AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕ್ಷಸ’ ಆಗ್ತಾರಾ ರಣವೀರ್​ ಸಿಂಗ್​? ‘ಹನುಮಾನ್​’ ನಿರ್ದೇಶಕನ ಜೊತೆ ಹೊಸ ಸಿನಿಮಾ

ದಕ್ಷಿಣ ಭಾರತದ ನಿರ್ದೇಶಕರ ಜೊತೆ ಸಿನಿಮಾ ಮಾಡಲು ಬಾಲಿವುಡ್​ ಹೀರೋಗಳು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಅಟ್ಲಿ, ಪ್ರಭುದೇವ, ಎ.ಆರ್​. ಮುರುಗದಾಸ್​ ರೀತಿ ಈಗ ಪ್ರಶಾಂತ್ ವರ್ಮಾ ಅವರಿಗೂ ಬೇಡಿಕೆ ಬಂದಿದೆ. ಅವರ ಜೊತೆ ನಟ ರಣವೀರ್​ ಸಿಂಗ್​ ಸಿನಿಮಾ ಮಾಡಲು ಉತ್ಸಾಹ ಹೊಂದಿದ್ದಾರೆ ಎಂದು ಸುದ್ದಿ ಆಗಿದೆ. ಈ ಸಿನಿಮಾದ ಟೈಟಲ್​ ಬಗ್ಗೆಯೂ ಗಾಸಿಪ್​ ಹಬ್ಬಿದೆ.

‘ರಾಕ್ಷಸ’ ಆಗ್ತಾರಾ ರಣವೀರ್​ ಸಿಂಗ್​? ‘ಹನುಮಾನ್​’ ನಿರ್ದೇಶಕನ ಜೊತೆ ಹೊಸ ಸಿನಿಮಾ
ರಣವೀರ್​ ಸಿಂಗ್​
Follow us
ಮದನ್​ ಕುಮಾರ್​
|

Updated on: Apr 29, 2024 | 9:51 PM

ಈ ವರ್ಷ ಅತಿ ದೊಡ್ಡ ಯಶಸ್ಸು ಕಂಡ ‘ಹನುಮಾನ್​’ ಸಿನಿಮಾದಿಂದ ನಿರ್ದೇಶಕ ಪ್ರಶಾಂತ್​ ವರ್ಮಾ (Prasanth Varma) ಅವರ ಬೇಡಿಕೆ ಡಬಲ್​ ಆಗಿದೆ. ಪುರಾಣದ ಕಥೆಗಳ ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವಲ್ಲಿ ಅವರು ಹೆಚ್ಚು ಉತ್ಸಾಹ ತೋರಿಸುತ್ತಿದ್ದಾರೆ. ಈಗ ರಣವೀರ್​ ಸಿಂಗ್​ (Ranveer Singh) ಮತ್ತು ಪ್ರಶಾಂತ್​ ವರ್ಮಾ ಅವರು ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆ ಸುದ್ದಿ ಆಗಿದೆ. ಅಲ್ಲದೇ, ಈ ಸಿನಿಮಾದ ಟೈಟಲ್​ ಏನು ಎಂಬ ಬಗ್ಗೆಯೂ ಗಾಸಿಪ್​ ಕೇಳಿಬಂದಿದೆ. ವರದಿಗಳ ಪ್ರಕಾರ, ಈ ಸಿನಿಮಾಗೆ ‘ರಾಕ್ಷಸ’ (Rakshas) ಎಂದು ಟೈಟಲ್​ ಇಡಲಾಗಿದೆ. ರಣವೀರ್​ ಸಿಂಗ್​ ಅಭಿಮಾನಿಗಳು ಈ ಸುದ್ದಿ ಕೇಳಿ ಎಗ್ಸೈಟ್​ ಆಗಿದ್ದಾರೆ.

ನಟ ರಣವೀರ್​ ಸಿಂಗ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಸಿಂಗಂ ಅಗೇನ್​’ ಚಿತ್ರದಲ್ಲಿ ಅವರು ನಟಿಸಿದ್ದು, ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ‘ಡಾನ್​ 3’ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರಿಗೆ ಪ್ರಮುಖ ಪಾತ್ರ ನೀಡಲಾಗಿದೆ. ಅದರ ಬೆನ್ನಲ್ಲೇ ಅವರು ‘ಹನುಮಾನ್​’ ಖ್ಯಾತಿಯ ನಿರ್ದೇಶಕ ಪ್ರಶಾಂತ್​ ವರ್ಮಾ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಇದನ್ನೂ ಓದಿ: ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ಈ ಸಿನಿಮಾಗೆ ಸಂಬಂಧಿಸಿದಂತೆ ಪ್ರಶಾಂತ್​ ವರ್ಮಾ ಮತ್ತು ರಣವೀರ್ ಸಿಂಗ್​ ಅವರು ಈಗಾಗಲೇ ಹಲವು ಬಾರಿ ಮಾತುಕಥೆ ನಡೆಸಿದ್ದಾರೆ. ಇನ್ನೊಂದು ವರದಿಯ ಪ್ರಕಾರ, ಇತ್ತೀಚೆಗೆ ಹನುಮಾನ್​ ಜಯಂತಿ ಸಂದರ್ಭದಲ್ಲಿ ಈ ಚಿತ್ರಕ್ಕೆ ಪೂಜೆ ಕೂಡ ಮಾಡಲಾಗಿದೆ. ಈ ಸಿನಿಮಾದಲ್ಲಿ ರಣವೀರ್​ ಸಿಂಗ್​ ಅವರ ಪಾತ್ರಕ್ಕೆ ನೆಗೆಟಿವ್​ ಶೇಡ್​ ಇರಲಿದೆ ಎನ್ನಲಾಗಿದೆ.

‘ರಾಕ್ಷಸ’ ಸಿನಿಮಾದ ಕಥೆಯು ಸ್ವಾತಂತ್ರ್ಯಪೂರ್ವ ಕಾಲಘಟ್ಟದಲ್ಲಿ ನಡೆಯಲಿದೆ. ಈ ಕಥೆಗೆ ಪುರಾಣದ ಹಿನ್ನೆಲೆ ಕೂಡ ಇರಲಿದೆ. ಇದು ‘ಪ್ರಶಾಂತ್​ ವರ್ಮಾ ಸಿನಿಮ್ಯಾಟಿಕ್​ ಯೂನಿವರ್ಸ್​’ ಒಳಗೆ ಬರುವ ಒಂದು ಪಾತ್ರ ಆಗಿರಲಿದೆ. ಮುಂದೆ ಈ ಪ್ರಾಜೆಕ್ಟ್​ಗೆ ಸಂಬಂಧಪಟ್ಟಂತೆ ಹೊಸ ಹೊಸ ಅಪ್​ಡೇಟ್​ಗಳು ಸಿಗಲಿವೆ. ಸ್ಕ್ರಿಪ್ಟ್ ಕೆಲಸ ಸಂಪೂರ್ಣ ಮುಗಿದಿದ್ದು, ಶೂಟಿಂಗ್​ ದಿನಾಂಕದ ಬಗ್ಗೆ ಅಂತಿಮ ಚರ್ಚೆ ಆಗುತ್ತದೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ