AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?
ರಣವೀರ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 19, 2023 | 11:01 AM

Share

ಒಂದು ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್​ಗಳನ್ನು ಮಾಡೋದು ಕಾಮನ್. ‘ಡಾನ್’ ಸರಣಿ ಹಿಟ್ ಆಗಿರುವುದರಿಂದ ‘ಡಾನ್ 2’ ಬಂತು. ‘ಡಾನ್ 3’ ಸಿನಿಮಾ (Don 3) ಮಾಡಲು ಸದ್ಯ ನಿರ್ದೇಶಕ ಫರ್ಹಾನ್ ಅಖ್ತರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲೇ ಹೇಳಿದಂತೆ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ನಟಿಸುತ್ತಿಲ್ಲ. ಅವರು ಈಗಾಗಲೇ ಸರಣಿಯಿಂದ ಹೊರ ನಡೆದಿದ್ದಾರೆ. ಈ ಜಾಗಕ್ಕೆ ರಣವೀರ್ ಸಿಂಗ್ (Ranveer Singh) ಅವರನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ರಣವೀರ್ ಸಿಂಗ್ ಅಭಿಮಾನಿಗಳಿಗೆ ಖುಷಿ ಆಗಿದೆ.

ಮೊದಲ ಚಿತ್ರದಲ್ಲಿ ನಟಿಸಿದವರು ಸೀಕ್ವೆಲ್​ನಲ್ಲೂ ನಟಿಸಬೇಕು ಎನ್ನುವ ನಿಯಮ ಏನೂ ಇಲ್ಲ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಅದರ ಸೀಕ್ವೆಲ್​ನಲ್ಲಿ ಕಾರ್ತಿಕ್​ ಆರ್ಯನ್ ನಟಿಸಿದರು. ಹೀರೋ ಬದಲಾದ ಹೊರತಾಗಿಯೂ ಎರಡನೇ ಪಾರ್ಟ್ ಗೆದ್ದಿದೆ. ಅದೇ ರೀತಿ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸಲಿದ್ದಾರೆ. ಹೀರೋ ಬದಲಾವಣೆ ಸೋಲು-ಗೆಲುವನ್ನು ನಿರ್ಧರಿಸುವುದಿಲ್ಲ ಎನ್ನುವ ನಂಬಿಕೆ ನಿರ್ದೇಶಕರದ್ದು.

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ. ಬಾಲಿವುಡ್​ನ ಎ ಸ್ಟಾರ್ ಹೀರೋಗಳನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇದಕ್ಕೆ ರಣವೀರ್ ಸಿಂಗ್ ಸೂಕ್ತ ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?

ರಣವೀರ್ ಸಿಂಗ್ ಅವರಿಗೆ ಇತ್ತೀಚೆಗೆ ಗೆಲುವು ಕೈ ಹಿಡಿಯುತ್ತಿಲ್ಲ. ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘83’ ಸಿನಿಮಾ ವಿಮರ್ಶೆಯಲ್ಲಿ ಗೆದ್ದರೂ ಹಣ ಮಾಡಲಿಲ್ಲ. ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾ ಕೂಡ ಹೀನಾಯ ಸೋಲು ಕಂಡಿತು. ಈಗ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಹೀಗಾಗಿ, ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ