AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ

ರಣವೀರ್ ಸಿಂಗ್ ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿದ್ದು, ಆಮಿರ್ ಖಾನ್ ಮಧ್ಯಸ್ಥಿಕೆಯಿಂದ 10 ಕೋಟಿ ರೂ. ಅಡ್ವಾನ್ಸ್ ಹಣವನ್ನು ನಿರ್ಮಾಪಕರಿಗೆ ವಾಪಸ್ ನೀಡಲು ಒಪ್ಪಿದ್ದಾರೆ. ಕಥೆಯ ವಿಷಯದಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆಗಿನ ಭಿನ್ನಾಭಿಪ್ರಾಯ ಇದಕ್ಕೆ ಕಾರಣ. 40 ಕೋಟಿ ರೂ. ನಷ್ಟ ಭರಿಸುವಂತೆ ಫರ್ಹಾನ್ ಬೇಡಿಕೆಯಿಟ್ಟಿದ್ದರು. ರಣವೀರ್ ಸಹಕಾರದಿಂದ ‘ಡಾನ್ 3’ ನಿರ್ಮಾಣ ನಿಲ್ಲುವುದು ಬಹುತೇಕ ಖಚಿತ.

ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ
ಆಮಿರ್
ರಾಜೇಶ್ ದುಗ್ಗುಮನೆ
|

Updated on: Apr 22, 2026 | 10:14 AM

Share

ರಣವೀರ್ ಸಿಂಗ್ ಹಾಗೂ ‘ಡಾನ್ 3’ ನಿರ್ದೇಶಕ ಫರ್ಹಾನ್ ಅಖ್ತರ್ ಮಧ್ಯೆ ಕಿರಿಕ್ ಆಗಿತ್ತು. ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹಿಂದಕ್ಕೆ ಸರಿದರು. ಇದಕ್ಕೆ ಪ್ರತಿಯಾಗಿ ರಣವೀರ್ 40 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಫರ್ಹಾನ್ ಪಟ್ಟು ಹಿಡಿದಿದ್ದರು. ಈ ವಿಷಯದಲ್ಲಿ ಆಮಿರ್ ಖಾನ್ (Aamir Khan) ಮಧ್ಯಸ್ಥಿಕೆ ವಹಿಸಿದ್ದರು. ಈಗ ಆಮಿರ್ ಮಾತಿಗೆ ರಣವೀರ್ ಗೌರವ ನೀಡಿದ್ದಾರೆ. ತಾವು ತೆಗೆದುಕೊಂಡಿದ್ದ 10 ಕೋಟಿ ರೂಪಾಯಿ ಅಡ್ವಾನ್ಸ್ ಹಣವನ್ನು ಮರಳಿಸಲು ರಣವೀರ್ ನಿರ್ಧರಿಸಿದ್ದಾರೆ.

‘ಡಾನ್’ ಹಾಗೂ ‘ಡಾನ್ 2’ ಚಿತ್ರದಲ್ಲಿ ಶಾರುಖ್ ಖಾನ್ ನಟಿಸಿದ್ದರು. ಆ ಬಳಿಕ ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ಅವರ ಆಯ್ಕೆ ಮಾಡಲಾಯಿತು. ಈ ಚಿತ್ರಕ್ಕೆ ಶಾರುಖ್ ಫ್ಯಾನ್ಸ್ ಸಾಕಷ್ಟು ವಿರೋಧ ಹೊರಹಾಕಿದರು. ಆದರೂ ನಿರ್ದೇಶಕ, ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಮಾಡಿಯೇ ತೀರೋದಾಗಿ ಪಟ್ಟು ಹಿಡಿದರು. ಟೀಸರ್ ಕೂಡ ರಿಲೀಸ್ ಆಯಿತು. ‘ಧುರಂಧರ್’ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಬದಲಾದರು.

ಕಥೆ ವಿಷಯದಲ್ಲಿ ರಣವೀರ್ ಹಾಗೂ ಫರ್ಹಾನ್ ಮಧ್ಯೆ ಹೊಂದಾಣಿಕೆ ಸಾಧ್ಯವಾಗಿಲ್ಲ. ಈ ಕಾರಣದಿಂದ ರಣವೀರ್ ಹೊರ ಹೋಗಲು ನಿರ್ಧರಿಸಿದರು. ಈ ಚಿತ್ರಕ್ಕೆ ಪ್ರೀ ಪ್ರೊಡಕ್ಷನ್ ಕೆಲಸ ಸಾಕಷ್ಟು ನಡೆದಿದ್ದು, ಆ ನಷ್ಟ ಭರಿಸಿ ಕೊಡಲು ರಣವೀರ್ 40 ಕೋಟಿ ರೂಪಾಯಿ ಕೊಡಬೇಕು ಎಂದು ಫರ್ಹಾನ್ ಪಟ್ಟು ಹಿಡಿದರು.

ಇದನ್ನೂ ಓದಿ: ‘ಧುರಂಧರ್ 2’ ನೋಡದಿದ್ದರೂ ಚಿತ್ರತಂಡದ ಸಾಧನೆಗೆ ಭೇಷ್ ಎಂದ ಆಮಿರ್ ಖಾನ್

ಇತ್ತೀಚೆಗೆ ಇವರ ಮಧ್ಯೆ ಆಮಿರ್ ಬಂದಿದ್ದರು ಎನ್ನಲಾಗಿತ್ತು. ಈ ಮಾತಕತೆ ಯಶಸ್ವಿ ಆಗಿದೆ. ಅಡ್ವಾನ್ಸ್ ಆಗಿ ಪಡೆದಿದ್ದ 10 ಕೋಟಿ ರೂಪಾಯಿ ಹಣವನ್ನು ರಣವೀರ್ ಹಿಂದಿರುಗಿಸಲು ಒಪ್ಪಿದ್ದಾರೆ. ಇಷ್ಟೇ ಅಲ್ಲ, ರಣವೀರ್ ಸಿಂಗ್ ಅವರ ಮುಂದಿನ ಚಿತ್ರವೊಂದಕ್ಕೆ ಫರ್ಹಾನ್ ಅವರನ್ನು ನಿರ್ಮಾಪಕರನ್ನಾಗಿ ಸೇರಿಸಿಕೊಳ್ಳುವ ಆಲೋಚನೆ ರಣವೀರ್​ಗೆ ಇದೆ. ಸಣ್ಣ ಮೊತ್ತವನ್ನು ಹೂಡಿಕೆ ಮಾಡಲು ರಣವೀರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ಈ ಬಗ್ಗೆ ರಣವೀರ್ ಆಗಲೀ ಫರ್ಹಾನ್ ಆಗಲಿ ಈ ಬಗ್ಗೆ ಮಾತನಾಡಿಲ್ಲ. ‘ಡಾನ್ 3’ ಸಿನಿಮಾ ನಿಲ್ಲೋದು ಬಹುತೇಕ ಖಚಿತವಾಗಿದೆ. ಶಾರುಖ್ ಖಾನ್ ಅವರು ಮತ್ತೆ ಈ ಸಿನಿಮಾ ಮಾಡಲು ಒಪ್ಪುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?