AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranveer Singh: ರಣವೀರ್​ ಸಿಂಗ್​-ದೀಪಿಕಾ ಪಡುಕೋಣೆ ಡಿವೋರ್ಸ್​ ವದಂತಿ; ಒಂದೇ ಫೋಟೋದಿಂದ ಫುಲ್​ಸ್ಟಾಪ್​ ಹಾಕಿದ ನಟ

Deepika Padukone: ರಣವೀರ್​ ಸಿಂಗ್​ ಹುಟ್ಟುಹಬ್ಬಕ್ಕೆ ದೀಪಿಕಾ ಪಡುಕೋಣೆ ಅವರ ಕಡೆಯಿಂದ ಯಾವುದೇ ವಿಶ್​ ಬರಲಿಲ್ಲ. ಇದು ನೆಟ್ಟಿಗರ ಅನುಮಾನಕ್ಕೆ ಕಾರಣ ಆಯಿತು.

Ranveer Singh: ರಣವೀರ್​ ಸಿಂಗ್​-ದೀಪಿಕಾ ಪಡುಕೋಣೆ ಡಿವೋರ್ಸ್​ ವದಂತಿ; ಒಂದೇ ಫೋಟೋದಿಂದ ಫುಲ್​ಸ್ಟಾಪ್​ ಹಾಕಿದ ನಟ
ರಣವೀರ್ ಸಿಂಗ್​, ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on: Jul 10, 2023 | 5:32 PM

Share

ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ಅನೇಕ ಗಾಸಿಪ್​ಗಳು ಹಬ್ಬುತ್ತ ಇರುತ್ತವೆ. ಅದರಲ್ಲೂ ಲವ್​, ಬ್ರೇಕಪ್​, ಮದುವೆ, ವಿಚ್ಛೇದನದ (Divorce) ವಿಚಾರದಲ್ಲಿ ವದಂತಿಗಳಿಗೆ ಲೆಕ್ಕವೇ ಇಲ್ಲ. ಇತ್ತೀಚೆಗೆ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್​ ಸಿಂಗ್​ ಅವರ ದಾಂಪತ್ಯದ ಬಗ್ಗೆ ಗಾಸಿಪ್​ ಮಂದಿಗೆ ಆಸಕ್ತಿ ಕೆರಳಿದೆ. ಈ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂದು ವದಂತಿ ಹಬ್ಬಿಸಲಾಗಿದೆ. ಆದಷ್ಟು ಬೇಗ ರಣವೀರ್​ ಸಿಂಗ್​ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಡಿವೋರ್ಸ್​ ಪಡೆಯಬಹುದು ಎಂದೆಲ್ಲ ಗಾಳಿಸುದ್ದಿ ಹರಡಿಸಲಾಗಿತ್ತು. ಆದರೆ ಆ ವದಂತಿಯನ್ನು ರಣವೀರ್​ ಸಿಂಗ್​ ತಳ್ಳಿ ಹಾಕಿದ್ದಾರೆ. ಪತ್ನಿ ಜೊತೆಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಡಿವೋರ್ಸ್​ ವದಂತಿ ಹುಟ್ಟಿದ್ದು ಹೇಗೆ?

ಜುಲೈ 6ರಂದು ರಣವೀರ್​ ಸಿಂಗ್​ ಅವರ ಜನ್ಮದಿನ. ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಆದರೆ ದೀಪಿಕಾ ಪಡುಕೋಣೆ ಅವರ ಕಡೆಯಿಂದ ಯಾವುದೇ ವಿಶ್​ ಬರಲಿಲ್ಲ. ಇದು ನೆಟ್ಟಿಗರ ಅನುಮಾನಕ್ಕೆ ಕಾರಣ ಆಯಿತು. ಸೋಶಿಯಲ್​ ಮೀಡಿಯಾದಲ್ಲಿ ಪರಸ್ಪರ ವಿಶ್​ ಮಾಡಿಕೊಳ್ಳುತ್ತಿದ್ದ ಈ ದಂಪತಿ ಈಗ ಸೈಲೆಂಟ್​ ಆಗಿದ್ದು ನೋಡಿ ಎಲ್ಲರಿಗೂ ಅನುಮಾನ ಮೂಡಿತು. ಆದರೆ ಸ್ವಲ್ಪ ಸಮಯದಲ್ಲೇ ಅದು ಕ್ಲಿಯರ್​ ಆಯಿತು.

ಇದನ್ನೂ ಓದಿ: Asin: ಡಿವೋರ್ಸ್​ ವದಂತಿಗೆ ತೆರೆ ಎಳೆದ ನಟಿ ಆಸಿನ್​; ನಿಟ್ಟುಸಿರು ಬಿಟ್ಟ ಅಭಿಮಾನಿಗಳು

ಒಂದು ದಿನ ತಡವಾಗಿ ವಿಶ್​ ಮಾಡಿದ ದೀಪಿಕಾ ಪಡುಕೋಣೆ:

ಪತಿ ರಣವೀರ್ ಸಿಂಗ್​ ಜನ್ಮದಿನಕ್ಕೆ ಶುಭ ಕೋರಲು ದೀಪಿಕಾ ಪಡುಕೋಣೆ ಮರೆತಿದ್ದರು ಎನಿಸುತ್ತದೆ. ಒಂದು ದಿನ ತಡವಾಗಿ, ಅಂದರೆ ಜುಲೈ 7ರ ರಾತ್ರಿ ದೀಪಿಕಾ ಅವರು ಪತಿಗೆ ಹುಟ್ಟುಹಬ್ಬದ ವಿಶ್​ ಮಾಡಿದರು. ಅಲ್ಲಿಗೆ ಎಲ್ಲರ ಅನುಮಾನಕ್ಕೆ ತೆರೆ ಬಿತ್ತು. ಅದೂ ಸಾಲದೆಂಬಂತೆ ಈಗ ರಣವೀರ್​ ಸಿಂಗ್​ ಕೂಡ ಪತ್ನಿಗೆ ಧನ್ಯವಾದ ತಿಳಿಸುವ ಮೂಲಕ ಎಲ್ಲ ವದಂತಿಗಳಿಗೆ ಪೂರ್ಣವಿರಾಮ ಹಾಕಿದ್ದಾರೆ.

ಇದನ್ನೂ ಓದಿ: Ranveer Singh: ‘ವೈರಲ್​ ಆದ ಆ ಫೋಟೋ ನಂದಲ್ಲ’: ವಿಚಾರಣೆ ವೇಳೆ ಶಾಕಿಂಗ್​ ವಿಚಾರ ತಿಳಿಸಿದ ರಣವೀರ್​ ಸಿಂಗ್​

ವೈರಲ್​ ಆಗಿದೆ ಹೊಸ ಫೋಟೋ:

ದೀಪಿಕಾ ಪಡುಕೋಣೆ ಜೊತೆ ಖುಷಿಯಾಗಿ ಕಾಲ ಕಳೆದ ಫೋಟೋವನ್ನು ರಣವೀರ್​ ಸಿಂಗ್​ ಅವರು ಶೇರ್​ ಮಾಡಿಕೊಂಡಿದ್ದಾರೆ. ‘ಹುಟ್ಟುಹಬ್ಬದ ಶುಭ ಕೋರಿದ್ದಕ್ಕೆ ಧನ್ಯವಾದಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ದಂಪತಿ ನಡುವೆ ಯಾವುದೇ ಕಿರಿಕ್​ ಇಲ್ಲ ಎಂಬುದು ಸ್ಪಷ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ