AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?
ರಣವೀರ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 19, 2023 | 11:01 AM

Share

ಒಂದು ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್​ಗಳನ್ನು ಮಾಡೋದು ಕಾಮನ್. ‘ಡಾನ್’ ಸರಣಿ ಹಿಟ್ ಆಗಿರುವುದರಿಂದ ‘ಡಾನ್ 2’ ಬಂತು. ‘ಡಾನ್ 3’ ಸಿನಿಮಾ (Don 3) ಮಾಡಲು ಸದ್ಯ ನಿರ್ದೇಶಕ ಫರ್ಹಾನ್ ಅಖ್ತರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲೇ ಹೇಳಿದಂತೆ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ನಟಿಸುತ್ತಿಲ್ಲ. ಅವರು ಈಗಾಗಲೇ ಸರಣಿಯಿಂದ ಹೊರ ನಡೆದಿದ್ದಾರೆ. ಈ ಜಾಗಕ್ಕೆ ರಣವೀರ್ ಸಿಂಗ್ (Ranveer Singh) ಅವರನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ರಣವೀರ್ ಸಿಂಗ್ ಅಭಿಮಾನಿಗಳಿಗೆ ಖುಷಿ ಆಗಿದೆ.

ಮೊದಲ ಚಿತ್ರದಲ್ಲಿ ನಟಿಸಿದವರು ಸೀಕ್ವೆಲ್​ನಲ್ಲೂ ನಟಿಸಬೇಕು ಎನ್ನುವ ನಿಯಮ ಏನೂ ಇಲ್ಲ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಅದರ ಸೀಕ್ವೆಲ್​ನಲ್ಲಿ ಕಾರ್ತಿಕ್​ ಆರ್ಯನ್ ನಟಿಸಿದರು. ಹೀರೋ ಬದಲಾದ ಹೊರತಾಗಿಯೂ ಎರಡನೇ ಪಾರ್ಟ್ ಗೆದ್ದಿದೆ. ಅದೇ ರೀತಿ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸಲಿದ್ದಾರೆ. ಹೀರೋ ಬದಲಾವಣೆ ಸೋಲು-ಗೆಲುವನ್ನು ನಿರ್ಧರಿಸುವುದಿಲ್ಲ ಎನ್ನುವ ನಂಬಿಕೆ ನಿರ್ದೇಶಕರದ್ದು.

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ. ಬಾಲಿವುಡ್​ನ ಎ ಸ್ಟಾರ್ ಹೀರೋಗಳನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇದಕ್ಕೆ ರಣವೀರ್ ಸಿಂಗ್ ಸೂಕ್ತ ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?

ರಣವೀರ್ ಸಿಂಗ್ ಅವರಿಗೆ ಇತ್ತೀಚೆಗೆ ಗೆಲುವು ಕೈ ಹಿಡಿಯುತ್ತಿಲ್ಲ. ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘83’ ಸಿನಿಮಾ ವಿಮರ್ಶೆಯಲ್ಲಿ ಗೆದ್ದರೂ ಹಣ ಮಾಡಲಿಲ್ಲ. ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾ ಕೂಡ ಹೀನಾಯ ಸೋಲು ಕಂಡಿತು. ಈಗ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಹೀಗಾಗಿ, ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ