AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ರಣವೀರ್​ ಸಿಂಗ್​ ಹೊಸ ಸಿನಿಮಾ ಲೀಕ್​; ‘ಜಯೇಶ್​ಭಾಯ್​’ಗೆ 2 ಆಘಾತ

Jayeshbhai Jordaar Movie Leaked: ಅನೇಕ ಪೈರಸಿ ವೆಬ್​ಸೈಟ್​ಗಳು ‘ಜಯೇಶ್​ಭಾಯ್​ ಜೋರ್ದಾರ್​’ ಚಿತ್ರವನ್ನು ಲೀಕ್​ ಮಾಡಿವೆ. ಇದರಿಂದ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ದೊಡ್ಡ ಹೊಡೆತ ಬೀಳುತ್ತಿದೆ.

ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ರಣವೀರ್​ ಸಿಂಗ್​ ಹೊಸ ಸಿನಿಮಾ ಲೀಕ್​; ‘ಜಯೇಶ್​ಭಾಯ್​’ಗೆ 2 ಆಘಾತ
ರಣವೀರ್ ಸಿಂಗ್
TV9 Web
| Edited By: |

Updated on: May 14, 2022 | 8:08 AM

Share

ನಟ ರಣವೀರ್​ ಸಿಂಗ್ (Ranveer Singh) ಅವರಿಗೆ ಈಗ ಯಾಕೋ ಟೈಮ್​ ಚೆನ್ನಾಗಿಲ್ಲ ಎನಿಸುತ್ತದೆ. ಅವರು ಮಾಡಿನ ಎಲ್ಲ ಕೆಲಸಗಳು ಕೈ ಕೊಡುತ್ತಿವೆ. ಕಳೆದ ವರ್ಷ ಅವರು ನಟಿಸಿದ ‘83’ ಸಿನಿಮಾ ರಿಲೀಸ್​ ಆಗಿ ನೆಲಕಚ್ಚಿತು. ಈಗ ಅವರ ಹೊಸ ಚಿತ್ರ ‘ಜಯೇಶ್​ಭಾಯ್​ ಜೋರ್ದಾರ್​’ (Jayeshbhai Jordaar) ಸಿನಿಮಾ ತೆರೆಕಂಡಿದೆ. ಈ ಸಿನಿಮಾ ಮೇಲೆ ರಣವೀರ್​ ಸಿಂಗ್ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಕುರಿತ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಅವರು ಜೋರಾಗಿಯೇ ಪ್ರಚಾರ ಮಾಡಿದ್ದರು. ಆದರೆ ಅವರಿಗೆ ನಿರೀಕ್ಷಿತ ಫಲ ಸಿಕ್ಕಿಲ್ಲ. ರಿಲೀಸ್​ ಆಗಿ ಕೆಲವೇ ಗಂಟೆಗಳಲ್ಲಿ ಈ ಚಿತ್ರಕ್ಕೆ 2 ಆಘಾತಗಳು ಎದುರಾಗಿವೆ. ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಗೆ ನೆಗೆಟಿವ್​ ಪ್ರತಿಕ್ರಿಯೆ ಬಂದಿರುವುದು ಮೊದಲ ಆಘಾತ. ಇಂಟರ್​ನೆಟ್​ನಲ್ಲಿ ಈ ಸಿನಿಮಾ ಲೀಕ್​ ಆಗಿರುವುದು ಎರಡನೇ ಆಘಾತ! ಹೌದು, ‘ಜಯೇಶ್​ಭಾಯ್​ ಜೋರ್ದಾರ್’​ ಸಿನಿಮಾ ಪೈರಸಿ (Piracy) ಆಗಿದೆ. ಈ ಚಿತ್ರ ಲೀಕ್​ ಆಗಿದ್ದು, ಇದರಿಂದ ಚಿತ್ರತಂಡಕ್ಕೆ ಬಹುದೊಡ್ಡ ನಷ್ಟ ಆಗಿದೆ.

ಚಿತ್ರರಂಗದಲ್ಲಿ ಪೈರಸಿ ಎಂಬುದು ಬಹುದೊಡ್ಡ ಪಿಡುಗಾಗಿದೆ. ಬಹುತೇಕ ಸ್ಟಾರ್​ ನಟರು ಇದರ ಕಾಟದಿಂದ ನಷ್ಟ ಅನುಭವಿಸಿದ್ದಾರೆ. ಈಗ ರಣವೀರ್​ ಸಿಂಗ್​ ಅಭಿನಯದ ‘ಜಯೇಶ್​ಭಾಯ್​ ಜೋರ್ದಾರ್​’ ಸಿನಿಮಾವನ್ನು ಕೂಡ ಇಂಟರ್​ನೆಟ್​ನಲ್ಲಿ ಹರಿಬಿಡಲಾಗಿದೆ. ಕೆಲವು ಕುಖ್ಯಾತ ಪೈರಸಿ ವೆಬ್​ಸೈಟ್​ಗಳಲ್ಲಿ ಈ ಸಿನಿಮಾ ಲಭ್ಯವಾಗುತ್ತಿದೆ. ಇದರಿಂದ ಸಹಜವಾಗಿಯೇ ಚಿತ್ರದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ದೊಡ್ಡ ಹೊಡೆತ ಬೀಳಲಿದೆ.

ಸಿನಿಮಾ ತುಂಬ ಚೆನ್ನಾಗಿದ್ದರೆ ಪೈರಸಿಯಿಂದ ಅಷ್ಟೇನೂ ತೊಡಕು ಆಗುವುದಿಲ್ಲ ಎಂಬುದು ಕೂಡ ಇತ್ತೀಚೆಗೆ ಸಾಬೀತಾದ ವಿಚಾರ. ಹೌದು, ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಮುಂತಾದ ಸಿನಿಮಾಗಳು ಕೂಡ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದವು. ಆದರೆ ಆ ಸಿನಿಮಾಗಳ ಮೇಕಿಂಗ್​ ಗುಣಮಟ್ಟ ಮತ್ತು ಕಥೆ ಚೆನ್ನಾಗಿ ಇದ್ದಿದ್ದರಿಂದ ಜನರು ಪೈರಸಿ ಕಾಪಿ ಕಡೆಗೆ ಗಮನ ನೀಡದೇ, ನೇರವಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ಆದರೆ ‘ಜಯೇಶ್​ಭಾಯ್​ ಜೋರ್ದಾರ್​’ ಚಿತ್ರದ ವಿಚಾರದಲ್ಲಿ ಹೀಗೆ ಆಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಈ ಸಿನಿಮಾ ಕೆಟ್ಟ ವಿಮರ್ಶೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ
Image
ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ಇದು ರಣವೀರ್​ ಸಿಂಗ್​ ಡ್ರೆಸ್​’; ಬಟ್ಟೆ ವಿಚಾರದಲ್ಲಿ ಟ್ರೋಲ್​ ಆದ ದೀಪಿಕಾ ಪಡುಕೋಣೆ
Image
ಏರಲೇ ಇಲ್ಲ ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ಕಲೆಕ್ಷನ್​; ಇದಕ್ಕೆ ಕಾರಣಗಳೇನು?

‘ಜಯೇಶ್​ಭಾಯ್​ ಜೋರ್ದಾರ್​’ ಚಿತ್ರದಲ್ಲಿ ರಣವೀರ್​ ಸಿಂಗ್​ಗೆ ಜೋಡಿಯಾಗಿ ಶಾಲಿನಿ ಪಾಂಡೆ ನಟಿಸಿದ್ದಾರೆ. ‘ಅರ್ಜುನ್​ ರೆಡ್ಡಿ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದ ಬಳಿಕ ಭರ್ಜರಿಯಾಗಿ ಬಾಲಿವುಡ್​ಗೆ ಕಾಲಿಟ್ಟ ಅವರು ಈಗ ಸೋಲು ಅನುಭವಿಸುವಂತಾಗಿದೆ. ಈ ಚಿತ್ರಕ್ಕೆ ದಿವ್ಯಾಂಗ್​ ಟಕ್ಕರ್​ ನಿರ್ದೇಶನ ಮಾಡಿದ್ದು, ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ.

ಉತ್ತಮ ವಿಮರ್ಶೆ ಪಡೆಯುವಲ್ಲಿ ಸೋತ ‘ಜಯೇಶ್​ಭಾಯ್​ ಜೋರ್ದಾರ್​’:

ವಿಮರ್ಶಕರ ವಲಯದಿಂದ ಈ ಚಿತ್ರಕ್ಕೆ ನೆಗೆಟಿವ್​ ರೆಸ್ಪಾನ್ಸ್​ ಸಿಕ್ಕಿದೆ. ಖ್ಯಾತ ಸಿನಿಮಾ ವಿಮರ್ಶಕ ಮತ್ತು ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ‘ಜಯೇಶ್​ಭಾಯ್ ಜೋರ್ದಾರ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ಬಣ್ಣಿಸಿದ್ದು ‘ಕಳಪೆ’ ಎಂದು ಕರೆದಿದ್ದಾರೆ. ವಿಮರ್ಶಕ ರೋಹಿತ್ ಜೈಸ್ವಾಲ್ ಐದಕ್ಕೆ ಒಂದು ಸ್ಟಾರ್ ನೀಡಿದ್ದಾರೆ. ಜನಸಾಮಾನ್ಯರು ಕೂಡ ಈ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಕೆಲವರು ‘ಡಿಸಾಸ್ಟರ್​’ ಎಂದು ಕರೆದಿದ್ದಾರೆ. ಇದರಿಂದ ರಣವೀರ್​ ಸಿಂಗ್​ ಸಿನಿಮಾಗೆ ತೀವ್ರ ಹಿನ್ನಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್