AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ನಡುವೆಯೂ ಗೆದ್ದ ರಣವೀರ್ ಸಿಂಗ್: ‘ಧುರಂಧರ್’ ಕಲೆಕ್ಷನ್ ಸೂಪರ್

ರಣವೀರ್ ಸಿಂಗ್ ಅವರ ವೃತ್ತಿಜೀವನದ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ಧುರಂಧರ್ ಸಹ ಸೇರ್ಪಡೆ ಆಗಿದೆ. 2 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್ 60 ಕೋಟಿ ರೂಪಾಯಿ ಸಮೀಪಿಸಿದೆ. 3ನೇ ದಿನ ಕೂಡ ಉತ್ತಮ ಕಲೆಕ್ಷನ್ ಆಗಲಿದೆ. ರಣವೀರ್ ಸಿಂಗ್ ಜತೆ ಅಕ್ಷಯ್ ಖನ್ನಾ, ಆರ್. ಮಾಧವನ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ವಿರೋಧದ ನಡುವೆಯೂ ಗೆದ್ದ ರಣವೀರ್ ಸಿಂಗ್: ‘ಧುರಂಧರ್’ ಕಲೆಕ್ಷನ್ ಸೂಪರ್
Ranveer Singh
ಮದನ್​ ಕುಮಾರ್​
|

Updated on: Dec 07, 2025 | 7:22 AM

Share

ನಟ ರಣವೀರ್ ಸಿಂಗ್ (Ranveer Singh) ಅವರು ತಮ್ಮ ಮಾತಿನ ಕಾರಣದಿಂದಲೇ ಅನೇಕ ಬಾರಿ ವಿವಾದ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿಯ ಅಭಿನಯವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅವಮಾನ ಮಾಡಿದ್ದರು. ಅದರಿಂದ ವಿವಾದ ಶುರುವಾಗಿತ್ತು. ಅದು ಕೂಡ ‘ಧುರಂಧರ್’ ಬಿಡುಗಡೆ ಹೊಸ್ತಿಲಲ್ಲೇ ಅವರು ಈ ರೀತಿ ಮಾಡಿದ್ದರಿಂದ ಈ ಸಿನಿಮಾದ ಕಲೆಕ್ಷನ್ ಮೇಲೆ ಪರಿಣಾಮ ಬೀರಬಹುದು ಎಂದೇ ಊಹಿಸಲಾಗಿತ್ತು. ಆದರೆ ಆ ರೀತಿ ಆಗಿಲ್ಲ. ‘ಧುರಂಧರ್’ (Dhurandhar) ಸಿನಿಮಾ ಅತ್ಯುತ್ತಮವಾಗಿಯೇ ಕಲೆಕ್ಷನ್ ಮಾಡುತ್ತಿದೆ. ಮೊದಲ ದಿನಕ್ಕಿಂತಲೂ ಎರಡನೇ ದಿನದ ಕಲೆಕ್ಷನ್ ಜಾಸ್ತಿ ಆಗಿದೆ.

ಬಿಡುಗಡೆಗೂ ಮುನ್ನ ‘ಧುರಂಧರ್’ ಬಗ್ಗೆ ಕೆಲವು ಅನುಮಾನಗಳು ಇದ್ದವು. ಈ ಸಿನಿಮಾಗೆ ಅಷ್ಟೇನೂ ಹೈಪ್ ಇರಲಿಲ್ಲ. ಹಾಗಾಗಿ ಕಳಪೆ ಕಲೆಕ್ಷನ್ ಆಗಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕಿತು. ಮೊದಲ ದಿನವಾದ ಶುಕ್ರವಾರ (ಡಿಸೆಂಬರ್ 5) ‘ಧುರಂಧರ್’ ಸಿನಿಮಾ 27 ರೂಪಾಯಿ ಕಲೆಕ್ಷನ್ ಮಾಡಿತು. 2ನೇ ದಿನ ಇನ್ನಷ್ಟು ಹೆಚ್ಚಾಯಿತು.

ಎರಡನೇ ದಿನವಾರ ಶನಿವಾರ (ಡಿಸೆಂಬರ್ 6) ‘ಧುರಂಧರ್’ ಸಿನಿಮಾದ ಕಲೆಕ್ಷನ್​​ನಲ್ಲಿ ಏರಿಕೆ ಕಂಡಿದೆ. ಶನಿವಾರ ರಾತ್ರಿ 10 ಗಂಟೆ ವೇಳೆಗೆ ಈ ಸಿನಿಮಾಗೆ 31 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ಅಂದರೆ, 2 ದಿನಕ್ಕೆ ಈ ಸಿನಿಮಾದ ಒಟ್ಟು ಗಳಿಕೆ 58 ಕೋಟಿ ರೂಪಾಯಿ ಆಗಿದೆ. ಇದರಿಂದ ರಣವೀರ್ ಸಿಂಗ್ ಅವರು ಗೆದ್ದು ಬೀಗಿದ್ದಾರೆ.

‘ಧುರಂಧರ್’ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾಗಿ ಮೂರನೇ ದಿನ ಕೂಡ ಕಲೆಕ್ಷನ್ ಹೆಚ್ಚುವುದು ಖಚಿತ. ಭಾನುವಾರ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಸಿನಿಮಾ ವೀಕ್ಷಿಸಲಿದ್ದಾರೆ. ಇದರಿಂದಾಗಿ ‘ಧುರಂಧರ್’ ಸಿನಿಮಾದ ಒಟ್ಟು ಕಲೆಕ್ಷನ್ 100 ಕೋಟಿ ರೂಪಾಯಿ ಸಮೀಪಿಸಲಿದೆ. ರಣವೀರ್ ಸಿಂಗ್ ಅವರ ವೃತ್ತಿ ಜೀವನದ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ಧುರಂಧರ್ ಕೂಡ ಸೇರ್ಪಡೆ ಆಗಿದೆ.

ಇದನ್ನೂ ಓದಿ: ‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ

ನೈಜ ಘಟನೆಗಳನ್ನು ಆಧರಿಸಿ ‘ಧುರಂಧರ್’ ಸಿನಿಮಾ ಸಿದ್ಧವಾಗಿದೆ. ‘ಉರಿ’ ಸಿನಿಮಾ ಖ್ಯಾತಿ ಆದಿತ್ಯ ಧಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ದೇಶಭಕ್ತಿ ಕಹಾನಿಯನ್ನು ಈ ಸಿನಿಮಾ ಹೊಂದಿದೆ. ರಣವೀರ್ ಸಿಂಗ್ ಜೊತೆ ಅಕ್ಷಯ್ ಖನ್ನಾ, ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು