ಮಗು ಜನಿಸಿದ ಬೆನ್ನಲ್ಲೇ ರಣವೀರ್ ಕಡೆಯಿಂದ ಬ್ಯಾಡ್ ನ್ಯೂಸ್

‘ಡಾನ್ 3’ ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಟಿಸಲಿದ್ದಾರೆ ಎಂದು ಘೋಷಣೆಯಾದಾಗ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಫರ್ಹಾನ್ ಅಖ್ತರ್ ಸಿನಿಮಾ ಘೋಷಣೆ ಮಾಡಿದ್ದರು. ಆದರೆ ಈಗ ‘ಡಾನ್ 3’ ಸಿನಿಮಾ ನಿರೀಕ್ಷೆ ಮಾಡುತ್ತಿರುವವರಿಗೆ ಬೇಸರದ ಸುದ್ದಿ ಹೊರಬಿದ್ದಿದೆ.

ಮಗು ಜನಿಸಿದ ಬೆನ್ನಲ್ಲೇ ರಣವೀರ್ ಕಡೆಯಿಂದ ಬ್ಯಾಡ್ ನ್ಯೂಸ್
ರಣ್ವೀರ್ ಸಿಂಗ್
Edited By:

Updated on: Sep 20, 2024 | 4:19 PM

ರಣವೀರ್ ಸಿಂಗ್ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ನಟಿಸುತ್ತಿದ್ದಾರೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಇದಕ್ಕೆ ಸಾಕಷ್ಟು ವಿರೋಧಗಳು ಕೂಡ ಎದುರಾಗಿದ್ದು ಗೊತ್ತೇ ಇದೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗೋ ನಿರೀಕ್ಷೆ ಇತ್ತು. ಆದರೆ, ಅದು ಸುಳ್ಳಾಗಿದೆ. ಏಕೆಂದರೆ ಈ ಸಿನಿಮಾದ ಕೆಲಸ ಆರಂಭ ಆಗೋಕೆ ಇನ್ನೂ ಏಳೆಂಟು ತಿಂಗಳಂತೂ ಬೇಕು ಎನ್ನಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರಂತೆ.

ಎಲ್ಲವೂ ಲೆಕ್ಕಾಚಾರದ ಪ್ರಕಾರ ನಡೆದಿದ್ದರೆ ‘ಡಾನ್ 3’ ಸಿನಿಮಾ 2025ರ ಜನವರಿಯಿಂದ ಆರಂಭ ಆಗಬೇಕಿತ್ತು. ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಹಾಗೂ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಆದರೆ, ಈ ಸಿನಿಮಾದ ಶೂಟಿಂಗ್ ಮೇ ತಿಂಗಳಿಗೆ ಮುಂದೂಲ್ಪಟ್ಟಿದೆಯಂತೆ. ಇದಕ್ಕೆ ಕಾರಣ ಹಲವಾರು ಇದೆ ಎಂದು ಹೇಳಲಾಗುತ್ತಿದೆ. ಫರ್ಹಾನ್ ಅಖ್ತರ್ ಸದ್ಯ ‘120 ಬಹದ್ದೂರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸ ಪೂರ್ಣಗೊಂಡ ಬಳಿಕ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಭಾಗಿ ಆಗಲಿದ್ದಾರೆ.

ಇದಕ್ಕೆ ರಣವೀರ್ ಸಿಂಗ್ ಕೂಡ ಕಾರಣ ಎನ್ನಲಾಗುತ್ತಿದೆ. ರಣವೀರ್ ಸಿಂಗ್ ಅವರು ಸದ್ಯ ಮಗು ಜನಿಸಿದ ಖುಷಿಯಲ್ಲಿ ಇದ್ದಾರೆ. ದೀಪಿಕಾ ಇತ್ತೀಚೆಗೆ ಮುಗುವಿಗೆ ಜನ್ಮ ನೀಡಿದ್ದಾರೆ. ಈ ಕಾರಣಕ್ಕೆ ಅವರು ಒಂದು ದೀರ್ಘ ಬ್ರೇಕ್ ಪಡೆದಿದ್ದಾರೆ. ಈ ಕಾರಣದಿಂದ ಉಳಿದ ಸಿನಿಮಾಗಳ ಕೆಲಸಗಳು ವಿಳಂಬ ಆಗಿವೆ. ಇದು ಕೂಡ ಅವರ ಮುಂದಿನ ಸಿನಿಮಾ ಮೇಲೆ ನೇರ ಎಫ್ಟೆಕ್ಟ್ ಕೊಟ್ಟಿದೆ.

ಇದನ್ನೂ ಓದಿ:Ranveer Singh: ಮಿತಿ ಮೀರಿತು ‘ಡಾನ್ 3’ ಸಿನಿಮಾ ಬಜೆಟ್; ಇಲ್ಲಿದೆ ವಿವರ

‘ಡಾನ್ 3’ ಸಿನಿಮಾ ಘೋಷಣೆ ಆಗಿ ಸಾಕಷ್ಟು ಸಮಯ ಕಳೆದಿದೆ. ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾಗಾಗಿ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳಲ್ಲಿ ಶಾರುಖ್ ಖಾನ್ ನಟಿಸಿದ್ದಾರೆ. ಅದನ್ನು ಮೀರಿಸುವ ರೀತಿಯಲ್ಲಿ ಅವರು ಸಿನಿಮಾ ಮಾಡಬೇಕಿದೆ.

ದೀಪಿಕಾಗೆ ಹೆಣ್ಣು ಮಗು ಹುಟ್ಟಿದೆ. ಸೆಪ್ಟೆಂಬರ್ 8ರಂದು ಈ ಸಿಹಿ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ. ಅವರು ತಾವು ಒಪ್ಪಿಕೊಂಡ ಇಸನಿಮಾ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ವರ್ಷ ಮಾರ್ಚ್ವರೆಗೆ ಬ್ರೇಕ್ ಪಡೆಯಲಿರುವ ಅವರು ನಂತರ ‘ಕಲ್ಕಿ 2898 ಎಡಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 20 September 24

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us