‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ.

‘ಡಾನ್ 3’ ಚಿತ್ರದಲ್ಲಿ ಶಾರುಖ್ ಬದಲು ರಣವೀರ್ ಸಿಂಗ್? ಈಗಲಾದರೂ ಸಿಗುತ್ತಾ ಗೆಲುವು?
ರಣವೀರ್-ಶಾರುಖ್
Follow us
|

Updated on: May 19, 2023 | 11:01 AM

ಒಂದು ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್​ಗಳನ್ನು ಮಾಡೋದು ಕಾಮನ್. ‘ಡಾನ್’ ಸರಣಿ ಹಿಟ್ ಆಗಿರುವುದರಿಂದ ‘ಡಾನ್ 2’ ಬಂತು. ‘ಡಾನ್ 3’ ಸಿನಿಮಾ (Don 3) ಮಾಡಲು ಸದ್ಯ ನಿರ್ದೇಶಕ ಫರ್ಹಾನ್ ಅಖ್ತರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲೇ ಹೇಳಿದಂತೆ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ನಟಿಸುತ್ತಿಲ್ಲ. ಅವರು ಈಗಾಗಲೇ ಸರಣಿಯಿಂದ ಹೊರ ನಡೆದಿದ್ದಾರೆ. ಈ ಜಾಗಕ್ಕೆ ರಣವೀರ್ ಸಿಂಗ್ (Ranveer Singh) ಅವರನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ರಣವೀರ್ ಸಿಂಗ್ ಅಭಿಮಾನಿಗಳಿಗೆ ಖುಷಿ ಆಗಿದೆ.

ಮೊದಲ ಚಿತ್ರದಲ್ಲಿ ನಟಿಸಿದವರು ಸೀಕ್ವೆಲ್​ನಲ್ಲೂ ನಟಿಸಬೇಕು ಎನ್ನುವ ನಿಯಮ ಏನೂ ಇಲ್ಲ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಅದರ ಸೀಕ್ವೆಲ್​ನಲ್ಲಿ ಕಾರ್ತಿಕ್​ ಆರ್ಯನ್ ನಟಿಸಿದರು. ಹೀರೋ ಬದಲಾದ ಹೊರತಾಗಿಯೂ ಎರಡನೇ ಪಾರ್ಟ್ ಗೆದ್ದಿದೆ. ಅದೇ ರೀತಿ ‘ಡಾನ್ 3’ ಚಿತ್ರದಲ್ಲಿ ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸಲಿದ್ದಾರೆ. ಹೀರೋ ಬದಲಾವಣೆ ಸೋಲು-ಗೆಲುವನ್ನು ನಿರ್ಧರಿಸುವುದಿಲ್ಲ ಎನ್ನುವ ನಂಬಿಕೆ ನಿರ್ದೇಶಕರದ್ದು.

ಶಾರುಖ್ ಖಾನ್ ‘ಡಾನ್’ ಫ್ರಾಂಚೈಸ್​ನಿಂದ ಹೊರ ನಡೆದಿರುವುದು ನಿರ್ದೇಶಕ ಫರ್ಹಾನ್ ಅಖ್ತರ್ ಅವರಿಗೆ ಬೇಸರ ತಂದಿದೆ. ಹಾಗಂತ ಅವರು ‘ಡಾನ್ 3’ ಚಿತ್ರವನ್ನು ಕೈಬಿಡುವ ನಿರ್ಧಾರಕ್ಕೆ ಬಂದಿಲ್ಲ. ಬಾಲಿವುಡ್​ನ ಎ ಸ್ಟಾರ್ ಹೀರೋಗಳನ್ನು ಇಟ್ಟುಕೊಂಡು ಅವರು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇದಕ್ಕೆ ರಣವೀರ್ ಸಿಂಗ್ ಸೂಕ್ತ ಎಂದು ಅವರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?

ರಣವೀರ್ ಸಿಂಗ್ ಅವರಿಗೆ ಇತ್ತೀಚೆಗೆ ಗೆಲುವು ಕೈ ಹಿಡಿಯುತ್ತಿಲ್ಲ. ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ‘83’ ಸಿನಿಮಾ ವಿಮರ್ಶೆಯಲ್ಲಿ ಗೆದ್ದರೂ ಹಣ ಮಾಡಲಿಲ್ಲ. ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾ ಕೂಡ ಹೀನಾಯ ಸೋಲು ಕಂಡಿತು. ಈಗ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಹೀಗಾಗಿ, ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು