AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ರಣ್ವೀರ್ ಸಿಂಗ್

Ranveer Singh new movie: ‘ಧುರಂಧರ್’ ಮತ್ತು ‘ಧುರಂಧರ್ 2’ ಅಂಥಹಾ ಎರಡೂ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ರಣ್ವೀರ್ ಸಿಂಗ್ ಅವರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ರಣ್ವೀರ್ ಅವರ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಣ್ವೀರ್ ಅವರ ಹೊಸ ಸಿನಿಮಾದ ಬಗ್ಗೆ ಖಚಿತ ಸುದ್ದಿ ಹೊರಬಿದ್ದಿದೆ.

‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ರಣ್ವೀರ್ ಸಿಂಗ್
Ranveer Singh
ಮಂಜುನಾಥ ಸಿ.
|

Updated on:Jun 30, 2026 | 3:41 PM

Share

ಧುರಂಧರ್’ (Dhurandhar) ಸಿನಿಮಾದ ಯಶಸ್ಸಿನ ನಂತರ ರಣ್ವೀರ್ ಸಿಂಗ್ ನಟಿಸಬೇಕಿದ್ದ ‘ಡಾನ್ 3’ ಸಿನಿಮಾದಿಂದ ಅವರು ಹಿಂದೆ ಸರಿದಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಅಂಥಹಾ ಎರಡೂ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ರಣ್ವೀರ್ ಸಿಂಗ್ ಅವರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ರಣ್ವೀರ್ ಅವರ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಣ್ವೀರ್ ಅವರ ಹೊಸ ಸಿನಿಮಾದ ಬಗ್ಗೆ ಖಚಿತ ಸುದ್ದಿ ಹೊರಬಿದ್ದಿದೆ.

ರಣವೀರ್ ಸಿಂಗ್ ಅವರು ಜೈ ಮೆಹ್ತಾ ನಿರ್ದೇಶಿಸಲಿರುವ ‘ಪ್ರಳಯ’ ಹೆಸರಿನ ಸಿನಿಮಾನಲ್ಲಿ ನಟಿಸುವುದು ಖಾತ್ರಿಯಾಗಿದೆ. ವಿಶೇಷವೆಂದರೆ ಈ ಸಿನಿಮಾ ಸಾಮಾನ್ಯ ಕತೆ ಹೊಂದಿರುವ ಸಿನಿಮಾ ಅಲ್ಲ ಬದಲಿಗೆ ಹಾಲಿವುಡ್​​ನಲ್ಲಿ ಜನಪ್ರಿಯವಾಗಿರುವ ಜೋಂಬಿ ಥ್ರಿಲ್ಲರ್ ಕತೆಯನ್ನು ಹೊಂದಿರುವ ಸಿನಿಮಾ ಆಗಿದೆ. ಜೋಂಬಿಗಳೇ ತುಂಬಿರುವ ಪ್ರಪಂಚದಲ್ಲಿ ದಂಪತಿಯು, ಬದುಕಿ ಉಳಿಯುವ ಸರ್ವೈವಲ್ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ರಣ್ವೀರ್ ಸಿಂಗ್ ಅವರ ‘ಪ್ರಳಯ’ ಸಿನಿಮಾದ ಚಿತ್ರೀಕರಣವು 2026ರ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ. ಈ ಚಿತ್ರದ ಬಹುಪಾಲು ದೃಶ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಿಸಲು ಚಿತ್ರತಂಡ ಯೋಜನೆ ರೂಪಿಸಿದೆ. ಸಿನಿಮಾಕ್ಕಾಗಿ ತಯಾರಿಯನ್ನು ರಣ್ವೀರ್ ಸಿಂಗ್ ಈಗಾಗಲೇ ಆರಂಭಿಸಿದ್ದಾರೆ. ಜಾಂಬಿ ಥ್ರಿಲ್ಲರ್ ಆಗಿರುವ ಕಾರಣಕ್ಕೆ ಸಿನಿಮಾನಲ್ಲಿ ಅತಿಯಾದ ವಿಎಫ್​​ಎಕ್ಸ್, ಗ್ರಾಫಿಕ್ಸ್ ಬಳಕೆ ಆಗಲಿದೆ. ರಣ್ವೀರ್ ಸಿಂಗ್ ಸಹ ಇನ್ನಷ್ಟು ಯಂಗ್ ಆಗಿ ಕಾಣಿಸಿಕೊಳ್ಳಲು ತಯಾರಿ ಆರಂಭಿಸಿದ್ದಾರೆ.

ಇದನ್ನೂ ಓದಿ:ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು

ಸುಮಾರು 300 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ‘ಪ್ರಳಯ’ ಸಿನಿಮಾ ನಿರ್ಮಾಣ ಆಗಲಿದೆ. ರಣವೀರ್ ಸಿಂಗ್ ಅವರ ವೃತ್ತಿಜೀವನದ ಅತ್ಯಂತ ದುಬಾರಿ ಸಿನಿಮಾ ಇದಾಗಿರಲಿದೆ. ಈ ಸಿನಿಮಾನಲ್ಲಿ ನಾಯಕಿಯಾಗಿ ದಕ್ಷಿಣದ ನಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ‘ಲೋಕಃ’ ಸಿನಿಮಾದ ನಾಯಕಿ ಕಲ್ಯಾಣಿ ಪ್ರಿಯದರ್ಶನ್ ಈ ಸಿನಿಮಾನಲ್ಲಿ ರಣ್ವೀರ್​​ಗೆ ಜೋಡಿ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಣ್ವೀರ್ ಸಿಂಗ್ ಅವರು ‘ಧುರಂಧರ್’ ಮತ್ತು ‘ಧುರಂದರ್ 2’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಅಂಥಹದೇ ದೇಶಭಕ್ತಿಯ ಸಿನಿಮಾಗಳಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ ಅವರ ನಿರ್ದೇಶನದ ಹೊಸ ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಟಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಎಲ್ಲವನ್ನೂ ಸುಳ್ಳು ಮಾಡಿ ರಣ್ವೀರ್ ಅವರು ಜಾಂಬಿ ಥ್ರಿಲ್ಲರ್ ಕತೆಯನ್ನು ಕೈಗೆತ್ತಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Tue, 30 June 26

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!