AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನೋಡುವಾಗ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ಹೇಗಿತ್ತು?

Ranveer Singh: ರಣವೀರ್​ ಸಿಂಗ್ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಪಂಜಾಬಿ ಯುವಕನ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಜೊತೆ ಅವರು ಸಿನಿಮಾ ನೋಡಿದ್ದಾರೆ. ಆ ಅನುಭವ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನೋಡುವಾಗ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ಹೇಗಿತ್ತು?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಆಲಿಯಾ ಭಟ್​
ಮದನ್​ ಕುಮಾರ್​
|

Updated on: Aug 04, 2023 | 6:10 PM

Share

ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್​ ಸಿಂಗ್​ (Ranveer Singh) ಅವರು ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಸ್ಟಾರ್​ ಕಲಾವಿದರಾಗಿ ಇಬ್ಬರೂ ಮಿಂಚುತ್ತಿದ್ದಾರೆ. ಈ ವರ್ಷ ಆರಂಭದಲ್ಲೇ ‘ಪಠಾಣ್​’ ಸಿನಿಮಾ ಮೂಲಕ ದೀಪಿಕಾ ಪಡುಕೋಣೆ (Deepika Padukone) ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಅದೇ ರೀತಿ ರಣವೀರ್ ಸಿಂಗ್​ ಕೂಡ ಒಂದು ಗೆಲುವಿಗಾಗಿ ಕಾದಿದ್ದರು. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahani) ಸಿನಿಮಾದಿಂದ ಅವರಿಗೆ ಈಗ ಯಶಸ್ಸು ಸಿಕ್ಕಿದೆ. ಜುಲೈ 28ರಂದು ಬಿಡುಗಡೆ ಆದ ಈ ಸಿನಿಮಾ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೂ ಈ ಸಿನಿಮಾ ಇಷ್ಟ ಆಗಿದೆ. ಪತ್ನಿ ಮೆಚ್ಚಿರುವುದಕ್ಕೆ ರಣವೀರ್​ ಸಿಂಗ್​ ಖುಷಿಯಾಗಿದ್ದಾರೆ. ಸಿನಿಮಾದ ಸಕ್ಸಸ್​ ಮೀಟ್​ನಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಕರಣ್​ ಜೋಹರ್​ ಅವರ ನಿರ್ದೇಶನದಲ್ಲಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಡಿಬಂದಿದೆ. ಹಲವು ವರ್ಷಗಳ ಬಳಿಕ ಅವರು ನಿರ್ದೇಶನ ಮಾಡಿರುವುದು ವಿಶೇಷ. ಈ ಸಿನಿಮಾದಲ್ಲಿ ರಣವೀರ್​ ಸಿಂಗ್ ಅವರು ಪಂಜಾಬಿ ಯುವಕನ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಆಲಿಯಾ ಭಟ್​ ನಟಿಸಿದ್ದಾರೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರು ಜೊತೆಯಾಗಿ ಕುಳಿತು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನೋಡಿದ್ದಾರೆ. ಆ ಅನುಭವ ಹೇಗಿತ್ತು ಎಂಬುದನ್ನು ರಣವೀರ್​ ಸಿಂಗ್​ ವಿವರಿಸಿದ್ದಾರೆ.

ಇದನ್ನೂ ಓದಿ: ರೊಮ್ಯಾನ್ಸ್ ಬಿಟ್ಟು ಆ್ಯಕ್ಷನ್ ಕಡೆ ವಾಲಿದ ದೀಪಿಕಾ ಪಡುಕೋಣೆ; ಮುಂಬರುವ 4 ಚಿತ್ರಗಳೇ ಇದಕ್ಕೆ ಸಾಕ್ಷಿ

‘ದೀಪಿಕಾಗೆ ಈ ಸಿನಿಮಾ ತುಂಬ ಇಷ್ಟ ಆಯಿತು. ನನ್ನ ಜೀವನದಲ್ಲಿ ಸ್ಮರಣೀಯವಾದ ಸಿನಿಮಾ ವೀಕ್ಷಣೆಯ ಅನುಭವ ಇದು. ಶನಿವಾರ (ಜುಲೈ 29) ನಾವಿಬ್ಬರು ಜೊತೆಯಾಗಿ ಸಿನಿಮಾ ನೋಡಿದೆವು. ಕೊನೆಯ ಸಾಲಿನಲ್ಲಿ ನಾವಿಬ್ಬರೇ ಕುಳಿತಿದ್ದೆವು. ನಾನು ಈ ಮೊದಲೇ ಸಿನಿಮಾ ನೋಡಿದ್ದೆ. ಈ ಬಾರಿ ದೀಪಿಕಾರ ಪ್ರತಿಕ್ರಿಯೆ ತಿಳಿಯುವ ಸಲುವಾಗಿ ಕುಳಿತಿದ್ದೆ. ಸಿನಿಮಾ ನೋಡುವಾಗ ಅವರು ನಕ್ಕರು, ಅತ್ತರು, ಚಪ್ಪಾಳೆ ತಟ್ಟಿದರು, ಶಿಳ್ಳೆ ಹೊಡೆದರು. ಅವರಿಗೆ ನನ್ನ ಬಗ್ಗೆ ಹೆಮ್ಮೆಯಿದೆ. ಅದರಿಂದ ನನಗೆ ಖುಷಿ ಆಗಿದೆ’ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ: ‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​

ವಿಮರ್ಶಕರಿಂದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಸ್ಟಾರ್​ ನಿರ್ದೇಶಕ, ಸ್ಟಾರ್​ ಕಲಾವಿದರು, ದೊಡ್ಡ ನಿರ್ಮಾಣ ಸಂಸ್ಥೆ ಜೊತೆಯಾಗಿ ಮಾಡಿದ ಸಿನಿಮಾ ಆದ್ದರಿಂದ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ಅಂದುಕೊಂಡ ಮಟ್ಟದಲ್ಲಿ ಈ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಈವರೆಗೂ ಸುಮಾರು 70 ಕೋಟಿ ರೂಪಾಯಿ ಗಳಿಕೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್