Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ವಿಚಾರದಲ್ಲಿ ರಣವೀರ್ ಸಿಂಗ್ ಹೇಳಿದ್ದು ಸುಳ್ಳು? ಇಲ್ಲಿದೆ ವಿಡಿಯೋ

ಯಶ್ ರಾಜ್ ಫಿಲ್ಮ್ಸ್ ಕಚೇರಿಯಲ್ಲಿ ರಣವಿರ್ ಸಿಂಗ್ ಅವರು ಅನುಷ್ಕಾನ ಭೇಟಿ ಮಾಡಿದ್ದರು. ದೀಪಿಕಾರ ಮೊದಲ ಭೇಟಿಯನ್ನು ಹೇಗೆ ವಿವರಿಸಿದ್ದರೋ, ಇದೇ ಮಾದರಿಯಲ್ಲಿ ಅವರು ಅನುಷ್ಕಾ ಭೇಟಿಯನ್ನು ಬಣ್ಣಿಸಿದ್ದರು.

ಪ್ರೀತಿ ವಿಚಾರದಲ್ಲಿ ರಣವೀರ್ ಸಿಂಗ್ ಹೇಳಿದ್ದು ಸುಳ್ಳು? ಇಲ್ಲಿದೆ ವಿಡಿಯೋ
ರಣವೀರ್ ಸಿಂಗ್
Follow us
ರಾಜೇಶ್ ದುಗ್ಗುಮನೆ
|

Updated on: Oct 28, 2023 | 10:34 AM

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ‘ಕಾಫಿ ವಿತ್ ಕರಣ್ ಸೀಸನ್ 8’ರ ಮೊದಲ ಅತಿಥಿಯಾಗಿ ಆಗಮಿಸಿದ್ದರು. ಇವರ ಮಾತುಗಳು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಶೋನಲ್ಲಿ ದೀಪಿಕಾ ಮೇಲೆ ರಣವೀರ್ ಕೋಪ ಮಾಡಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದೆ. ಇದರ ಜೊತೆ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. 2012ರಲ್ಲಿ ಮೊದಲ ಬಾರಿ ದೀಪಿಕಾನ ನೋಡಿದಾಗ ಹೇಗೆ ಅನಿಸಿತು ಎಂಬುದನ್ನು ರಣವೀರ್ ಸಿಂಗ್ ವಿವರಿಸಿದ್ದರು. ಇದೇ ಸ್ಟೋರಿಯನ್ನು ಅವರು ಅನುಷ್ಕಾ ಶರ್ಮಾ ಭೇಟಿ ಬಗ್ಗೆ ವಿವರಿಸುವಾಗಲೂ ಹೇಳಿದ್ದರು.

ಕರಣ್ ಜೋಹರ್ ಶೋನಲ್ಲಿ ರಣವೀರ್ ಸಿಂಗ್ ಅವರು ದೀಪಿಕಾ ಬಗ್ಗೆ ಮಾತನಾಡಿದ್ದರು. ‘ನಾನು ಟೇಬಲ್ ಮೇಲೆ ಕುಳಿತಿದ್ದೆ. ಅಲ್ಲೇ ಸಮೀಪ ಬಾಗಿಲು ಇತ್ತು. ಸಮುದ್ರ ಸಮೀಪ ಇದ್ದಿದ್ದರಿಂದ ಗಾಳಿ ಬರುತ್ತಿತ್ತು. ಅವರು ಬಾಗಿಲು ತೆರೆದು ಬರುವಾಗ ಕೂದಲು ಹಾರುತ್ತಿತ್ತು’ ಎಂದು ರಣವೀರ್ ಸಿಂಗ್ ಅವರು ಕಾಫಿ ವಿತ್ ಕರಣ್​ನಲ್ಲಿ ಹೇಳಿಕೊಂಡಿದ್ದರು. ಅನುಷ್ಕಾ ಶರ್ಮಾ ಬಗ್ಗೆಯೂ ಅವರು ಇದೇ ರೀತಿ ಹೇಳಿದ್ದರು. ಅದೂ ಕಾಫಿ ವಿತ್ ಕರಣ್ ಶೋನಲ್ಲಿ.

ಯಶ್ ರಾಜ್ ಫಿಲ್ಮ್ಸ್ ಕಚೇರಿಯಲ್ಲಿ ರಣವಿರ್ ಸಿಂಗ್ ಅವರು ಅನುಷ್ಕಾನ ಭೇಟಿ ಮಾಡಿದ್ದರು. ದೀಪಿಕಾರ ಮೊದಲ ಭೇಟಿಯನ್ನು ಹೇಗೆ ವಿವರಿಸಿದ್ದರೋ, ಇದೇ ಮಾದರಿಯಲ್ಲಿ ಅವರು ಅನುಷ್ಕಾ ಭೇಟಿಯನ್ನು ಬಣ್ಣಿಸಿದ್ದರು. ಈ ಕಾರಣದಿಂದ ಅನೇಕರು ರಣವೀರ್ ಸಿಂಗ್ ಹೇಳಿಕೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಪ್ರೀತಿ ವಿಚಾರದಲ್ಲಿ ಎದುರು ಹೇಳುವುದೇ ಒಂದು ಒಳಗೆ ಇರುವುದೇ ಇನ್ನೊಂದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕದ್ದುಮುಚ್ಚಿ ಬೇರೆಯವರ ಜೊತೆ ಸುತ್ತಾಡಿದ್ದ ದೀಪಿಕಾ? ಸಿಟ್ಟಾದ ರಣವೀರ್ ಸಿಂಗ್  

ಮೂರು ವರ್ಷಗಳ ಕಾಲ ಡೇಟ್ ಮಾಡಿದ ಬಳಿಕ ರಣವೀರ್ ಅವರು ದೀಪಿಕಾನ ಮದುವೆ ಆಗುವ ನಿರ್ಧಾರಕ್ಕೆ ಬಂದರು. 2015ರಲ್ಲಿ ದೀಪಿಕಾ ಪಡುಕೋಣೆಗೆ ರಣವೀರ್ ಸಿಂಗ್ ಪ್ರಪೋಸ್ ಮಾಡಿದ್ದರು. ಸಮುದ್ರದ ಮಧ್ಯದಲ್ಲಿರುವ ದ್ವೀಪದಲ್ಲಿ ದೀಪಿಕಾಗೆ ರಿಂಗ್ ಕೊಟ್ಟು ಪ್ರೇಮ ನಿವೇದನೆ ಮಾಡಿದರು ರಣವೀರ್. ಈಗ ದೀಪಿಕಾ-ರಣವೀರ್ ಮದುವೆ ಆಗಿ ಐದು ವರ್ಷ ಪೂರ್ಣಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಅವರು ಮದುವೆ ವಿಡಿಯೋ ರಿಲೀಸ್ ಮಾಡಿದ್ದಾರೆ. ದೂರದ ಇಟಲಿಯಲ್ಲಿ ಈ ಜೋಡಿ ಮದುವೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್