ್ಲ. ಅದೇ ರೀತಿ ಬೇರೆಯವರು ಮಾಡಿರೋ ಸಿನಿಮಾಗಳನ್ನು ಮುಂದುವರಿಸಿಕೊಂಡು ಹೋಗಲು ಅವರಿಗೆ ಇಷ್ಟ ಇಲ್ಲ. ಹೀಗಾಗಿ, ಅವರು ಈ ಸಿನಿಮಾದ ಭಾಗವಾಗಲು ನಿರಾಕರಿಸಿದರು.

ಇದನ್ನೂ ಓದಿ:ಬಾಲಿವುಡ್ ನಟಿ ಕೃತಿ ಸೆನನ್ ಧರಿಸಿರುವ ಈ ಉಡುಪಿನ ಬೆಲೆ ಎಷ್ಟು ಲಕ್ಷ ಗೊತ್ತೆ?

ನಂತರ ಫರ್ಹಾನ್ ಅವರು ಒಂದು ಚಾನ್ಸ್ ತೆಗೆದುಕೊಳ್ಳಲು ಹೋಗಿದ್ದು ರಣವೀರ್ ಸಿಂಗ್ ಬಳಿ. ಅವರು ಅಚ್ಚರಿ ಎಂಬಂತೆ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ ‘ಡಾನ್ 3’ಗೆ ಅವರು ಫೈನಲ್ ಆದರು. ರಣವೀರ್ ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಒಂದು ಗೆಲುವಿನ ರುಚಿ ಸಿಗಬೇಕಿದೆ. ಈ ಕಾರಣಕ್ಕೆ ಅವರು ಈ ಚಿತ್ರವನ್ನು ಒಪ್ಪಿಕೊಂಡರು.

ರಣವೀರ್ ಸಿಂಗ್ ಅವರು ‘ಡಾನ್’ ಆಗುತ್ತಿರುವುದಕ್ಕೆ ಅನೇಕರಿಗೆ ಅಸಮಾಧಾನ ಇದೆ. ಶಾರುಖ್ ಖಾನ್ ಮಾಡಿದ ಪಾತ್ರವನ್ನು ಅವರು ಹೇಗೆ ನಿರ್ವಹಿಸಲು ಸಾಧ್ಯ ಎಂಬುದು ಅನೇಕರ ಪ್ರಶ್ನೆ. ಈ ಬಗ್ಗೆ ಫರ್ಹಾನ್ ಅಖ್ತರ್ ಅವರ ಕಡೆಯಿಂದ ಉತ್ತರ ಸಿಕ್ಕಿತ್ತು. ‘ಅಮಿತಾಭ್ ಬಚ್ಚನ್ ಮಾಡಿದ ಡಾನ್ ಪಾತ್ರವನ್ನು ಶಾರುಖ್ ಖಾನ್ ಮಾಡಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ಶಾರುಖ್​ನ ಜನರು ಒಪ್ಪಿಕೊಂಡರು. ಈಗಲೂ ಹಾಗೆಯೇ ಆಗುತ್ತದೆ’ ಎಂದಿದ್ದರು ಅವರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Sat, 10 February 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ