AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವ ಹಾಗೂ ಮೋದಿ ಜನ್ಮದಿನಕ್ಕೆ ಸಾವಿರ ವಿದ್ಯಾರ್ಥಿನಿಯರ ಶಿಕ್ಷಣ ಜವಾಬ್ದಾರಿ ಹೊತ್ತ ರಣವೀರ್

ಬಾಲಿವುಡ್ ನಟ ರಣವೀರ್ ಸಿಂಗ್ ಮುಂಬೈನ ಪ್ರಸಿದ್ಧ ಲಾಲ್‌ಬಾಗ್‌ಚಾ ರಾಜ ಗಣಪತಿಯ ದರ್ಶನ ಪಡೆದು ಧನ್ಯತೆ ಮೆರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಾಗೂ ಗಣೇಶ ಚತುರ್ಥಿ ನಿಮಿತ್ತ 'ಸೇವಾ ಸಂಕಲ್ಪ ಅಭಿಯಾನ'ದಡಿ 1,000 ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವಾಗುವುದಾಗಿ ನಟ ಹೇಳಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗಣೇಶೋತ್ಸವ ಹಾಗೂ ಮೋದಿ ಜನ್ಮದಿನಕ್ಕೆ ಸಾವಿರ ವಿದ್ಯಾರ್ಥಿನಿಯರ ಶಿಕ್ಷಣ ಜವಾಬ್ದಾರಿ ಹೊತ್ತ ರಣವೀರ್
ರಣವೀರ್
ರಾಜೇಶ್ ದುಗ್ಗುಮನೆ
|

Updated on: Sep 18, 2026 | 10:59 AM

Share

ಮುಖ್ಯಾಂಶಗಳು

  • ಲಾಲ್‌ಬಾಗ್‌ಚಾ ರಾಜನ ಪಾದಕ್ಕೆ ಎರಗಿದ ರಣವೀರ್ ಸಿಂಗ್
  • 'ಧುರಂಧರ್ 2' ಯಶಸ್ಸಿಗೆ ಬಪ್ಪನಿಗೆ ಧನ್ಯವಾದ
  • 1,000 ಹೆಣ್ಣುಮಕ್ಕಳ ಶಿಕ್ಷಣಕ್ಕೆ ರಣವೀರ್ ನೆರವು 

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಮುಂಬೈನ ಪ್ರಸಿದ್ಧ ಲಾಲ್‌ಬಾಗ್‌ಚಾ ರಾಜ ಗಣಪತಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ವರ್ಷ ಅವರಿಗೆ ಸಿನಿಮಾವಷ್ಟೇ ಅಲ್ಲದೆ ವೈಯಕ್ತಿಕ ಜೀವನದಲ್ಲೂ ಹಲವು ಖುಷಿಯ ಘಟನೆಗಳು ನಡೆದಿವೆ. ಹೀಗಾಗಿ ಗಣೇಶನಿಗೆ ಕೃತಜ್ಞತೆ ಸಲ್ಲಿಸಲು ಅವರು ಆಗಮಿಸಿದ್ದರು. ಇದೇ ವೇಳೆಯಲ್ಲಿ ರಣವೀರ್ ಒಂದು ಮಹತ್ವದ ಮತ್ತು ಪ್ರಶಂಸನೀಯ ನಿರ್ಧಾರವನ್ನು ಕೈಗೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಅವರು ಮತ್ತು ಪತ್ನಿ ದೀಪಿಕಾ ಪಡುಕೋಣೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಗಣಪನ ಆಶೀರ್ವಾದದಿಂದ ತಮ್ಮ ಕುಟುಂಬದಲ್ಲಿ ಸಂತಸ ಮನೆಮಾಡಿದೆ ಎಂದು ನಟ ಹೇಳಿದ್ದಾರೆ. ಮುಂಬರುವ ಜೀವನದ ಹಾದಿಗೆ ಗಣಪತಿ ಬಪ್ಪನ ಕೃಪೆ ಹೀಗೆಯೇ ಇರಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಲಾಲ್‌ಬಾಗ್‌ಚಾ ರಾಜನ ದರ್ಶನದ ವೇಳೆ ರಣವೀರ್ ಬಿಳಿ ಬಣ್ಣದ ಉಡುಪಿನಲ್ಲಿ ಮಿಂಚಿದರು. ತಮ್ಮ ಮುಂಬರುವ ‘ಪ್ರಳಯ್’ ಚಿತ್ರದ ಹೊಸ ಲುಕ್‌ನಲ್ಲಿ ಅವರು ಕಂಗೊಳಿಸುತ್ತಿದ್ದರು. ಮಂಟಪದ ಬಳಿ ಸೇರಿದ್ದ ಅಭಿಮಾನಿಗಳ ಜೊತೆ ಅವರು ಪ್ರೀತಿಯಿಂದ ಸಂಭಾಷಣೆ ನಡೆಸಿದರು. ಸೆಲ್ಫಿ ಹಾಗೂ ಫೋಟೋಗಳಿಗೆ ಪೋಸ್ ನೀಡುವ ಮೂಲಕ ಅಭಿಮಾನಿಗಳ ಮನ ಗೆದ್ದರು.

ಗಣೇಶ ಚತುರ್ಥಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ರಣವೀರ್ ದೊಡ್ಡ ನಿರ್ಧಾರ ಒಂದನ್ನು ಪ್ರಕಟಿಸಿದ್ದಾರೆ. ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ 1,000 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿ ಹೊರಲು ಅವರು ಸಂಕಲ್ಪ ಮಾಡಿದ್ದಾರೆ. ಈ ಸಾಮಾಜಿಕ ಕಾರ್ಯದಿಂದ ಬಪ್ಪನ ಅನುಗ್ರಹ ಸಿಗಲಿದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಗಳು ದುವಾ ಹುಟ್ಟುಹಬ್ಬದಂದೇ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ, ರಣವೀರ್ ಸಿಂಗ್

ರಣವೀರ್ ಮತ್ತು ದೀಪಿಕಾ ದಂಪತಿಗೆ ಈಗಾಗಲೇ ದುವಾ ಪಡುಕೋಣೆ ಸಿಂಗ್ ಎಂಬ ಮುದ್ದಾದ ಮಗಳಿದ್ದಾಳೆ. ಇತ್ತೀಚೆಗೆ ಮುಖೇಶ್ ಅಂಬಾನಿ ನಿವಾಸದಲ್ಲಿ ನಡೆದ ಗಣೇಶ ಪೂಜೆಯಲ್ಲೂ ರಣವೀರ್ ಒಂಟಿಯಾಗಿ ಭಾಗವಹಿಸಿದ್ದರು. ಸಾಲು ಸಾಲು ಹಿಟ್ ಸಿನಿಮಾಗಳು ಹಾಗೂ ಸಮಾಜಮುಖಿ ಕೆಲಸಗಳ ಮೂಲಕ ರಣವೀರ್ ಸಿಂಗ್ ಇದೀಗ ಎಲ್ಲೆಡೆ ಸಖತ್ ಸುದ್ದಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ