AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು

ನನಗೆ ತೆಲುಗು ಮಾತನಾಡಲು ಬರುವುದಿಲ್ಲ. ಆದರೂ ನಾನು ‘ಪುಷ್ಪ’, ‘ಆರ್​ಆರ್​ಆರ್​’ ಸಿನಿಮಾ ನೋಡಿದ್ದೇನೆ. ಆ ಸಿನಿಮಾಗಳ ಬಗ್ಗೆ ನಿಜಕ್ಕೂ ವಿಸ್ಮಯಗೊಂಡೆ ಎಂದಿದ್ದಾರೆ ರಣವೀರ್ ಸಿಂಗ್,

‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು
ರಣವೀರ್-ಯಶ್
TV9 Web
| Edited By: |

Updated on:May 12, 2022 | 1:50 PM

Share

ಬಾಲಿವುಡ್​ಗಿಂತ (Bollywood) ದಕ್ಷಿಣ ಭಾರತದ ಚಿತ್ರರಂಗ ಮೇಲು ಎಂಬ ಮಾತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ‘ಪುಷ್ಪ’, ‘ಆರ್​ಆರ್​ಆರ್’ ಹಾಗೂ ‘ಕೆಜಿಎಫ್ 2’  (KGF: Chapter 2) ಯಶಸ್ಸಿನ ನಂತರ ಈ ಚರ್ಚೆ ಜೋರಾಗಿದೆ. ಬಾಲಿವುಡ್ ಮಂದಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಕೆಲವರು ‘ಬಾಲಿವುಡ್​ ಎಂದಿಗೂ ಗ್ರೇಟ್’ ಎಂದರೆ, ಇನ್ನೂ ಕೆಲವರು ‘ದಕ್ಷಿಣ ಭಾರತದ ಚಿತ್ರರಂಗವನ್ನು ನೋಡಿ ಕಲಿಯಬೇಕಿದೆ, ರಿಮೇಕ್ ಮಾಡುವುದನ್ನು ನಿಲ್ಲಿಸಬೇಕಿದೆ’ ಎಂದು ಹೇಳಿದ್ದಾರೆ. ಈಗ ರಣವೀರ್ ಸಿಂಗ್ (Ranaveer Singh) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಹಂಚಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 13ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ‘83’ ನಂತರ ಬಿಡುಗಡೆ ಆಗುತ್ತಿರುವ ಅವರ ಮುಂದಿನ ಸಿನಿಮಾ ಇದಾಗಿದೆ. ಶಾಲಿನಿ ಪಾಂಡೆ ಅವರು ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾದಲ್ಲಿ ನಾಯಕಿ ಆಗಿದ್ದಾರೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ರಣವೀರ್​ ಸಿಂಗ್​ ಭಾಗಿ ಆಗುತ್ತಿದ್ದಾರೆ. ಈ ವೇಳೆ ಅವರು ಬಾಲಿವುಡ್ vs ದಕ್ಷಿಣ ಭಾರತದ ಸಿನಿಮಾ ಎಂಬ ಚರ್ಚೆ ಕುರಿತು ಮಾತನಾಡಿದ್ದಾರೆ.

‘ನನಗೆ ತೆಲುಗು ಮಾತನಾಡಲು ಬರುವುದಿಲ್ಲ. ಆದರೂ ನಾನು ‘ಪುಷ್ಪ’, ‘ಆರ್​ಆರ್​ಆರ್​’ ಸಿನಿಮಾ ನೋಡಿದ್ದೇನೆ. ಆ ಸಿನಿಮಾಗಳ ಬಗ್ಗೆ ನಿಜಕ್ಕೂ ವಿಸ್ಮಯಗೊಂಡೆ. ಸಿನಿಮಾ ಮೇಕಿಂಗ್​​ಅನ್ನು ನಾನು ಪ್ರಶಂಸಿಸುತ್ತೇನೆ. ಬೇರೆಬೇರೆ ವಲಯದ ಪ್ರೇಕ್ಷಕರು ಈ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವುಗಳೆಲ್ಲವೂ ನಮ್ಮ ಚಿತ್ರಗಳು. ಭಾರತೀಯ ಸಿನಿಮಾ ಅನ್ನೋದು ಒಂದೇ’ ಎಂದು ಹೇಳಿದ್ದಾರೆ ರಣವೀರ್.

ಇದನ್ನೂ ಓದಿ
Image
ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ
Image
‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡಿದೆ. ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ದಕ್ಷಿಣದ ಸಿನಿಮಾಗಳು ಬಾಲಿವುಡ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುತ್ತಿವೆ. ಈ ಬಗ್ಗೆ ರಣವೀರ್ ಸಿಂಗ್ ಮಾತನಾಡಿದ್ದಾರೆ. ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ನಾನು ಒಬ್ಬ ಕಲಾವಿದ. ನಾನು ನಿರ್ಮಾಪಕ ಅಥವಾ ಬಿಸ್ನೆಸ್​​ಮ್ಯಾನ್ ಅಲ್ಲದ ಕಾರಣ ಸಿನಿಮಾ ವ್ಯವಹಾರದ ಬಗ್ಗೆ ನನಗೆ ಹೆಚ್ಚಿನ ಜ್ಞಾನವಿಲ್ಲ. ನಾನು ಹಣ ಪಡೆದು ನಟಿಸುತ್ತೇನೆ. ಕ್ಯಾಮೆರಾ ಮುಂದೆ ಬರುವುದಕ್ಕೆ ನಾನು ಹಣ ಪಡೆಯುತ್ತೇನೆ. ನನ್ನ ಜ್ಞಾನ ಅದಕ್ಕೆ ಮಾತ್ರ ಸೀಮಿತವಾಗಿದೆ. ಹೀಗಾಗಿ, ನನ್ನ ವೈಯಕ್ತಿಕ ದೃಷ್ಟಿಯಲ್ಲಿ ಹೇಳುವುದಾದರೆ, ಈ ಸಿನಿಮಾಗಳು (ಹಿಂದಿಗೆ ಡಬ್​ ಆಗಿ ತೆರೆಕಂಡ ದಕ್ಷಿಣದ ಸಿನಿಮಾಗಳು) ನಿಜಕ್ಕೂ ಉತ್ತಮ ಸಿನಿಮಾಗಳು ಎಂದಷ್ಟೇ ಹೇಳಬಲ್ಲೆ’ ಎಂಬುದು ರಣವೀರ್ ಸಿಂಗ್ ಮಾತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:47 pm, Thu, 12 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್