AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಬಳಿಕ ರಣ್ವೀರ್ ಹೊಸ ಸಿನಿಮಾ ಶೂಟಿಂಗ್ ಆರಂಭ: ಯಾವುದದು?

Ranveer Singh new film: ರಣ್ವೀರ್ ಸಿಂಗ್, ಬಾಲಿವುಡ್​​ನ ಸ್ಟಾರ್ ಆಗಿದ್ದವರು ಸೂಪರ್ ಸ್ಟಾರ್ ಆಗಿಬಿಟ್ಟಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ಭಾರಿ ದೊಡ್ಡ ಯಶಸ್ಸನ್ನು ಈ ಸಿನಿಮಾಗಳು ತಂದುಕೊಟ್ಟಿವೆ. ಆದರೆ ಈ ಸಿನಿಮಾಗಳ ಬಳಿಕ ರಣ್ವೀರ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಇತ್ತು. ಧುರಂಧರ್ 2 ಸಿನಿಮಾದ ಬಳಿಕ ಹೊಸ ಸಿನಿಮಾ ಒಪ್ಪಿಕೊಳ್ಳಲು ಸಮಯ ತೆಗೆದುಕೊಂಡ ರಣ್ವೀರ್ ಸಿಂಗ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ.

‘ಧುರಂಧರ್ 2’ ಬಳಿಕ ರಣ್ವೀರ್ ಹೊಸ ಸಿನಿಮಾ ಶೂಟಿಂಗ್ ಆರಂಭ: ಯಾವುದದು?
Dhurandhar Movie
ಮಂಜುನಾಥ ಸಿ.
|

Updated on: Aug 16, 2026 | 4:27 PM

Share

ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಈ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆದಿವೆ. ಈ ಎರಡು ಸಿನಿಮಾಗಳಿಂದ ರಣ್ವೀರ್ ಸಿಂಗ್, ಬಾಲಿವುಡ್​​ನ ಸ್ಟಾರ್ ಆಗಿದ್ದವರು ಸೂಪರ್ ಸ್ಟಾರ್ ಆಗಿಬಿಟ್ಟಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ಭಾರಿ ದೊಡ್ಡ ಯಶಸ್ಸನ್ನು ಈ ಸಿನಿಮಾಗಳು ತಂದುಕೊಟ್ಟಿವೆ. ಆದರೆ ಈ ಸಿನಿಮಾಗಳ ಬಳಿಕ ರಣ್ವೀರ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಇತ್ತು. ಧುರಂಧರ್ 2 ಸಿನಿಮಾದ ಬಳಿಕ ಹೊಸ ಸಿನಿಮಾ ಒಪ್ಪಿಕೊಳ್ಳಲು ಸಮಯ ತೆಗೆದುಕೊಂಡ ರಣ್ವೀರ್ ಸಿಂಗ್ ಇದೀಗ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ.

ರಣ್ವೀರ್ ಸಿಂಗ್ ಅವರು ‘ಪಾರ್ಲೆ’ ಹೆಸರಿನ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಿನಿಮಾದ ಚಿತ್ರೀಕರಣ ಇದೀಗ ಮುಂಬೈನಲ್ಲಿ ಶುರುವಾಗಿದೆ. ‘ಪಾರ್ಲೆ’ ಸಿನಿಮಾವು ಸೂಪರ್ ಹೀರೋ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದ್ದು, ಈ ಸಿನಿಮಾ ಸಹ ‘ಧುರಂಧರ್’ ರೀತಿ ದೇಶಪ್ರೇಮ ಜಾಗೃತಗೊಳಿಸುವ, ವಿದೇಶಿ ಕ್ಷುಧ್ರ ಶಕ್ತಿಗಳ ವಿರುದ್ಧ ಹೋರಾಟದ ಕತೆಯನ್ನು ಹೊಂದಿದೆ ಎನ್ನಲಾಗುತ್ತಿದೆ. ಮತ್ತೊಂದು ವಿಶೇಷವೆಂದರೆ ಈ ಸಿನಿಮಾನಲ್ಲಿ ಮಲಯಾಳಂ ಚಿತ್ರರಂಗದ ಸ್ಟಾರ್ ನಟಿ, ‘ಲೋಕಃ’ ಖ್ಯಾತಿಯ ಕಲ್ಯಾಣಿ ಪ್ರಿಯದರ್ಶನ್ ನಾಯಕಿ.

ಇದನ್ನೂ ಓದಿ:‘ಧುರಂಧರ್’ ಚೆಲುವೆ ಸಾರಾ ಅರ್ಜುನ್ ಕ್ಯೂಟ್ ವಿಡಿಯೋ

ರಣ್ವೀರ್ ಸಿಂಗ್ ಅವರ ಹೊಸ ಸಿನಿಮಾ ‘ಪಾರ್ಲೆ’ಯನ್ನು ಜಯ್ ಮೆಹ್ತಾ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಇವರು ‘ಒಮೆಟ್ರಾ’ ಮತ್ತು ‘ದಿ ಗರ್ಲ್ ಇನ್ ಯೆಲ್ಲೊ ಬೂಟ್ಸ್’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಈ ಹಿಂದೆ ಬ್ರಿಜ್ ಮಾದರಿಯ, ಕಲಾತ್ಮಕ ಮಾದರಿಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಜಯ್ ಮೆಹ್ತಾ ಇದೀಗ ಸೂಪರ್ ಹೀರೋ ಮಾದರಿಯ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ರಣ್ವೀರ್ ಸಿಂಗ್ ಪಾಲಿಗೆ ಸಹ ಇದು ಅವರ ಮೊಟ್ಟ ಮೊದಲ ಸೂಪರ್ ಹೀರೋ ಮಾದರಿಯ ಸಿನಿಮಾ ಆಗಿದೆ.

ಅಸಲಿಗೆ ರಣ್ವೀರ್ ಸಿಂಗ್, ‘ಧುರಂಧರ್ 2’ ಬಳಿಕ ‘ಡಾನ್ 3’ ಸಿನಿಮಾನಲ್ಲಿ ನಟಿಸಬೇಕಿತ್ತು. ಆದರೆ ‘ಡಾನ್ 3’ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕರಾಗಿರುವ ಫರ್ಹಾನ್ ಅಖ್ತರ್ ಅವರಿಗೂ ರಣ್ವೀರ್ ಸಿಂಗ್ ನಡುವೆಯೂ ಭಿನ್ನಾಭಿಪ್ರಾಯ ಮೂಡಿದ ಕಾರಣ ರಣ್ವೀರ್ ಸಿಂಗ್ ಆ ಸಿನಿಮಾದಿಂದ ಹೊರಬಂದರು. ಬಳಿಕ ‘ಪಾರ್ಲೆ’ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ಅಂದಹಾಗೆ ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಮಾತ್ರವೇ ಅಲ್ಲದೆ ಬೇರೆ ಕೆಲ ದೇಶಗಳಲ್ಲಿಯೂ ಚಿತ್ರೀಕರಣ ಮಾಡಲಿದ್ದಾರೆ. ಅಂದಹಾಗೆ ಈ ಸಿನಿಮಾದ ನಾಯಕಿ ಪಾತ್ರಕ್ಕೆ ಕನ್ನಡತಿ ರುಕ್ಮಿಣಿ ವಸಂತ್ ಅವರೂ ಸಹ ಆಡಿಷನ್ ನೀಡಿದ್ದರು ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ