AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರ್ಮ್​ಹೌಸ್ ಖರಿದಿಸೋಕೆ ಮುಂದಾದ ರಣವೀರ್​ ಸಿಂಗ್; ಕಾರಣ ಏನು ಗೊತ್ತಾ?

ಕಲರ್ಸ್​ನಲ್ಲಿ ಪ್ರಸಾರವಾಗುವ ‘ದಿ ಬಿಗ್​ ಪಿಕ್ಚರ್ಸ್​’ ಕ್ವಿಜ್​ ಶೋಅನ್ನು ರಣವೀರ್​ ಸಿಂಗ್​ ನಡೆಸಿಕೊಡಲಿದ್ದಾರೆ. ರಣವೀರ್​ ಸಿಂಗ್​ ಈ ಶೋನ ನಿರೂಪಣೆ ಮಾಡಲಿದ್ದಾರೆ.

ಫಾರ್ಮ್​ಹೌಸ್ ಖರಿದಿಸೋಕೆ ಮುಂದಾದ ರಣವೀರ್​ ಸಿಂಗ್; ಕಾರಣ ಏನು ಗೊತ್ತಾ?
ರಣವೀರ್​ ಸಿಂಗ್​-ಸಲ್ಮಾನ್​ ಖಾನ್​
TV9 Web
| Edited By: |

Updated on: Oct 07, 2021 | 9:44 PM

Share

ಬೆಳ್ಳಿ ಪರದೆಯಲ್ಲಿ ಉತ್ತುಂಗಕ್ಕೆ ತೆರಳಿದ ನಟ-ನಟಿಯರಿಗೆ ಕಿರುತೆರೆ ಶೋ ನಡೆಸಿಕೊಡೋಕೆ ಬೇಡಿಕೆ ಬರುತ್ತದೆ. ಕಿಚ್ಚ ಸುದೀಪ್​, ಪುನೀತ್ ರಾಜ್​ಕುಮಾರ್​, ಸಲ್ಮಾನ್​ ಖಾನ್, ಅಮಿತಾಭ್​ ಬಚ್ಚನ್​,​ ಕಮಲ್​ ಹಾಸನ್​ ಸೇರಿ ಸಾಕಷ್ಟು ನಟರು ಈಗಾಗಲೇ ಕಿರುತೆರೆಗೆ ಕಾಲಿಟ್ಟಿದ್ದಾರೆ. ಈಗ ನಟ ರಣವೀರ್​ ಸಿಂಗ್​ ಸರದಿ. ​ ಚಿತ್ರರಂಗದಲ್ಲಿ ರಣವೀರ್ ಬಹುಬೇಡಿಕೆಯ ನಟ. ಅವರ ಕೈಯಲ್ಲಿ ಸದ್ಯ ಹಲವು ಸಿನಿಮಾಗಳಿವೆ. ಹೀಗಿರುವಾಗಲೇ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಇದು ಯಶಸ್ಸು ಪಡೆದರೆ ಅವರು ಸಲ್ಮಾನ್​ ಖಾನ್​ ರೀತಿಯಲ್ಲೇ ಫಾರ್ಮ್​ಹೌಸ್​ ಹೊಂದುತ್ತೇನೆ ಎಂದಿದ್ದಾರೆ.

ಕಲರ್ಸ್​ನಲ್ಲಿ ಪ್ರಸಾರವಾಗುವ ‘ದಿ ಬಿಗ್​ ಪಿಕ್ಚರ್ಸ್​’ ಕ್ವಿಜ್​ ಶೋಅನ್ನು ರಣವೀರ್​ ಸಿಂಗ್​ ನಡೆಸಿಕೊಡಲಿದ್ದಾರೆ. ರಣವೀರ್​ ಸಿಂಗ್​ ಈ ಶೋನ ನಿರೂಪಣೆ ಮಾಡಲಿದ್ದಾರೆ. ಈ ಕ್ವಿಜ್​ ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ಬುದ್ಧಿಮಟ್ಟ ಮತ್ತು ವಿಶ್ಯುವಲ್​ ಮೆಮೋರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ಈ ಶೋನ ಬಗ್ಗೆ ಮಾತನಾಡೋಕೆ ಕರೆದ ಪ್ರೆಸ್​ಮೀಟ್​ನಲ್ಲಿ ರಣವೀರ್​ ಮಾತನಾಡಿದ್ದಾರೆ.

ಭವಿಷ್ಯದ ‘ಬಿಗ್​ ಪಿಕ್ಚರ್ಸ್​’ ಏನು ಎಂದು ರಣವೀರ್​ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ನನಗೆ ಒಂದು ಸುಂದರ ಮನೆ ಬೇಕು. ಅಲ್ಲಿ ನನ್ನ ಹೆಂಡತಿ ದೀಪಿಕಾ, ನನ್ನ ಮಕ್ಕಳು ಹಾಗೂ ಕುಟುಂಬದವರು ಇರಬೇಕು. ಕೊನೆಯ ದಿನದವರೆಗೂ ನಾನು ಮನರಂಜನೆ ನೀಡಬೇಕು. ಒಂದೊಮ್ಮೆ ಈ ಶೋ ಹಿಟ್​ ಆದರೆ ನಾನು ಪಾನ್​ವೆಲ್​ನಲ್ಲಿ ಫಾರ್ಮ್​​ಹೌಸ್​ ಖರೀದಿಸುತ್ತೇನೆ’ ಎಂದಿದ್ದಾರೆ.

ಸಲ್ಮಾನ್​ ಖಾನ್​ ಈ ಭಾಗದಲ್ಲಿ ಫಾರ್ಮ್​ಹೌಸ್​ ಹೊಂದಿದ್ದಾರೆ. ಈ ಫಾರ್ಮ್​ಹೌಸ್​ಗೆ ಅರ್ಪಿತಾ ಫಾರ್ಮ್ಸ್​​ (ಸಲ್ಮಾನ್​ ಸಹೋದರಿ) ಎಂದು ಹೆಸರು ಇಡಲಾಗಿದೆ. ಲಾಕ್​ಡೌನ್​ ಸಂದರ್ಭದಲ್ಲಿ ಸಲ್ಮಾನ್​ ಖಾನ್​ ಇಲ್ಲಿಯೇ ಸಮಯ ಕಳೆದಿದ್ದರು.

ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಕಬೀರ್​ ಖಾನ್​ ನಿರ್ದೇಶನದ ಈ ಸಿನಿಮಾ 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಹೇಳಲಿದೆ. ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ನಟಿಸುತ್ತಿದ್ದಾರೆ. ಈ ಮೊದಲು ರಿಲೀಸ್​ ಆದ ಪೋಸ್ಟರ್​ಗಳನ್ನು ನೋಡಿ ಅಭಿಮಾನಿಗಳು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಪಿಲ್​ ದೇವ್​ ಪಾತ್ರಕ್ಕೆ ರಣವೀರ್​ ಸಿಂಗ್​ ಲುಕ್​ ಸರಿಯಾಗಿ ಹೊಂದುತ್ತಿದೆ. ಇದಲ್ಲದೆ, ‘ಸೂರ್ಯವಂಶಿ’ ಸಿನಿಮಾದಲ್ಲಿ ರಣವೀರ್​ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸರ್ಕಸ್’​ ಹಾಗೂ ‘ತಖ್ತ್’​ ಸಿನಿಮಾಗಳಲ್ಲೂ ರಣವೀರ್ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ