AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ಬಾಲಿವುಡ್​ ನಟ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದಾಗ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು. ಅದರಲ್ಲಿ ಒಂದಷ್ಟು ವಿಷಯಗಳ ಬಗ್ಗೆ ಅವರು ಮಾತನಾಡಿದ್ದರು. ಈಗ ಅದೇ ವಿಡಿಯೋಗೆ ಎಐ ಧ್ವನಿ ಮೂಲಕ ಬೇರೆ ರೂಪ ನೀಡಲಾಗಿದೆ. ಬೆಲೆ ಏರಿಕೆ, ನಿರುದ್ಯೋಗ ಮುಂತಾದ ಸಮಸ್ಯೆಗಳ ಬಗ್ಗೆ ರಣವೀರ್​ ಸಿಂಗ್​ ಅವರು ಟೀಕೆ ಮಾಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ತಿರುಚಲಾಗಿದೆ.

ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ
ರಣವೀರ್​ ಸಿಂಗ್​
ಮದನ್​ ಕುಮಾರ್​
|

Updated on: Apr 19, 2024 | 9:12 PM

Share

ಲೋಕಸಭಾ ಚುನಾವಣೆ (Lok Sabha Elections) ಕಾವು ಇಡೀ ದೇಶದಲ್ಲಿ ಹಬ್ಬಿದೆ. ಪ್ರಮುಖ ಪಕ್ಷಗಳು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿವೆ. ಸ್ಟಾರ್​ ನಟ-ನಟಿಯರನ್ನು ಕರೆತಂದು ಪ್ರಚಾರ ಮಾಡಿಸಲಾಗುತ್ತಿದೆ. ಆದರೆ ಅದರ ನಡುವೆ ಒಂದು ಗಿಮಿಕ್​ ಕೂಡ ನಡೆದಿದೆ. ಡೀಪ್​ಫೇಕ್​ (Deepfake) ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಸೆಲೆಬ್ರಿಟಿಗಳ ವಿಡಿಯೋಗಳನ್ನು ತಿರುಚಿ, ಜನರ ಗಮನ ಸೆಳೆಯುವ ಪ್ರಯತ್ನ ಕೂಡ ಆಗಿದೆ. ಇತ್ತೀಚೆಗಷ್ಟೇ ನಟ ಆಮಿರ್​ ಖಾನ್​ ಅವರ ವಿಡಿಯೋವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೋವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ.

ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೋಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ. ರಣವೀರ್​ ಸಿಂಗ್​ ಅವರು ಬೆಲೆ ಏರಿಕೆ, ನಿರುದ್ಯೋಗ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ ಎನ್ನವ ಹಾಗೆ ಈ ವಿಡಿಯೋವನ್ನು ತಿರುಚಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ತಾವು ಯಾವುದೇ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಮಾತನಾಡಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೂ ಸೋಶಿಯಲ್​ ಮೀಡಿಯಾದಲ್ಲಿ ನಕಲಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ಡೀಪ್​ಫೇಕ್​ ವಿಡಿಯೋಗಳ ಮೂಲಕ ಸೆಲೆಬ್ರಿಟಿಗಳ ಹೆಸರಿಗೆ ಮಸಿ ಬಳಿಯುವ ಕೃತ್ಯ ನಡೆಯುತ್ತಿದೆ. ಈ ಮೊದಲು ರಶ್ಮಿಕಾ ಮಂದಣ್ಣ, ಕಾಜೋಲ್​, ಆಲಿಯಾ ಭಟ್​ ಮುಂತಾದ ನಟಿಯರಿಗೆ ಡೀಪ್​ಫೇಕ್​ ಕಾಟ ಎದುರಾಗಿತ್ತು. ಆಮಿರ್​ ಖಾನ್​ ಅವರ ವಿಡಿಯೋವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಯಿತು. ಆ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು