AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಂಪ್​ವಾಕ್ ಮಧ್ಯೆ ಕಂಡ ದೀಪಿಕಾ, ಕರಣ್​ ಜೋಹರ್​ಗೆ ಮುತ್ತಿಟ್ಟ ರಣವೀರ್ ಸಿಂಗ್

ದೀಪಿಕಾ ಪಡುಕೋಣೆ ಅವರನ್ನು ಕಂಡರೆ ರಣವೀರ್ ಸಿಂಗ್​ಗೆ ಎಲ್ಲಿಲ್ಲದ ಪ್ರೀತಿ. ಸಾರ್ವಜನಿಕವಾಗಿ ಅನೇಕ ಬಾರಿ ಅವರು ಪ್ರೀತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇದಕ್ಕೆ ಹೊಸ ವಿಡಿಯೋ ಸಾಕ್ಷ್ಯ ಸಿಕ್ಕಿದೆ.

ರ‍್ಯಾಂಪ್​ವಾಕ್ ಮಧ್ಯೆ ಕಂಡ ದೀಪಿಕಾ, ಕರಣ್​ ಜೋಹರ್​ಗೆ ಮುತ್ತಿಟ್ಟ ರಣವೀರ್ ಸಿಂಗ್
ರಣವೀರ್
ರಾಜೇಶ್ ದುಗ್ಗುಮನೆ
|

Updated on: Jul 21, 2023 | 11:16 AM

Share

ರಣವೀರ್ ಸಿಂಗ್ (Ranveer Singh) ಅವರ ವ್ಯಕ್ತಿತ್ವ ತುಂಬಾನೇ ಭಿನ್ನವಾದುದು. ಅವರು ಯಾವುದಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಈ ಕಾರಣಕ್ಕೆ ಅವರು ಯಾವಾಗಲೂ ಚಿಲ್​ ಆಗಿ ಕಾಣಿಸಿಕೊಳ್ಳುತ್ತಾರೆ. ಈಗ ರಣವೀರ್ ಸಿಂಗ್ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರ‍್ಯಾಂಪ್ ವಾಕ್​ ಮಾಡುತ್ತಿದ್ದಾರೆ. ಇದೇ ವೇಳೆ ಅವರು ದೀಪಿಕಾ ಪಡುಕೋಣೆ ಹಾಗೂ ಕರಣ್ ಜೋಹರ್​ಗೆ ಕಿಸ್ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ರಣವೀರ್ ಸಿಂಗ್ ಹಾಗೂ ದೀಪಿಕಾ ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರನ್ನು ಕಂಡರೆ ರಣವೀರ್ ಸಿಂಗ್​ಗೆ ಎಲ್ಲಿಲ್ಲದ ಪ್ರೀತಿ. ಸಾರ್ವಜನಿಕವಾಗಿ ಅನೇಕ ಬಾರಿ ಅವರು ಪ್ರೀತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇದಕ್ಕೆ ಹೊಸ ವಿಡಿಯೋ ಸಾಕ್ಷ್ಯ ಸಿಕ್ಕಿದೆ.

ರಣವೀರ್ ಸಿಂಗ್ ಅವರು ರ‍್ಯಾಂಪ್ ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ರ‍್ಯಾಂಪ್ ವಾಕ್ ಮಾಡುವ ವೇದಿಕೆ ಪಕ್ಕದಲ್ಲಿ ದೀಪಿಕಾ ಪಡುಕೋಣೆ, ಕರಣ್​ ಜೋಹರ್ ಮೊದಲಾದವರು ಕುಳಿತಿದ್ದರು. ಮೊದಲು ರಣವೀರ್ ಸಿಂಗ್ ಅವರು ಪತ್ನಿ ದೀಪಿಕಾ ಪಡುಕೋಣೆ ಅವರನ್ನು ನೋಡಿದ್ದಾರೆ. ಈ ವೇಳೆ ಅವರು ಪತ್ನಿಯ ಕೆನ್ನೆಗೆ ಕಿಸ್ ಮಾಡಿದ್ದಾರೆ. ಪಕ್ಕದಲ್ಲೇ ಇದ್ದ ಕರಣ್ ಜೋಹರ್ ಕೆನ್ನೆಗೂ ರಣವೀರ್ ಸಿಂಗ್ ಕಿಸ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಇದಕ್ಕೆ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

ಕರಣ್ ಜೋಹರ್ ನಿರ್ದೇಶನದ, ರಣವೀರ್ ಸಿಂಗ್-ಆಲಿಯಾ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಈ ಸಿನಿಮಾ ಜುಲೈ​ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಮೂಡಿದೆ. ರಣವೀರ್ ಸಿಂಗ್ ನಟನೆಯ ಸಾಲು ಸಾಲು ಸಿನಿಮಾಗಳು ಫ್ಲಾಪ್ ಆಗಿವೆ. ಈ ಚಿತ್ರದ ಮೂಲಕ ಅವರಿಗೆ ಗೆಲುವು ಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ