AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ಬಾಲಿವುಡ್​ ನಟ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದಾಗ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು. ಅದರಲ್ಲಿ ಒಂದಷ್ಟು ವಿಷಯಗಳ ಬಗ್ಗೆ ಅವರು ಮಾತನಾಡಿದ್ದರು. ಈಗ ಅದೇ ವಿಡಿಯೋಗೆ ಎಐ ಧ್ವನಿ ಮೂಲಕ ಬೇರೆ ರೂಪ ನೀಡಲಾಗಿದೆ. ಬೆಲೆ ಏರಿಕೆ, ನಿರುದ್ಯೋಗ ಮುಂತಾದ ಸಮಸ್ಯೆಗಳ ಬಗ್ಗೆ ರಣವೀರ್​ ಸಿಂಗ್​ ಅವರು ಟೀಕೆ ಮಾಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ತಿರುಚಲಾಗಿದೆ.

ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ
ರಣವೀರ್​ ಸಿಂಗ್​
Follow us
ಮದನ್​ ಕುಮಾರ್​
|

Updated on: Apr 19, 2024 | 9:12 PM

ಲೋಕಸಭಾ ಚುನಾವಣೆ (Lok Sabha Elections) ಕಾವು ಇಡೀ ದೇಶದಲ್ಲಿ ಹಬ್ಬಿದೆ. ಪ್ರಮುಖ ಪಕ್ಷಗಳು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿವೆ. ಸ್ಟಾರ್​ ನಟ-ನಟಿಯರನ್ನು ಕರೆತಂದು ಪ್ರಚಾರ ಮಾಡಿಸಲಾಗುತ್ತಿದೆ. ಆದರೆ ಅದರ ನಡುವೆ ಒಂದು ಗಿಮಿಕ್​ ಕೂಡ ನಡೆದಿದೆ. ಡೀಪ್​ಫೇಕ್​ (Deepfake) ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಸೆಲೆಬ್ರಿಟಿಗಳ ವಿಡಿಯೋಗಳನ್ನು ತಿರುಚಿ, ಜನರ ಗಮನ ಸೆಳೆಯುವ ಪ್ರಯತ್ನ ಕೂಡ ಆಗಿದೆ. ಇತ್ತೀಚೆಗಷ್ಟೇ ನಟ ಆಮಿರ್​ ಖಾನ್​ ಅವರ ವಿಡಿಯೋವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೋವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ.

ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೋಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ. ರಣವೀರ್​ ಸಿಂಗ್​ ಅವರು ಬೆಲೆ ಏರಿಕೆ, ನಿರುದ್ಯೋಗ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ ಎನ್ನವ ಹಾಗೆ ಈ ವಿಡಿಯೋವನ್ನು ತಿರುಚಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ತಾವು ಯಾವುದೇ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಮಾತನಾಡಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೂ ಸೋಶಿಯಲ್​ ಮೀಡಿಯಾದಲ್ಲಿ ನಕಲಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ಡೀಪ್​ಫೇಕ್​ ವಿಡಿಯೋಗಳ ಮೂಲಕ ಸೆಲೆಬ್ರಿಟಿಗಳ ಹೆಸರಿಗೆ ಮಸಿ ಬಳಿಯುವ ಕೃತ್ಯ ನಡೆಯುತ್ತಿದೆ. ಈ ಮೊದಲು ರಶ್ಮಿಕಾ ಮಂದಣ್ಣ, ಕಾಜೋಲ್​, ಆಲಿಯಾ ಭಟ್​ ಮುಂತಾದ ನಟಿಯರಿಗೆ ಡೀಪ್​ಫೇಕ್​ ಕಾಟ ಎದುರಾಗಿತ್ತು. ಆಮಿರ್​ ಖಾನ್​ ಅವರ ವಿಡಿಯೋವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಯಿತು. ಆ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ