AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?

‘ಧುರಂಧರ್ 2’ ಸಿನಿಮಾವನ್ನು ಕನ್ನಡದಲ್ಲಿ ನೋಡಬೇಕು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್. ಇಷ್ಟು ದಿನ ಈ ಸಿನಿಮಾದ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ಅದಕ್ಕೆ ಕೆಲವು ಕಾರಣಗಳಿದ್ದವು. ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಕನ್ನಡ ಭಾಷೆಯಲ್ಲಿ ‘ಧುರಂಧರ್ 2’ ರಿಲೀಸ್ ಮಾಡಲಾಗಿದೆ.

ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?
Dhurandhar 2
ಮದನ್​ ಕುಮಾರ್​
|

Updated on: Mar 23, 2026 | 5:29 PM

Share

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ‘ಧುರಂಧರ್ 2’ (Dhurandhar 2) ಎಲ್ಲ ಕಡೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 18ರ ಸಂಜೆಯಿಂದಲೇ ಈ ಚಿತ್ರದ ಪ್ರದರ್ಶನ ಆರಂಭ ಆಯಿತು. ಆದರೆ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ತಾಂತ್ರಿಕ ಕಾರಣಗಳಿಂದಾಗಿ ಕನ್ನಡ ಅವತರಣಿಕೆಯ (Dhurandhar 2 Kannada Version) ಬಿಡುಗಡೆ ಕೆಲವು ದಿನಗಳ ಕಾಲ ವಿಳಂಬವಾಗಿತ್ತು. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಈಗ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದೆ. ಕನ್ನಡದ ಪ್ರೇಕ್ಷಕರು ಕೂಡ ಈ ‘ಧುರಂಧರ್ 2’ ನೋಡಿ ಎಂಜಾಯ್ ಮಾಡುತ್ತಿದ್ದಾರೆ.

ಕನ್ನಡ ವರ್ಷನ್ ವಿಳಂಬಕ್ಕೆ ಕಾರಣವೇನು? ಮಾರ್ಚ್ 19ರಂದು ಹಿಂದಿ ಆವೃತ್ತಿಯು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಯಿತು. ಆದರೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಭಾಷೆಗಳ ಡಬ್ಬಿಂಗ್ ಆವೃತ್ತಿಗಳು ಅದೇ ದಿನ ತೆರೆಗೆ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಕೆಲವು ಪ್ರಮುಖ ಕಾರಣಗಳು ಇವೆ. ಪ್ರಾದೇಶಿಕ ಭಾಷೆಗಳ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ವಿಳಂಬವಾದ ಕಾರಣ ಕೊನೆಯ ಕ್ಷಣದಲ್ಲಿ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿತ್ತು.

‘ಧುರಂಧರ್ 2’ ಚಿತ್ರದ ಡಬ್ಬಿಂಗ್ ಕೆಲಸಗಳು ಅಂತಿಮ ಹಂತದಲ್ಲಿ ಬಾಕಿ ಉಳಿದಿದ್ದವು ಮತ್ತು ಡಿಜಿಟಲ್ ಕಂಟೆಂಟ್ (DCP) ಚಿತ್ರಮಂದಿರಗಳಿಗೆ ತಲುಪಲು ಸಮಯ ಹಿಡಿಯಿತು ಎಂಬ ಮಾಹಿತಿ ಕೂಡ ಇದೆ. ಆ ಕಾರಣದಿಂದ ಕನ್ನಡ ವರ್ಷನ್ ಬಿಡುಗಡೆಗೆ ಸಮಸ್ಯೆ ಆಗಿತ್ತು. ಅದಕ್ಕಾಗಿ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದರು. ನಿರ್ದೇಶಕ ಆದಿತ್ಯ ಧರ್ ಅವರು ಈ ವಿಳಂಬಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಮೆಯಾಚಿಸಿದ್ದರು. ‘ನಮ್ಮ ಚಿತ್ರವನ್ನು ಎಲ್ಲ ಭಾಷೆಗಳಲ್ಲಿ ಏಕಕಾಲಕ್ಕೆ ತೋರಿಸಬೇಕೆಂಬ ಆಸೆ ಇತ್ತು. ಆದರೆ ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ವಿಳಂಬದ ನಂತರ ಬಿಡುಗಡೆಯಾದರೂ ಕೂಡ ಕರ್ನಾಟಕದಲ್ಲಿ ‘ಧುರಂಧರ್ 2’ ಕನ್ನಡ ವರ್ಷನ್​​ಗೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕನ್ನಡ ಆವೃತ್ತಿಯ ಪ್ರದರ್ಶನಗಳು ಹೌಸ್‌ಫುಲ್ ಆಗುತ್ತಿವೆ. ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ರಣವೀರ್ ಸಿಂಗ್, ಸಾರಾ ಅರ್ಜುನ್, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ: ‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಸಿನಿಮಾದ ಮೇಕಿಂಗ್ ಮತ್ತು ರಣವೀರ್ ಸಿಂಗ್ ಅವರ ಆ್ಯಕ್ಷನ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ, ಅನೇಕರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ಖ್ಯಾತ ನಟಿ ರಮ್ಯಾ ಅವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಮಿಶ್ರ ಪ್ರತಿಕ್ರಿಯೆ ನಡುವೆಯೂ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ 600 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ದಾಖಲೆ ಬರೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!