AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ

‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಮಾಡಿದ ವಿಮರ್ಶೆಗೆ ‘ಧುರಂಧರ್’ ಚಿತ್ರತಂಡ ಗರಂ ಆಗಿತ್ತು. ಈಗ ಅದೇ ಸಂಸ್ಥೆ ನೀಡಿದ ಪ್ರಶಸ್ತಿಯನ್ನು ‘ಧುರಂಧರ್’ ತಂಡ ತಿರಸ್ಕರಿಸಿದೆ. ಆ ಮೂಲಕ ಕೆಟ್ಟ ವಿಮರ್ಶೆಗೆ ತಿರುಗೇಟು ನೀಡಿದೆ. ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗುತ್ತಿದೆ.

ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ
Ranveer Singh
ಮದನ್​ ಕುಮಾರ್​
|

Updated on: Feb 24, 2026 | 10:06 PM

Share

‘ಧುರಂಧರ್’ (Dhurandhar) ಸಿನಿಮಾ 2025ರ ವರ್ಷದ ಅತಿದೊಡ್ಡ ಬ್ಲಾಕ್ ಬಸ್ಟರ್ ಎನಿಸಿಕೊಂಡಿತು. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಈ ಸಿನಿಮಾ ಕೂಡ ಒಂದಾಗಿದೆ. ಇದೀಗ ಪ್ರಶಸ್ತಿ ಪ್ರದಾನ ಸಮಾರಂಭವೊಂದರ ಕಾರಣದಿಂದಾಗಿ ‘ಧುರಂಧರ್’ ಸಿನಿಮಾ ಮತ್ತೆ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರತಂಡ ಗೈರಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ.

ಸಿನಿಮಾ ಪತ್ರಿಕೋದ್ಯಮದಲ್ಲಿ ಪ್ರಮುಖ ಮಾಧ್ಯಮ ಸಂಸ್ಥೆ ಎನಿಸಿಕೊಂಡಿರುವ ‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಆಯೋಜಿಸಿದ್ದ ಇತ್ತೀಚಿನ ಪ್ರಶಸ್ತಿ ಸಮಾರಂಭದಲ್ಲಿ ‘ಧುರಂಧರ್’ ಚಿತ್ರಕ್ಕೆ ಪ್ರಶಸ್ತಿ ಘೋಷಿಸಲಾಗಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಚಿತ್ರ ಮಾಡಿದ ಅದ್ಭುತ ಸಾಧನೆಗಾಗಿ ಈ ಗೌರವವನ್ನು ನೀಡಲಾಗಿತ್ತು. ಆದರೆ, ಅಚ್ಚರಿಯೆಂಬಂತೆ ಚಿತ್ರತಂಡದ ಯಾವೊಬ್ಬ ಸದಸ್ಯರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲು ವೇದಿಕೆ ಏರಲಿಲ್ಲ!

ಚಿತ್ರತಂಡದ ಗೈರಿಗೆ ಕಾರಣವೇನು? ಚಿತ್ರತಂಡದ ಈ ನಡೆಯ ಹಿಂದೆ ಅಚ್ಚರಿಯ ಹಿನ್ನೆಲೆಯೊಂದಿದೆ. ಚಿತ್ರ ಬಿಡುಗಡೆಯಾದ ಸಮಯದಲ್ಲಿ ‘ಹಾಲಿವುಡ್ ರಿಪೋರ್ಟರ್’ನ ಪ್ರಮುಖ ವಿಮರ್ಶಕಿ ಅನುಪಮಾ ಚೋಪ್ರಾ ಅವರು ಈ ಚಿತ್ರದ ಬಗ್ಗೆ ವಿವಾದಾತ್ಮಕ ವಿಮರ್ಶೆ ಮಾಡಿದ್ದರು. ‘ಧುರಂಧರ್ ಚಿತ್ರವು ಉದ್ದೇಶಪೂರ್ವಕವಾಗಿ ಪಾಕಿಸ್ತಾನ ವಿರೋಧಿ ನಿರೂಪಣೆಯನ್ನು ಹೊಂದಿದೆ’ ಎಂದು ಅವರು ಟೀಕಿಸಿದ್ದರು.

ವಿಮರ್ಶಕಿಯ ಈ ಮಾತುಗಳು ಚಿತ್ರತಂಡದ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ, ತಮ್ಮ ಸಿನಿಮಾವನ್ನ ಟೀಕಿಸಿದ ಅದೇ ಮಾಧ್ಯಮ ಸಂಸ್ಥೆ ನೀಡಿದ ಪ್ರಶಸ್ತಿಯನ್ನು ಬಹಿಷ್ಕರಿಸುವ ಮೂಲಕ ‘ಧುರಂಧರ್’ ತಂಡವು ಅಂದಿನ ವಿಮರ್ಶೆಗೆ ತಕ್ಕ ತಿರುಗೇಟು ನೀಡಿದೆ. ಪ್ರಶಸ್ತಿ ಸಮಾರಂಭವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುವ ಮೂಲಕ ಚಿತ್ರತಂಡವು ಮಾಧ್ಯಮ ಸಂಸ್ಥೆಗೆ ತಕ್ಕ ಪ್ರತ್ಯುತ್ತರ ನೀಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ

‘ಧುರಂಧರ್’ ಚಿತ್ರದ ಭಾರಿ ಯಶಸ್ಸಿನ ಬಳಿಕ ಸೀಕ್ವೆಲ್ ಮೇಲೆ ನಿರೀಕ್ಷೆ ಹೆಚ್ಚಿದೆ. ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಹಾಗಾದರೆ ‘ಧುರಂಧರ್ 2’ ಸಿನಿಮಾಗೆ ‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಯಾವ ರೀತಿ ವಿಮರ್ಶೆ ನೀಡಲಿದೆ ಎಂಬ ಕುತೂಹಲ ಸಿನಿಪ್ರಿಯರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!