AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?

ರಣವೀರ್​ ಸಿಂಗ್​ ಮತ್ತು ದೀಪಿಕಾ ಮದುವೆ ಆಗಿದ್ದಾರೆ. ರಣಬೀರ್ ಕಪೂರ್​ ಹಾಗೂ ಆಲಿಯಾ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. ಮದುವೆ ಆದ ನಂತರದಲ್ಲಿ ನಾಯಕಿಯರಾಗಲೀ ಅಥವಾ ಹೀರೋಗಳಾಗಲಿ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡರೆ ಕುಟುಂಬದವರಿಗೆ ಇಷ್ಟವಾಗುವುದಿಲ್ಲ.

ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?
ರಣವೀರ್​-ದೀಪಿಕಾ; ಆಲಿಯಾ
TV9 Web
| Edited By: |

Updated on: Dec 03, 2021 | 6:24 PM

Share

ರಣವೀರ್​ ಸಿಂಗ್​ ಹಾಗೂ ಆಲಿಯಾ ಭಟ್​ ಇಬ್ಬರನ್ನೂ ತೆರೆಮೇಲೆ ಒಟ್ಟಾಗಿ ನೋಡೋಕೆ ಅಭಿಮಾನಿಗಳು ಇಷ್ಟಪಡುತ್ತಾರೆ. ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ವರ್ಕ್​ ಆಗಿತ್ತು. ಈ ಸಿನಿಮಾದಲ್ಲಿ ಕೆಲ ಇಂಟಿಮೇಟ್​ ದೃಶ್ಯಗಳು ಇದ್ದವು. ಆಲಿಯಾ ಹಾಗೂ ರಣವೀರ್​ ಕಿಸ್ಸಿಂಗ್​ ದೃಶ್ಯಗಳು ಪಡ್ಡೆ ಹುಡುಗರಿಗೆ ಇಷ್ಟವಾಗಿತ್ತು. ಆದರೆ, ಈಗ ಆಲಿಯಾಗೆ ಕಿಸ್ ಮಾಡಲ್ಲ ಎಂದು ರಣವೀರ್​ ಪತ್ನಿ ದೀಪಿಕಾಗೆ ಪ್ರಾಮಿಸ್​ ಮಾಡಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಹಾಗಾದರೆ ಏನಿದು ವಿಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಣವೀರ್​ ಸಿಂಗ್​ ಮತ್ತು ದೀಪಿಕಾ ಮದುವೆ ಆಗಿದ್ದಾರೆ. ರಣಬೀರ್ ಕಪೂರ್​ ಹಾಗೂ ಆಲಿಯಾ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. ಮದುವೆ ಆದ ನಂತರದಲ್ಲಿ ನಾಯಕಿಯರಾಗಲೀ ಅಥವಾ ಹೀರೋಗಳಾಗಲಿ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡರೆ ಕುಟುಂಬದವರಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ರಣವೀರ್​ ಸಿಂಗ್​ ಅವರು ದೀಪಿಕಾಗೆ ಪ್ರಾಮಿಸ್​ ಒಂದನ್ನು ಮಾಡಿದ್ದಾರೆ.

ರಣವೀರ್​ ಸಿಂಗ್​ ಮತ್ತು ಆಲಿಯಾ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅನೇಕ ವರ್ಷಗಳ ನಂತರ ಕರಣ್​ ಜೋಹರ್ ನಿರ್ದೇಶನಕ್ಕೆ ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರವನ್ನು ಧರ್ಮ ಪ್ರೊಡಕ್ಷನ್​ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಶೀರ್ಷಿಕೆಯೇ ಹೇಳುವಂತೆ ಲವ್​ ಸ್ಟೋರಿಯೇ ಹೈಲೈಟ್​ ಆಗಿರಲಿದೆ.

ಈ ಸಿನಿಮಾದಲ್ಲಿ ಲಿಪ್​ ಲಾಕ್​ ದೃಶ್ಯವೊಂದನ್ನು ಕಂಪೋಸ್​ ಮಾಡಲಾಗಿದೆ. ಕಥೆ ಹೇಳುವಾಗ ಈ ದೃಶ್ಯಕ್ಕೆ ಕತ್ತರಿ ಹಾಕುವಂತೆ ಆನ್​ ಸ್ಕ್ರೀನ್ ಜೋಡಿ ಮನವಿ ಇಟ್ಟಿದೆ. ಚಿತ್ರದಲ್ಲಿ ಅತಿ ಅಗತ್ಯವಿದ್ದರೆ ಮಾತ್ರ ಕಿಸ್​ ಮಾಡಲು ಇಬ್ಬರೂ ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ. ಇನ್ನು, ದೀಪಿಕಾಗೆ ರಣವೀರ್ ಪ್ರಾಮಿಸ್​ ಒಂದನ್ನು ಮಾಡಿದ್ದಾರಂತೆ. ‘ಅನಗತ್ಯವಾಗಿ ಕಿಸ್ಸಿಂಗ್​ ದೃಶ್ಯಗಳಲ್ಲಿ ಎಂದಿಗೂ ಕಾಣಿಸಿಕೊಳ್ಳುವುದಿಲ್ಲ. ಮುಂದಿನ ಚಿತ್ರದಲ್ಲಿ ಆಲಿಯಾ ಜತೆ ಯಾವುದೇ ಇಂಟಿಮೇಟ್​ ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂದು ಅವರು ದೀಪಿಕಾಗೆ ಭಾಷೆ ನೀಡಿದ್ದಾರೆ ಎನ್ನಲಾಗುತ್ತಿದೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ 2023ರ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​ ಆಗೋಕೆ ಇನ್ನೂ ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕು. ಕೊವಿಡ್​ ಮೂರನೇ ಅಲೆ ಕಾಣಿಸಿಕೊಂಡರೆ ಚಿತ್ರದ ಕೆಲಸ ಮತ್ತಷ್ಟು ವಿಳಂಬವಾಗಲಿದೆ.

ಇದನ್ನೂ ಓದಿ: ‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?

Alia Bhatt: ಮದುವೆಯನ್ನು ಮುಂದೂಡಿದ ಆಲಿಯಾ- ರಣಬೀರ್; ಮಹತ್ವದ ನಿರ್ಧಾರಕ್ಕೆ ಈ ಅಂಶಗಳೇ ಕಾರಣವಂತೆ!

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ