AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು

ನನಗೆ ತೆಲುಗು ಮಾತನಾಡಲು ಬರುವುದಿಲ್ಲ. ಆದರೂ ನಾನು ‘ಪುಷ್ಪ’, ‘ಆರ್​ಆರ್​ಆರ್​’ ಸಿನಿಮಾ ನೋಡಿದ್ದೇನೆ. ಆ ಸಿನಿಮಾಗಳ ಬಗ್ಗೆ ನಿಜಕ್ಕೂ ವಿಸ್ಮಯಗೊಂಡೆ ಎಂದಿದ್ದಾರೆ ರಣವೀರ್ ಸಿಂಗ್,

‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು
ರಣವೀರ್-ಯಶ್
TV9 Web
| Edited By: |

Updated on:May 12, 2022 | 1:50 PM

Share

ಬಾಲಿವುಡ್​ಗಿಂತ (Bollywood) ದಕ್ಷಿಣ ಭಾರತದ ಚಿತ್ರರಂಗ ಮೇಲು ಎಂಬ ಮಾತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ‘ಪುಷ್ಪ’, ‘ಆರ್​ಆರ್​ಆರ್’ ಹಾಗೂ ‘ಕೆಜಿಎಫ್ 2’  (KGF: Chapter 2) ಯಶಸ್ಸಿನ ನಂತರ ಈ ಚರ್ಚೆ ಜೋರಾಗಿದೆ. ಬಾಲಿವುಡ್ ಮಂದಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಕೆಲವರು ‘ಬಾಲಿವುಡ್​ ಎಂದಿಗೂ ಗ್ರೇಟ್’ ಎಂದರೆ, ಇನ್ನೂ ಕೆಲವರು ‘ದಕ್ಷಿಣ ಭಾರತದ ಚಿತ್ರರಂಗವನ್ನು ನೋಡಿ ಕಲಿಯಬೇಕಿದೆ, ರಿಮೇಕ್ ಮಾಡುವುದನ್ನು ನಿಲ್ಲಿಸಬೇಕಿದೆ’ ಎಂದು ಹೇಳಿದ್ದಾರೆ. ಈಗ ರಣವೀರ್ ಸಿಂಗ್ (Ranaveer Singh) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಹಂಚಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 13ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ‘83’ ನಂತರ ಬಿಡುಗಡೆ ಆಗುತ್ತಿರುವ ಅವರ ಮುಂದಿನ ಸಿನಿಮಾ ಇದಾಗಿದೆ. ಶಾಲಿನಿ ಪಾಂಡೆ ಅವರು ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾದಲ್ಲಿ ನಾಯಕಿ ಆಗಿದ್ದಾರೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ರಣವೀರ್​ ಸಿಂಗ್​ ಭಾಗಿ ಆಗುತ್ತಿದ್ದಾರೆ. ಈ ವೇಳೆ ಅವರು ಬಾಲಿವುಡ್ vs ದಕ್ಷಿಣ ಭಾರತದ ಸಿನಿಮಾ ಎಂಬ ಚರ್ಚೆ ಕುರಿತು ಮಾತನಾಡಿದ್ದಾರೆ.

‘ನನಗೆ ತೆಲುಗು ಮಾತನಾಡಲು ಬರುವುದಿಲ್ಲ. ಆದರೂ ನಾನು ‘ಪುಷ್ಪ’, ‘ಆರ್​ಆರ್​ಆರ್​’ ಸಿನಿಮಾ ನೋಡಿದ್ದೇನೆ. ಆ ಸಿನಿಮಾಗಳ ಬಗ್ಗೆ ನಿಜಕ್ಕೂ ವಿಸ್ಮಯಗೊಂಡೆ. ಸಿನಿಮಾ ಮೇಕಿಂಗ್​​ಅನ್ನು ನಾನು ಪ್ರಶಂಸಿಸುತ್ತೇನೆ. ಬೇರೆಬೇರೆ ವಲಯದ ಪ್ರೇಕ್ಷಕರು ಈ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವುಗಳೆಲ್ಲವೂ ನಮ್ಮ ಚಿತ್ರಗಳು. ಭಾರತೀಯ ಸಿನಿಮಾ ಅನ್ನೋದು ಒಂದೇ’ ಎಂದು ಹೇಳಿದ್ದಾರೆ ರಣವೀರ್.

ಇದನ್ನೂ ಓದಿ
Image
ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ
Image
‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡಿದೆ. ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ದಕ್ಷಿಣದ ಸಿನಿಮಾಗಳು ಬಾಲಿವುಡ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುತ್ತಿವೆ. ಈ ಬಗ್ಗೆ ರಣವೀರ್ ಸಿಂಗ್ ಮಾತನಾಡಿದ್ದಾರೆ. ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ನಾನು ಒಬ್ಬ ಕಲಾವಿದ. ನಾನು ನಿರ್ಮಾಪಕ ಅಥವಾ ಬಿಸ್ನೆಸ್​​ಮ್ಯಾನ್ ಅಲ್ಲದ ಕಾರಣ ಸಿನಿಮಾ ವ್ಯವಹಾರದ ಬಗ್ಗೆ ನನಗೆ ಹೆಚ್ಚಿನ ಜ್ಞಾನವಿಲ್ಲ. ನಾನು ಹಣ ಪಡೆದು ನಟಿಸುತ್ತೇನೆ. ಕ್ಯಾಮೆರಾ ಮುಂದೆ ಬರುವುದಕ್ಕೆ ನಾನು ಹಣ ಪಡೆಯುತ್ತೇನೆ. ನನ್ನ ಜ್ಞಾನ ಅದಕ್ಕೆ ಮಾತ್ರ ಸೀಮಿತವಾಗಿದೆ. ಹೀಗಾಗಿ, ನನ್ನ ವೈಯಕ್ತಿಕ ದೃಷ್ಟಿಯಲ್ಲಿ ಹೇಳುವುದಾದರೆ, ಈ ಸಿನಿಮಾಗಳು (ಹಿಂದಿಗೆ ಡಬ್​ ಆಗಿ ತೆರೆಕಂಡ ದಕ್ಷಿಣದ ಸಿನಿಮಾಗಳು) ನಿಜಕ್ಕೂ ಉತ್ತಮ ಸಿನಿಮಾಗಳು ಎಂದಷ್ಟೇ ಹೇಳಬಲ್ಲೆ’ ಎಂಬುದು ರಣವೀರ್ ಸಿಂಗ್ ಮಾತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:47 pm, Thu, 12 May 22

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ