AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1983ರ ವಿಶ್ವಕಪ್​ ಟೀಮ್​ ಆಟಗಾರರಿಗೆ ಈಗ ಸಿಕ್ಕಿದೆ ಕೋಟಿ ಕೋಟಿ ಸಂಭಾವನೆ; ಕಪಿಲ್​ ದೇವ್​ಗೆ 5 ಕೋಟಿ

83 Movie: 1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಇದು ‘83’ ಚಿತ್ರತಂಡಕ್ಕೆ ಸವಾಲಾಗಿತ್ತು.

1983ರ ವಿಶ್ವಕಪ್​ ಟೀಮ್​ ಆಟಗಾರರಿಗೆ ಈಗ ಸಿಕ್ಕಿದೆ ಕೋಟಿ ಕೋಟಿ ಸಂಭಾವನೆ; ಕಪಿಲ್​ ದೇವ್​ಗೆ 5 ಕೋಟಿ
‘83’ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Dec 21, 2021 | 7:30 AM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘83’ ಚಿತ್ರ (83 Movie) ಕೂಡ ಮುಂಚೂಣಿಯಲ್ಲಿದೆ. ರಣವೀರ್​ ಸಿಂಗ್​ (Ranveer Singh) ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರವನ್ನು ಕರ್ನಾಟಕದಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ರಿಲೀಸ್​ ಮಾಡುತ್ತಿದ್ದಾರೆ. ಕಬೀರ್​ ಖಾನ್​ ನಿರ್ದೇಶನ ಮಾಡಿರುವ ‘83’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. 1983ರ ಕ್ರಿಕೆಟ್​ ವಿಶ್ವಕಪ್​ನಲ್ಲಿ (1983 World Cup) ಭಾರತ ತಂಡ ಗೆಲುವು ಸಾಧಿಸಿದ ಘಟನೆಯನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ಡಿ.24ರಂದು ಅದ್ದೂರಿಯಾಗಿ ‘83’ ಬಿಡುಗಡೆ ಆಗುತ್ತಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿರುವ ಸಮಯದಲ್ಲಿ ಚಿತ್ರದ ಬಗೆಗಿನ ಹಲವು ಇಂಟರೆಸ್ಟಿಂಗ್​ ವಿಷಯಗಳು ಹೊರಬರುತ್ತಿವೆ. ಅಚ್ಚರಿ ಎಂದರೆ ಈ ಸಿನಿಮಾದ ನಿರ್ಮಾಪಕರು ಕಥೆಗಾಗಿ ಬಹುಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ.

1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಹಾಗಾಗಿ ಅಂದು ಭಾರತ ತಂಡದಲ್ಲಿ ಇದ್ದ ಆಟಗಾರರನ್ನೇ ಮಾತನಾಡಿಸಿ ವಿವರಗಳನ್ನು ಕಲೆ ಹಾಕಬೇಕಾಯಿತು. ಆ ವಿವರಗಳನ್ನು ಪಡೆಯಲು ‘83’ ನಿರ್ಮಾಪಕರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಟೀಮ್​ನಲ್ಲಿದ್ದ ಎಲ್ಲ ಆಟಗಾರರಿಗೂ ಸೇರಿ ಒಟ್ಟು 15 ಕೋಟಿ ರೂ.ಗಳನ್ನು ನೀಡಲಾಗಿದೆ. ಅದರಲ್ಲಿ ಕ್ಯಾಪ್ಟನ್​ ಕಪಿಲ್​ ದೇವ್​ ಅವರಿಗೆ ಬರೋಬ್ಬರಿ 5 ಕೋಟಿ ಕೊಡಲಾಗಿದೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಕಿಚ್ಚ ಸುದೀಪ್​ ಅವರು ಈ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ಬಗ್ಗೆ ಅವರು ಈಗಾಗಲೇ ಅನೇಕ ಬಾರಿ ಮಾತನಾಡಿದ್ದಾರೆ. ‘1983ರ ವಿಶ್ವಕಪ್​ ಬಗ್ಗೆ ಮಾತನಾಡಲು ಹಲವು ವಿಚಾರಗಳಿವೆ. ಅದರಲ್ಲೊಂದು ಕಥೆ ಇದೆ ಅಂತ ಒಂದು ತಂಡ ನಂಬಿದೆ. ಆ ಕಥೆ ಮಹತ್ವದ್ದಾಗಲಿದೆ ಎಂಬ ನಂಬಿಕೆ ಆ ತಂಡಕ್ಕೆ ಇದೆ. ಆ ನಂಬಿಕೆಯೇ ನನಗೆ ಒಂದು ಅದ್ಭುತ ಕಥೆಯಂತೆ ಕಾಣಿಸುತ್ತಿದೆ. ಒಬ್ಬ ಕ್ರಿಕೆಟ್​ ಪ್ರೇಮಿಯಾಗಿ, ಭಾರತೀಯನಾಗಿ ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್​ ಮಾಡಲು ಬಯಸುತ್ತೇನೆ. ಇಂಥ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ನಿರ್ದೇಶಕ ಕಬೀರ್​ ಖಾನ್​ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಭಾರತ ವಿಶ್ವಕಪ್​ ಗೆದ್ದಾಗ ಎಷ್ಟು ಖುಷಿ ಆಗಿತ್ತೋ ಅದೇ ರೀತಿ ಈ ಸಿನಿಮಾ ತೆರೆ​ಕಾಣುತ್ತಿರುವುದಕ್ಕೆ ಖುಷಿ ಆಗುತ್ತಿದೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ:

‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​

ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ