AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೋಷಕರಾಗುವ ಬಗ್ಗೆ ಯೋಚಿಸುತ್ತಿದ್ದೀರಾ?’; ವೈಯಕ್ತಿಕ ಜೀವನದ ಕುರಿತ ಪ್ರಶ್ನೆಗೆ ರಣವೀರ್ ಉತ್ತರ ಏನಿತ್ತು?

Deepika Padukone | Ranveer Singh: ಪ್ರಸ್ತುತ ರಣವೀರ್ ಸಿಂಗ್ ‘ಜಯೇಶ್​ಭಾಯ್ ಜೋರದಾರ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಅವರಿಗೆ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ನೀಡಿದ ಉತ್ತರ ಈಗ ಸಖತ್ ಸುದ್ದಿಯಾಗುತ್ತಿದೆ.

‘ಪೋಷಕರಾಗುವ ಬಗ್ಗೆ ಯೋಚಿಸುತ್ತಿದ್ದೀರಾ?’; ವೈಯಕ್ತಿಕ ಜೀವನದ ಕುರಿತ ಪ್ರಶ್ನೆಗೆ ರಣವೀರ್ ಉತ್ತರ ಏನಿತ್ತು?
ರಣವೀರ್ ಸಿಂಗ್, ದೀಪಿಕಾ ಪಡುಕೋಣೆ
TV9 Web
| Updated By: shivaprasad.hs|

Updated on:May 10, 2022 | 7:50 PM

Share

ಬಾಲಿವುಡ್​ನ ತಾರಾ ಜೋಡಿಗಳಲ್ಲಿ ರಣವೀರ್ ಸಿಂಗ್ (Ranveer Singh) ಹಾಗೂ ದೀಪಿಕಾ ಪಡುಕೋಣೆ (Deepika Padukone) ಎಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಸಾರ್ವಜನಿಕವಾಗಿ ಸದಾ ಒಟ್ಟಿಗೆ ಕಾಣಿಸಿಕೊಳ್ಳುವ ದೀಪಿಕಾ- ರಣವೀರ್ ಸಾಮಾಜಿಕ ಜಾಲತಾಣಗಳಲ್ಲೂ ಚಿತ್ರಗಳನ್ನು ಹಂಚಿಕೊಳ್ಳುತ್ತಾ ಫ್ಯಾನ್ಸ್ ಜತೆ ಸಂಪರ್ಕದಲ್ಲಿರುತ್ತಾರೆ. ಇದಲ್ಲದೇ ವೇದಿಕೆಗಳಲ್ಲಿ ದಾಂಪತ್ಯದ ಬಗ್ಗೆ, ಪರಸ್ಪರರ ಬಗ್ಗೆ ಹೊಗಳುತ್ತಾ ತಮ್ಮ ನಡುವಿನ ಪ್ರೀತಿಯ ಬಗ್ಗೆ ಮುಕ್ತವಾಗಿ ಮಾತನಾಡುತ್ತಾರೆ. ಯಾವುದೇ ಗೊಂದಲ, ವಿವಾದಗಳಿಗೆ ಸಿಲುಕದೇ ತಮ್ಮ ಕೆಲಸಗಳಲ್ಲಿ ನಿರತರಾಗಿರುವ ಈ ತಾರಾ ಜೋಡಿಯನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿರುತ್ತಾರೆ. ಪ್ರಸ್ತುತ ರಣವೀರ್ ‘ಜಯೇಶ್​ಭಾಯ್ ಜೋರದಾರ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಅವರಿಗೆ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ನೀಡಿದ ಉತ್ತರ ಈಗ ಸಖತ್ ಸುದ್ದಿಯಾಗುತ್ತಿದೆ.

ರಣವೀರ್​ಗೆ ಕೇಳಿದ ಪ್ರಶ್ನೆ ಏನು? ನಟ ನೀಡಿದ ಉತ್ತರವೇನು?

ಇಂಡಿಯಾ ಟುಡೆ ಜತೆ ರಣವೀರ್ ಸಿಂಗ್ ಮಾತುಕತೆ ನಡೆಸಿದ್ದರು. ಈ ವೇಳೆ ರಣವೀರ್​ಗೆ ‘ನೀವು ಸದ್ಯದಲ್ಲೇ ಪೋಷಕರಾಗುವ ಯೋಚನೆ ಹೊಂದಿದ್ದೀರಾ?’ ಎಂದ ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ ನಟ ‘ಆ ಬಗ್ಗೆ ಮಾತುಕತೆ ನಡೆದಿದೆ’ ಎಂದಿದ್ದಾರೆ. ‘‘ನನ್ನ ವಿವಾಹವು ಜೀವನದ ಸರಿಯಾದ ಸಮಯಕ್ಕೆ ಆಗಿದೆ ಎಂದು ಭಾವಿಸುತ್ತೇನೆ. ನಾನು ಮತ್ತು ದೀಪಿಕಾ ಜೀವನದ ಬಗ್ಗೆ, ಮುಂದಿನ ಭವಿಷ್ಯದ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತೇವೆ’’ ಎಂದು ಹೇಳಿದ್ದಾರೆ ರಣವೀರ್.

ಇದನ್ನೂ ಓದಿ
Image
Emma Chamberlain: ಭಾರತದ ರಾಜರಿಗೆ ಸೇರಿದ ನೆಕ್ಲೇಸ್ ಧರಿಸಿ ಹೆಜ್ಜೆ ಹಾಕಿದ್ರಾ ಖ್ಯಾತ ತಾರೆ? ಏನಿದರ ಇತಿಹಾಸ?
Image
Thrivikrama Release Date: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ರಿಲೀಸ್ ಡೇಟ್ ಅನೌನ್ಸ್
Image
Alia Bhatt: ಜನಸಾಮಾನ್ಯರ ಹಾದಿ ತಪ್ಪಿಸುತ್ತಿದ್ದಾರಾ ಆಲಿಯಾ ಭಟ್? ಸಾಕ್ಷಿ ಸಮೇತ ವಿವರಿಸಿದ ನೆಟ್ಟಿಗರು
Image
RC 15: ರಾಮ್​ಚರಣ್- ಶಂಕರ್ ಕಾಂಬಿನೇಷೇನ್​ನಲ್ಲಿ ಹೊಸ ಚಿತ್ರ; ಸಮಾರಂಭಕ್ಕೆ ಉಪ್ಪಿ ಸ್ಟೈಲ್​ನಲ್ಲಿ ಬಂದ ರಣವೀರ್ ಸಿಂಗ್

ಮುಂದುವರೆದು ಮಾತನಾಡಿದ ನಟ, ‘‘ಮದುವೆಯಾಗಿ ಮೂರೂವರೆ ವರ್ಷಗಳಾಗಿವೆ. ಮುಂದಿನ ಜೀವನದ ಬಗ್ಗೆ ಯೋಚಿಸುತ್ತಿದ್ದೇವೆ’’ ಎಂದಿದ್ದಾರೆ. ದೀಪಿಕಾ ಹಾಗೂ ರಣವೀರ್ 2018ರ ನವೆಂಬರ್ 14ರಂದು ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ =ವಿವಾಹವಾಗಿದ್ದರು.

ದೀಪಿಕಾ ಬಗ್ಗೆ ಮೆಚ್ಚುಗೆ ಮಾತನ್ನಾಡಿದ ರಣವೀರ್:

ದೀಪಿಕಾ ಬಗ್ಗೆ ಸಾಧ್ಯವಾದಷ್ಟು ಎಲ್ಲಾ ವೇದಿಕೆಗಳಲ್ಲೂ ರಣವೀರ್ ಹೊಗಳಿಕೆಯ ಮಾತುಗಳನ್ನಾಡುತ್ತಾರೆ. ಖಾಸಗಿ ಮಾಧ್ಯಮದೊಂದಿಗಿನ ಇತ್ತೀಚಿನ ಸಂದರ್ಶನದಲ್ಲೂ ಅವರು ದೀಪಿಕಾ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘‘ದೀಪಿಕಾ ಎಲ್ಲಾ ರೀತಿಯಿಂದಲೂ ಪ್ರತಿಭಾವಂತೆ. ಆಕೆಯ ವೃತ್ತಿಪರ ಜೀವನದ ಬಗ್ಗೆ ನನಗೆ ಅಪಾರ ಖುಷಿ ಹಾಗೂ ಗೌರವವಿದೆ. ಹಾಗೆಯೇ ವೈಯಕ್ತಿಕವಾಗಿಯೂ ನಾವು ಬಹಳ ಆಪ್ತರಾಗಿದ್ದೇವೆ. ಪ್ರತಿ ಬಾರಿಯೂ ಆಕೆ ನನ್ನನ್ನು ಬೆರಗುಗೊಳಿಸುತ್ತಾಳೆ’’ ಎಂದಿದ್ದಾರೆ ರಣವೀರ್.

ರಣವೀರ್ ಸಿಂಗ್ ನಟನೆಯ ‘ಜಯೇಶ್​ಭಾಯ್ ಜೋರ್ದಾರ್’ ಮೇ 13ರಂದು ರಿಲೀಸ್ ಆಗುತ್ತಿದೆ. ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆಗಳು ಮೂಡಿವೆ.

ರಣವೀರ್ ಸಿಂಗ್ ಮುಂದಿನ ಚಿತ್ರಗಳ ಕೆಲಸಗಳೂ ನಡೆಯುತ್ತಿವೆ. ‘ಸರ್ಕಸ್’ ಚಿತ್ರದಲ್ಲಿ ನಟ ಬಣ್ಣಹಚ್ಚುತ್ತಿದ್ದಾರೆ. ಇದರೊಂದಿಗೆ ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಚಿತ್ರದಲ್ಲೂ ಅವರು ಬಣ್ಣಹಚ್ಚುತ್ತಿದ್ದಾರೆ. ಕರಣ್ ಜೋಹರ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಅಲಿಯಾ ಭಟ್ ನಾಯಕಿಯಾಗಿದ್ದಾರೆ. ಧರ್ಮೇಂದ್ರ, ಜಉಯಾ ಬಚ್ಚನ್, ಶಬಾನಾ ಅಜ್ಮಿ ಮೊದಲಾದ ಖ್ಯಾತ ತಾರೆಯರು ಈ ಚಿತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:46 pm, Tue, 10 May 22

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ