AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?
ರಣವೀರ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 19, 2023 | 11:01 AM

Share

ಒಂದು ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್​ಗಳನ್ನು ಮಾಡೋದು ಕಾಮನ್. ‘ಡಾನ್’ ಸರಣಿ ಹಿಟ್ ಆಗಿರುವುದರಿಂದ ‘ಡಾನ್ 2’ ಬಂತು. ‘ಡಾನ್ 3’ ಸಿನಿಮಾ (Don 3) ಮಾಡಲು ಸದ್ಯ ನಿರ್ದೇಶಕ ಫರ್ಹಾನ್ ಅಖ್ತರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲೇ ಹೇಳಿದಂತೆ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ನಟಿಸುತ್ತಿಲ್ಲ. ಅವರು ಈಗಾಗಲೇ ಸರಣಿಯಿಂದ ಹೊರ ನಡೆದಿದ್ದಾರೆ. ಈ ಜಾಗಕ್ಕೆ ರಣವೀರ್ ಸಿಂಗ್ (Ranveer Singh) ಅವರನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ರಣವೀರ್ ಸಿಂಗ್ ಅಭಿಮಾನಿಗಳಿಗೆ ಖುಷಿ ಆಗಿದೆ.

ಮೊದಲ ಚಿತ್ರದಲ್ಲಿ ನಟಿಸಿದವರು ಸೀಕ್ವೆಲ್​ನಲ್ಲೂ ನಟಿಸಬೇಕು ಎನ್ನುವ ನಿಯಮ ಏನೂ ಇಲ್ಲ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಅದರ ಸೀಕ್ವೆಲ್​ನಲ್ಲಿ ಕಾರ್ತಿಕ್​ ಆರ್ಯನ್ ನಟಿಸಿದರು. ಹೀರೋ ಬದಲಾದ ಹೊರತಾಗಿಯೂ ಎರಡನೇ ಪಾರ್ಟ್ ಗೆದ್ದಿದೆ. ಅದೇ ರೀತಿ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸಲಿದ್ದಾರೆ. ಹೀರೋ ಬದಲಾವಣೆ ಸೋಲು-ಗೆಲುವನ್ನು ನಿರ್ಧರಿಸುವುದಿಲ್ಲ ಎನ್ನುವ ನಂಬಿಕೆ ನಿರ್ದೇಶಕರದ್ದು.

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ. ಬಾಲಿವುಡ್​ನ ಎ ಸ್ಟಾರ್ ಹೀರೋಗಳನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇದಕ್ಕೆ ರಣವೀರ್ ಸಿಂಗ್ ಸೂಕ್ತ ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?

ರಣವೀರ್ ಸಿಂಗ್ ಅವರಿಗೆ ಇತ್ತೀಚೆಗೆ ಗೆಲುವು ಕೈ ಹಿಡಿಯುತ್ತಿಲ್ಲ. ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘83’ ಸಿನಿಮಾ ವಿಮರ್ಶೆಯಲ್ಲಿ ಗೆದ್ದರೂ ಹಣ ಮಾಡಲಿಲ್ಲ. ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾ ಕೂಡ ಹೀನಾಯ ಸೋಲು ಕಂಡಿತು. ಈಗ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಹೀಗಾಗಿ, ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​