AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ಟೀಕೆ ಮತ್ತು ಮಿಶ್ರ ಪ್ರತಿಕ್ರಿಯೆ ನಡುವೆಯೂ ‘ಧುರಂಧರ್ 2’ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ನಟ ರಣವೀರ್ ಸಿಂಗ್ ಅವರ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾವಾಗಿ ಈ ಚಿತ್ರ ಹೊರಹೊಮ್ಮಿದೆ. ಪ್ರೀಮಿಯರ್ ಸೇರಿ 3 ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ.

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ
Ranveer Singh
ಮದನ್​ ಕುಮಾರ್​
|

Updated on: Mar 22, 2026 | 7:20 AM

Share

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ..

ಮಾರ್ಚ್ 18ರ ಸಂಜೆಯಿಂದ ‘ಧುರಂಧರ್ 2’ ಸಿನಿಮಾಗೆ ಪ್ರೀಮಿಯರ್ ಶೋ ಆರಂಭ ಆಯಿತು. ಅಂದು ಈ ಚಿತ್ರಕ್ಕೆ 43 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಮಾರ್ಚ್ 19ರಂದು ಎಲ್ಲ ಕಡೆಗಳಲ್ಲಿ ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಯಿತು. ಆ ದಿನ 102.55 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶುಕ್ರವಾರ (ಮಾರ್ಚ್ 20) 80.72 ಕೋಟಿ ರೂಪಾಯಿ ಕಮಾಯಿ ಮಾಡಿತು. ಶನಿವಾರ (ಮಾರ್ಚ್ 21) ಬರೋಬ್ಬರಿ 113 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ.

ಒಂದು ಸಿನಿಮಾ ಒಂದೇ ದಿನದಲ್ಲಿ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವುದು ಎಂದರೆ ತಮಾಷೆಯೇ ಅಲ್ಲ. ಟಿಕೆಟ್ ಬೆಲೆ ಏರಿಕೆ ಆಗಿದೆ. ಹಾಗಿದ್ದರೂ ಕೂಡ ಜನರು ಈ ಸಿನಿಮಾವನ್ನು ವೀಕ್ಷಿಸುತ್ತಿದ್ದಾರೆ. ಅನೇಕರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆಗಳು ಕೂಡ ಹೆಚ್ಚಾಗಿವೆ. ಅದರ ನಡುವೆಯೂ ಈ ಸಿನಿಮಾ ಪ್ರತಿ ದಿನ ನೂರಾರು ಕೋಟಿ ರೂಪಾಯಿ ಗಳಿಸುತ್ತಿದೆ.

ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರು ಈ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅನುಪಮ್ ಖೇರ್, ರಿಷಬ್ ಶೆಟ್ಟಿ, ಜೂನಿಯರ್ ಎನ್​ಟಿಆರ್, ರವಿತೇಜ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಸಿನಿಮಾ ಬಗ್ಗೆ ವಿವಾದ ಶುರುವಾಗಿತ್ತು. ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಟೀಕಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಲೋಪಗಳನ್ನು ಮುಚ್ಚಿ ಹಾಕುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ ಎಂಬ ಆರೋಪ ಎದುರಾಗಿದೆ. ಮುಂದಿನ ದಿನಗಳಲ್ಲಿ ‘ಧರಂಧರ್ 2’ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ