AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬಾ,‘ಧುರಂಧರ್’ ಭಾನುವಾರದ ಗಳಿಕೆ ಇಷ್ಟೊಂದಾ? ಕೊನೆಗೂ ಗೆದ್ದ ರಣವೀರ್ ಸಿಂಗ್

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿ ದಾಖಲೆ ಸೃಷ್ಟಿಸಿದೆ. ಭಾನುವಾರ ಒಂದೇ ದಿನ 40 ಕೋಟಿ ಗಳಿಸಿದ್ದು, ಚಿತ್ರರಂಗದಲ್ಲಿ ರಣವೀರ್ ಸಿಂಗ್‌ಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ವಿವಾದಗಳನ್ನು ಮೆಟ್ಟಿ ನಿಂತು ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ಅಬ್ಬಬಾ,‘ಧುರಂಧರ್’ ಭಾನುವಾರದ ಗಳಿಕೆ ಇಷ್ಟೊಂದಾ? ಕೊನೆಗೂ ಗೆದ್ದ ರಣವೀರ್ ಸಿಂಗ್
ಧುರಂಧರ್
ರಾಜೇಶ್ ದುಗ್ಗುಮನೆ
|

Updated on: Dec 08, 2025 | 7:29 AM

Share

ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಾಣದೇ ಬಹಳ ಸಮಯ ಆಗಿತ್ತು. ‘ಧುರಂಧರ್’ ಸಿನಿಮಾ ಅವರಿಗೆ ಅಂತಹ ಒಂದು ದೊಡ್ಡ ಗೆಲುವು ತಂದುಕೊಟ್ಟಿದೆ. ರಿಲೀಸ್​ಗೂ ಮೊದಲೇ ಆದ ವಿವಾದ, ಚಿತ್ರದ ಬಗ್ಗೆ ಸೃಷ್ಟಿ ಆದ ನೆಗೆಟಿವ್ ಟಾಕ್​ಗಳನ್ನು ರಣವೀರ್​ ಸಿಂಗ್ (Ranveer Singh) ಚಿತ್ರ ಮೆಟ್ಟಿ ನಿಂತಿದೆ. ಈ ಮೂಲಕ ಚಿತ್ರದ ಗಳಿಕೆ ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಆಗಿದೆ. ಇದು ಡಿಸೆಂಬರ್ ಸಮಯ. ಕ್ರಿಸ್​ಮಸ್​ ರಜೆಗಳು ಚಿತ್ರದ ಗಳಿಕೆ ಹೆಚ್ಚುವಲ್ಲಿ ಸಹಕಾರಿ ಆಗಲಿದೆ.

‘ಧುರಂಧರ್’ ಸಿನಿಮಾ ಸ್ಪೈ ಚಿತ್ರ. ‘ಉರಿ’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದ ಆದಿತ್ಯ ಧಾರ್ ಅವರು ‘ಧುರಂಧರ್’ ಚಿತ್ರ ನಿರ್ದೇಶನ ಮಾಡಿದ್ದಾರೆ. ಪ್ರೀ ಬುಕಿಂಗ್ ಹೆಚ್ಚಾಗಿ ಆಗದ ಕಾರಣ ಈ ಸಿನಿಮಾ ಮೊದಲ ದಿನ (ಡಿಸೆಂಬರ್ 5) 18-20 ಕೋಟಿ ರೂಪಾಯಿ ಗಳಿಸಬಹುದು ಎಂದು ಬಾಕ್ಸ್ ಆಫೀಸ್ ಪಂಡಿತರು ಅಂದಾಜಿಸಿದ್ದರು. ಆದರೆ, ಆ ಲೆಕ್ಕಾಚಾರವನ್ನು ಸಿನಿಮಾ ಮೀರಿತ್ತು. ಮೊದಲ ದಿನ ಈ ಚಿತ್ರ ಕಲೆಕ್ಷನ್ ಮಾಡಿದ್ದು 27 ಕೋಟಿ ರೂಪಾಯಿ.

ಎರಡನೇ ದಿನವಾದ ಶನಿವಾರ ಸಿನಿಮಾ 32 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ ಸಿನಿಮಾದ ಗಳಿಕೆ 40 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 100 ಕೋಟಿ ರೂಪಾಯಿ ಸಮೀಪಿಸಿದೆ.

2023ರಲ್ಲಿ ಬಂದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಅದಕ್ಕೂ ಮೊದಲು ಅವರು ದೊಡ್ಡ ಗೆಲುವು ಕಂಡಿದ್ದು 2019ರ ‘ಗಲ್ಲಿ ಬಾಯ್’ ಸಿನಿಮಾದಲ್ಲಿ. ಈಗ ಅವರಿಗೆ ‘ಧುರಂಧರ್’ ಮತ್ತೊಂದು ಗೆಲುವು ತಂದುಕೊಟ್ಟಿದೆ.

ಇದನ್ನೂ ಓದಿ: ವಿರೋಧದ ನಡುವೆಯೂ ಗೆದ್ದ ರಣವೀರ್ ಸಿಂಗ್: ‘ಧುರಂಧರ್’ ಕಲೆಕ್ಷನ್ ಸೂಪರ್

ಇನ್ನು, ‘ಧುರಂಧರ್ 2’ ಸಿನಿಮಾ ರಿಲೀಸ್ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಈದ್ ಪ್ರಯುಕ್ತ ಮಾರ್ಚ್ 19ರಂದು ಈ ಚಿತ್ರ ರಿಲೀಸ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಯಶ್ ನಟನೆಯ ‘ಟಾಕ್ಸಿಕ್’ ಕೂಡ ರಿಲೀಸ್ ಆಗುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಬಿಗ್ ಕ್ಲ್ಯಾಶ್ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!