AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಸಿನಿಮಾ ನೋಡಿ 40 ನಿಮಿಷ ಮಾತಾಡಿದ್ದ ರಣವೀರ್​ ಸಿಂಗ್​; ನಿರ್ದೇಶಕರಿಗೆ ಅಚ್ಚರಿ

ಕೆಲವರಿಗೆ ‘ಅನಿಮಲ್​’ ಸಿನಿಮಾ ಇಷ್ಟ ಆಗಿಲ್ಲ. ಆದರೆ ಅನೇಕ ಸೆಲೆಬ್ರಿಟಿಗಳಿಗೆ ತುಂಬ ಇಷ್ಟ ಆಗಿದೆ. ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ, ಅನಿಲ್​ ಕಪೂರ್, ಬಾಬಿ ಡಿಯೋಲ್​ ಮುಂತಾದವರು ನಟಿಸಿದ ಈ ಸಿನಿಮಾವನ್ನು ರಣವೀರ್​ ಸಿಂಗ್​ ವೀಕ್ಷಿಸಿದ್ದಾರೆ. ಬಳಿಕ ಅವರು ನಿರ್ದೇಶಕರಿಗೆ ಕರೆ ಮಾಡಿ ಸುದೀರ್ಘವಾಗಿ ಮಾತನಾಡಿದ್ದಾರೆ. ಅಷ್ಟರಮಟ್ಟಿಗೆ ಅವರು ‘ಅನಿಮಲ್​’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

‘ಅನಿಮಲ್​’ ಸಿನಿಮಾ ನೋಡಿ 40 ನಿಮಿಷ ಮಾತಾಡಿದ್ದ ರಣವೀರ್​ ಸಿಂಗ್​; ನಿರ್ದೇಶಕರಿಗೆ ಅಚ್ಚರಿ
ಸಂದೀಪ್​ ರೆಡ್ಡಿ ವಂಗ, ರಣವೀರ್​ ಸಿಂಗ್​
ಮದನ್​ ಕುಮಾರ್​
|

Updated on: Feb 05, 2024 | 4:41 PM

Share

ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆಯಾದ ಅನಿಮಲ್​’ ಸಿನಿಮಾ (Animal Movie) ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಒಂದು ವರ್ಗದ ಜನರು ಆ ಸಿನಿಮಾವನ್ನು ಸಿಕ್ಕಾಪಟ್ಟೆ ವಿರೋಧಿಸಿದ್ದಾರೆ. ಆದರೆ ಪ್ರೇಕ್ಷಕರು ಮುಗಿಬಿದ್ದು ಆ ಸಿನಿಮಾವನ್ನು ನೋಡಿದ್ದಾರೆ. ಪರಿಣಾಮವಾಗಿ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ‘ಅನಿಮಲ್​’ ಸಿನಿಮಾ ಅಂದಾಜು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಚಿತ್ರದಿಂದ ನಟ ರಣಬೀರ್​ ಕಪೂರ್​ ಅವರ ಖ್ಯಾತಿ ಹೆಚ್ಚಾಗಿದೆ. ಅವರಿಗೆ ಇದ್ದ ಡಿಮ್ಯಾಂಡ್​ ಹೆಚ್ಚಿದೆ. ವಿಶೇಷ ಏನೆಂದರೆ, ಬಾಲಿವುಡ್​ ನಟ ರಣವೀರ್​ ಸಿಂಗ್​ (Ranveer Singh) ಕೂಡ ‘ಅನಿಮಲ್​’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಅವರಿಗೆ ಕರೆ ಮಾಡಿದ ರಣವೀರ್​ ಸಿಂಗ್​ ಅವರು 40 ನಿಮಿಷ ಮಾತನಾಡಿದ್ದಾರೆ.

‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ಅವರು ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಕೆಲವು ಆಸಕ್ತಿಕರ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ದೈನಿಕ್​ ಭಾಸ್ಕರ್​’ಗೆ ನೀಡಿದ ಸಂದರ್ಶನದಲ್ಲಿ ಅವರು ರಣವೀರ್​ ಸಿಂಗ್​ ಬಗ್ಗೆ ಮಾತನಾಡಿದ್ದಾರೆ. ‘ರಣವೀರ್​ ಸಿಂಗ್​ ಅವರಿಂದ ನನಗೆ ಬಹಳ ಉತ್ತಮವಾದ ಪ್ರತಿಕ್ರಿಯೆ ಸಿಕ್ಕಿತು. ನಂಬೋಕೆ ಅಸಾಧ್ಯವಾದ ಪ್ರತಿಕ್ರಿಯೆ ಅದು’ ಎಂದು ಸಂದೀಪ್​ ರೆಡ್ಡಿ ವಂಗ ಹೇಳಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

‘ರಣವೀರ್​ ಸಿಂಗ್​ ಅವರು ನನ್ನ ಜೊತೆ ಸುಮಾರು 40 ನಿಮಿಷ ಮಾತನಾಡಿದರು. ಬಳಿಕ ಒಂದು ಉದ್ದವಾದ ಮೆಸೇಜ್​ ಕಳಿಸಿದರು. ನಾನು ಅದನ್ನು ಮೂರು-ನಾಲ್ಕು ಬಾರಿ ಓದಿದೆ. ಆ ಮೆಸೇಜ್​ ಓದಿದ ಬಳಿಕ ನನಗೆ ಹೇಗೆ ಅನಿಸಿತು ಎಂಬುದನ್ನು ವಿವರಿಸುವುದು ಕಷ್ಟ. ಮೆಸೇಜ್​ ಓದಿದ ನಂತರ ನನಗೆ ಬಹಳ ಖುಷಿ ಆಯಿತು. ಈ ಸಿನಿಮಾದಲ್ಲಿ ಇಷ್ಟೆಲ್ಲ ಅಂಶಗಳು ಇವೆಯಲ್ಲ ಅಂತ ನನಗೆ ಅಚ್ಚರಿ ಆಗುವ ರೀತಿಯಲ್ಲಿ ಅನಿಮಲ್​ ಬಗ್ಗೆ ಅವರು ಮೆಸೇಜ್​​ನಲ್ಲಿ ಬರೆದಿದ್ದರು’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗ.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾದ ನಟಿ ತೃಪ್ತಿ ದಿಮ್ರಿ ಬಾಯ್​ಫ್ರೆಂಡ್​ ಫೋಟೋ ವೈರಲ್​

ಅಚ್ಚರಿ ಏನೆಂದರೆ, ರಣವೀರ್​ ಸಿಂಗ್​ ಅವರು ಸಂದೀಪ್​ ರಡ್ಡಿ ವಂಗ ನಿರ್ದೇಶನದ ‘ಕಬೀರ್​ ಸಿಂಗ್​’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಆ ಚಿತ್ರವನ್ನು ಒಪ್ಪಿಕೊಂಡಿರಲಿಲ್ಲ. ಬಳಿಕ ಅದು ಶಾಹಿದ್​ ಕಪೂರ್​ ಪಾಲಾಯಿತು. ಈಗ ಸಂದೀಪ್​ ರೆಡ್ಡಿ ವಂಗ ಮತ್ತು ರಣವೀರ್​ ಸಿಂಗ್​ ನಡುವೆ ಸ್ನೇಹ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ